AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ.

ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?
ವಿಘ್ನೇಶ್​-ನಯನತಾರಾ
TV9 Web
| Edited By: |

Updated on: Oct 20, 2021 | 8:51 PM

Share

ಕನ್ನಡದ ‘ಸೂಪರ್​’ ಸಿನಿಮಾದಲ್ಲಿ ಉಪೇಂದ್ರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಕನ್ನಡಿಗರಿಗೆ ಮನರಂಜನೆ ನೀಡಿದ್ದರು ನಟಿ ನಯನತಾರಾ. ಆ ಬಳಿಕ ಅವರು ಕನ್ನಡದ ಯಾವುದೇ ಸಿನಿಮಾದಲ್ಲೂ ನಟಿಸಲಿಲ್ಲ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ಅವರು ‘ಲೇಡಿ ಸೂಪರ್​ ಸ್ಟಾರ್’ ಎಂದೇ ಫೇಮಸ್​. ಸಿನಿಮಾ ಜೊತೆಜೊತೆಗೆ ಅವರು ಖಾಸಗಿ ಜೀವನದ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಶೀಘ್ರವೇ ಇವರ ಮದುವೆ ನಡೆಯಲಿದೆ. ಅಚ್ಚರಿ ಎಂದರೆ, ವಿಘ್ನೇಶ್​ ಜತೆ ಮದುವೆ ಆಗುವುದಕ್ಕೂ ಮೊದಲು ಅವರು ಮರವನ್ನು ಮದುವೆ ಆಗಲಿದ್ದಾರಂತೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರಿಬ್ಬರ ಮದುವೆ ಪ್ಲ್ಯಾನ್​ ಬಗ್ಗೆ ಪದೇಪದೇ ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಈಗ ಮದುವೆ ಬಗ್ಗೆ ಅಚ್ಚರಿಯ ಸುದ್ದಿ ಕೇಳಿ ಬಂದಿದೆ.

ನಯನತಾರಾ ಹಾಗೂ ವಿಘ್ನೇಶ್​ ಜ್ಯೋತಿಷ್ಯವನ್ನು ಹೆಚ್ಚು ನಂಬುತ್ತಾರೆ. ಈ ಕಾರಣಕ್ಕೆ ಮದುವೆಗೂ ಮೊದಲು ತಮ್ಮ ಜಾತಕವನ್ನು ಅವರು ತೋರಿಸಿದ್ದಾರೆ. ಇದರಲ್ಲಿ ಕೆಲ ದೋಷಗಳು ಕಂಡಿವೆ. ಈ ಕಾರಣಕ್ಕೆ, ಮೊದಲು ಮರವನ್ನು ಮದುವೆ ಆಗಿ, ನಂತರ ವಿಘ್ನೇಶ್​ ಅವರನ್ನು ಮದುವೆ ಆಗುವಂತೆ ಜ್ಯೋತಿಷಿಗಳು ಸೂಚಿಸಿದ್ದಾರೆ.

ಹಿಂದೂ ಧರ್ಮದ ಪ್ರಕಾರ ಮರ ಅಥವಾ ಪ್ರಾಣಿಯನ್ನು ಮದುವೆ ಆದರೆ ದೋಷ ನಿವಾರಣೆ ಆಗುತ್ತದೆ. ಈ ಕೆಲವರು ಇದನ್ನು ನಂಬುತ್ತಾರೆ. ಅದೇ ರೀತಿ ನಯತಾರಾ ಮತ್ತು ಅವರ ಭಾವಿ ಪತಿ ಕೂಡ ಈ ಶಾಸ್ತ್ರದ ಮೇಲೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿ ಅದನ್ನು ಆಚರಿಸೋಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Nayanthara: ಗುಟ್ಟಾಗಿ ಎಂಗೇಜ್​ಮೆಂಟ್ ಆದ ನಯನತಾರಾ ಮದುವೆಗೆ ಎಲ್ಲರನ್ನೂ ಕರೀತಾರಂತೆ

ಸೆಟ್ಟೇರಿತು ಶಾರುಖ್- ನಯನತಾರಾ ನಟನೆಯ ನೂತನ ಚಿತ್ರ; ಬಣ್ಣಹಚ್ಚಲಿದ್ದಾರಾ ಪ್ರಿಯಾಮಣಿ, ರಾಣಾ ದಗ್ಗುಬಾಟಿ?

Follow Us
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ