ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ.

ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?
ವಿಘ್ನೇಶ್​-ನಯನತಾರಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 20, 2021 | 8:51 PM

ಕನ್ನಡದ ‘ಸೂಪರ್​’ ಸಿನಿಮಾದಲ್ಲಿ ಉಪೇಂದ್ರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಕನ್ನಡಿಗರಿಗೆ ಮನರಂಜನೆ ನೀಡಿದ್ದರು ನಟಿ ನಯನತಾರಾ. ಆ ಬಳಿಕ ಅವರು ಕನ್ನಡದ ಯಾವುದೇ ಸಿನಿಮಾದಲ್ಲೂ ನಟಿಸಲಿಲ್ಲ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ಅವರು ‘ಲೇಡಿ ಸೂಪರ್​ ಸ್ಟಾರ್’ ಎಂದೇ ಫೇಮಸ್​. ಸಿನಿಮಾ ಜೊತೆಜೊತೆಗೆ ಅವರು ಖಾಸಗಿ ಜೀವನದ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಶೀಘ್ರವೇ ಇವರ ಮದುವೆ ನಡೆಯಲಿದೆ. ಅಚ್ಚರಿ ಎಂದರೆ, ವಿಘ್ನೇಶ್​ ಜತೆ ಮದುವೆ ಆಗುವುದಕ್ಕೂ ಮೊದಲು ಅವರು ಮರವನ್ನು ಮದುವೆ ಆಗಲಿದ್ದಾರಂತೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರಿಬ್ಬರ ಮದುವೆ ಪ್ಲ್ಯಾನ್​ ಬಗ್ಗೆ ಪದೇಪದೇ ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಈಗ ಮದುವೆ ಬಗ್ಗೆ ಅಚ್ಚರಿಯ ಸುದ್ದಿ ಕೇಳಿ ಬಂದಿದೆ.

ನಯನತಾರಾ ಹಾಗೂ ವಿಘ್ನೇಶ್​ ಜ್ಯೋತಿಷ್ಯವನ್ನು ಹೆಚ್ಚು ನಂಬುತ್ತಾರೆ. ಈ ಕಾರಣಕ್ಕೆ ಮದುವೆಗೂ ಮೊದಲು ತಮ್ಮ ಜಾತಕವನ್ನು ಅವರು ತೋರಿಸಿದ್ದಾರೆ. ಇದರಲ್ಲಿ ಕೆಲ ದೋಷಗಳು ಕಂಡಿವೆ. ಈ ಕಾರಣಕ್ಕೆ, ಮೊದಲು ಮರವನ್ನು ಮದುವೆ ಆಗಿ, ನಂತರ ವಿಘ್ನೇಶ್​ ಅವರನ್ನು ಮದುವೆ ಆಗುವಂತೆ ಜ್ಯೋತಿಷಿಗಳು ಸೂಚಿಸಿದ್ದಾರೆ.

ಹಿಂದೂ ಧರ್ಮದ ಪ್ರಕಾರ ಮರ ಅಥವಾ ಪ್ರಾಣಿಯನ್ನು ಮದುವೆ ಆದರೆ ದೋಷ ನಿವಾರಣೆ ಆಗುತ್ತದೆ. ಈ ಕೆಲವರು ಇದನ್ನು ನಂಬುತ್ತಾರೆ. ಅದೇ ರೀತಿ ನಯತಾರಾ ಮತ್ತು ಅವರ ಭಾವಿ ಪತಿ ಕೂಡ ಈ ಶಾಸ್ತ್ರದ ಮೇಲೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿ ಅದನ್ನು ಆಚರಿಸೋಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Nayanthara: ಗುಟ್ಟಾಗಿ ಎಂಗೇಜ್​ಮೆಂಟ್ ಆದ ನಯನತಾರಾ ಮದುವೆಗೆ ಎಲ್ಲರನ್ನೂ ಕರೀತಾರಂತೆ

ಸೆಟ್ಟೇರಿತು ಶಾರುಖ್- ನಯನತಾರಾ ನಟನೆಯ ನೂತನ ಚಿತ್ರ; ಬಣ್ಣಹಚ್ಚಲಿದ್ದಾರಾ ಪ್ರಿಯಾಮಣಿ, ರಾಣಾ ದಗ್ಗುಬಾಟಿ?

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್