AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ.

ಪ್ರಿಯಕರನ​ ಬದಲು ಮರದ ಜತೆ ನಯನತಾರಾ ಮದುವೆ; ಏನಿದು ಸಮಾಚಾರ?
ವಿಘ್ನೇಶ್​-ನಯನತಾರಾ
TV9 Web
| Edited By: |

Updated on: Oct 20, 2021 | 8:51 PM

Share

ಕನ್ನಡದ ‘ಸೂಪರ್​’ ಸಿನಿಮಾದಲ್ಲಿ ಉಪೇಂದ್ರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಕನ್ನಡಿಗರಿಗೆ ಮನರಂಜನೆ ನೀಡಿದ್ದರು ನಟಿ ನಯನತಾರಾ. ಆ ಬಳಿಕ ಅವರು ಕನ್ನಡದ ಯಾವುದೇ ಸಿನಿಮಾದಲ್ಲೂ ನಟಿಸಲಿಲ್ಲ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ಅವರು ‘ಲೇಡಿ ಸೂಪರ್​ ಸ್ಟಾರ್’ ಎಂದೇ ಫೇಮಸ್​. ಸಿನಿಮಾ ಜೊತೆಜೊತೆಗೆ ಅವರು ಖಾಸಗಿ ಜೀವನದ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಶೀಘ್ರವೇ ಇವರ ಮದುವೆ ನಡೆಯಲಿದೆ. ಅಚ್ಚರಿ ಎಂದರೆ, ವಿಘ್ನೇಶ್​ ಜತೆ ಮದುವೆ ಆಗುವುದಕ್ಕೂ ಮೊದಲು ಅವರು ಮರವನ್ನು ಮದುವೆ ಆಗಲಿದ್ದಾರಂತೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರಿಬ್ಬರ ಮದುವೆ ಪ್ಲ್ಯಾನ್​ ಬಗ್ಗೆ ಪದೇಪದೇ ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಈಗ ಮದುವೆ ಬಗ್ಗೆ ಅಚ್ಚರಿಯ ಸುದ್ದಿ ಕೇಳಿ ಬಂದಿದೆ.

ನಯನತಾರಾ ಹಾಗೂ ವಿಘ್ನೇಶ್​ ಜ್ಯೋತಿಷ್ಯವನ್ನು ಹೆಚ್ಚು ನಂಬುತ್ತಾರೆ. ಈ ಕಾರಣಕ್ಕೆ ಮದುವೆಗೂ ಮೊದಲು ತಮ್ಮ ಜಾತಕವನ್ನು ಅವರು ತೋರಿಸಿದ್ದಾರೆ. ಇದರಲ್ಲಿ ಕೆಲ ದೋಷಗಳು ಕಂಡಿವೆ. ಈ ಕಾರಣಕ್ಕೆ, ಮೊದಲು ಮರವನ್ನು ಮದುವೆ ಆಗಿ, ನಂತರ ವಿಘ್ನೇಶ್​ ಅವರನ್ನು ಮದುವೆ ಆಗುವಂತೆ ಜ್ಯೋತಿಷಿಗಳು ಸೂಚಿಸಿದ್ದಾರೆ.

ಹಿಂದೂ ಧರ್ಮದ ಪ್ರಕಾರ ಮರ ಅಥವಾ ಪ್ರಾಣಿಯನ್ನು ಮದುವೆ ಆದರೆ ದೋಷ ನಿವಾರಣೆ ಆಗುತ್ತದೆ. ಈ ಕೆಲವರು ಇದನ್ನು ನಂಬುತ್ತಾರೆ. ಅದೇ ರೀತಿ ನಯತಾರಾ ಮತ್ತು ಅವರ ಭಾವಿ ಪತಿ ಕೂಡ ಈ ಶಾಸ್ತ್ರದ ಮೇಲೆ ನಂಬಿಕೆ ಇಟ್ಟಿದ್ದಾರೆ. ಹೀಗಾಗಿ ಅದನ್ನು ಆಚರಿಸೋಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: Nayanthara: ಗುಟ್ಟಾಗಿ ಎಂಗೇಜ್​ಮೆಂಟ್ ಆದ ನಯನತಾರಾ ಮದುವೆಗೆ ಎಲ್ಲರನ್ನೂ ಕರೀತಾರಂತೆ

ಸೆಟ್ಟೇರಿತು ಶಾರುಖ್- ನಯನತಾರಾ ನಟನೆಯ ನೂತನ ಚಿತ್ರ; ಬಣ್ಣಹಚ್ಚಲಿದ್ದಾರಾ ಪ್ರಿಯಾಮಣಿ, ರಾಣಾ ದಗ್ಗುಬಾಟಿ?

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ