AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಪರ್’ ಚಿತ್ರದ ನಟಿ ನಯನತಾರಾ ಎಂಗೇಜ್​​ಮೆಂಟ್​; ಇಲ್ಲಿದೆ ರಿಂಗ್​ ಜೊತೆ ವಿಡಿಯೋ ಸಾಕ್ಷಿ

Nayanthara Engagement: ‘ಮದುವೆಗಾಗಿ ನಾನು ಮತ್ತು ನಯನತಾರಾ ಹಣ ಉಳಿತಾಯ ಮಾಡುತ್ತಿದ್ದೇವೆ. ಯಾಕೆಂದರೆ ಮದುವೆಗೆ ಹೆಚ್ಚು ಖರ್ಚಾಗಲಿದೆ’ ಎಂದು ವಿಘ್ನೇಶ್​ ಶಿವನ್​ ಹೇಳಿದ್ದರು. ಈಗ ನಯನತಾರಾ ಕೂಡ ಬಾಯಿ ಬಿಟ್ಟಿದ್ದಾರೆ.

‘ಸೂಪರ್’ ಚಿತ್ರದ ನಟಿ ನಯನತಾರಾ ಎಂಗೇಜ್​​ಮೆಂಟ್​; ಇಲ್ಲಿದೆ ರಿಂಗ್​ ಜೊತೆ ವಿಡಿಯೋ ಸಾಕ್ಷಿ
ವಿಘ್ನೇಶ್​ ಶಿವನ್​, ನಯನತಾರಾ
TV9 Web
| Edited By: |

Updated on: Aug 11, 2021 | 11:53 AM

Share

ಕನ್ನಡದ ‘ಸೂಪರ್​’ ಸಿನಿಮಾದಲ್ಲಿ ಉಪೇಂದ್ರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಕನ್ನಡಿಗರಿಗೆ ಮನರಂಜನೆ ನೀಡಿದ್ದರು ನಟಿ ನಯನತಾರಾ (Nayanthara). ಆ ಬಳಿಕ ಅವರು ಕನ್ನಡದ ಯಾವುದೇ ಸಿನಿಮಾದಲ್ಲೂ ನಟಿಸಲಿಲ್ಲ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ಅವರು ‘ಲೇಡಿ ಸೂಪರ್​ ಸ್ಟಾರ್’ ಎಂದೇ ಫೇಮಸ್​. ಸಿನಿಮಾ ಜೊತೆಜೊತೆಗೆ ಅವರು ಖಾಸಗಿ ಜೀವನದ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ನಿರ್ದೇಶಕ ವಿಘ್ನೇಶ್​ ಶಿವನ್​ (Vignesh Shivan) ಜೊತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈಗ ಅವರಿಬ್ಬರು ಎಂಗೇಜ್​ಮೆಂಟ್​ (Engagement) ಕೂಡ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ. ಈ ಮೂಲಕ ಶೀಘ್ರದಲ್ಲೇ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಹಸೆಮಣೆ ಏರುತ್ತಾರೆ ಎಂಬದು ಖಚಿತವಾಗಿದೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರಿಬ್ಬರ ಮದುವೆ ಪ್ಲ್ಯಾನ್​ ಬಗ್ಗೆ ಪದೇಪದೇ ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಅದಕ್ಕೀಗ ಪುಷ್ಠಿ ನೀಡುವಂತಹ ಮಾತುಗಳನ್ನು ಸ್ವತಃ ನಯನತಾರಾ ಹೇಳಿದ್ದಾರೆ.

ತಮಿಳಿನ ಸ್ಟಾರ್​ ವಿಜಯ್​ ಟಿವಿಯ ಕಾರ್ಯಕ್ರಮವೊಂದಕ್ಕೆ ನಯನತಾರಾ ಅತಿಥಿಯಾಗಿ ಹೋಗಿದ್ದರು. ಆ ಕಾರ್ಯಕ್ರಮದ ನಡುವೆ ಅವರು ತಮ್ಮ ಎಂಗೇಜ್​ಮೆಂಟ್​ ರಿಂಗ್​ ತೋರಿಸಿದ್ದಾರೆ. ವಿಘ್ನೇಶ್ ಶಿವನ್​ ಕುರಿತಾಗಿಯೂ ನಿರೂಪಕಿ ಪ್ರಶ್ನೆ ಕೇಳಿದ್ದು, ಅದಕ್ಕೂ ಅವರು ಉತ್ತರಿಸಿದ್ದಾರೆ. ಸದ್ಯ ಈ ಪ್ರೋಮೋ ವೈರಲ್​ ಆಗುತ್ತಿದೆ. ಆ.15ರಂದು ಈ ಸಂಚಿಕೆ ಪ್ರಸಾರವಾಗಲಿದೆ. ನಯನತಾರಾ ಅವರ ಪೂರ್ತಿ ಮಾತುಗಳನ್ನು ಕೇಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಮದುವೆ ಯಾವಾಗ ಎಂಬ ಬಗ್ಗೆ ಇತ್ತೀಚೆಗೆ ವಿಘ್ನೇಶ್​ ಶಿವನ್​ ಅವರಿಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದರು. ಅದಕ್ಕೆ ಉತ್ತರಿಸಿದ್ದ ಅವರು, ‘ಮದುವೆಗಾಗಿ ನಾನು ಮತ್ತು ನಯನತಾರಾ ಹಣ ಉಳಿತಾಯ ಮಾಡುತ್ತಿದ್ದೇವೆ. ಯಾಕೆಂದರೆ ಮದುವೆಗೆ ಹೆಚ್ಚು ಖರ್ಚಾಗಲಿದೆ. ಅಲ್ಲದೇ, ಕೊರೊನಾ ಪ್ರಕರಣ ಕಡಿಮೆ ಆಗಲಿ ಅಂತ ಕಾಯುತ್ತಿದ್ದೇವೆ’ ಎಂದು ಹೇಳಿದ್ದರು. ಆದರೆ ಎಂಗೇಜ್​​ಮೆಂಟ್​ ಆಗಿರುವ ಬಗ್ಗೆ ಅವರು ಬಾಯಿ ಬಿಟ್ಟಿರಲಿಲ್ಲ. ಸಿನಿಮಾ ವಿಚಾರಕ್ಕೆ ಬರುವುದಾದರೆ, ‘ಕಾಥು ವಾಕುಲ ರೆಂಡು ಕಾದಲ್​’ ಚಿತ್ರವನ್ನು ವಿಘ್ನೇಶ್​ ನಿರ್ದೇಶಿಸುತ್ತಿದ್ದಾರೆ. ಆ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ, ಸಮಂತಾ ಅಕ್ಕಿನೇನಿ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಕೊವಿಡ್​ ಲಸಿಕೆ ವಿಚಾರದಲ್ಲಿ ಗೋಲ್​ಮಾಲ್​ ಮಾಡಿದ್ರಾ ನಯನತಾರಾ? ಫೋಟೋ ತೆರೆದಿಟ್ಟ ಅಸಲಿ ಕಥೆ ಇಲ್ಲಿದೆ

ನಯನತಾರಾ-ಉದಯನಿಧಿ ಲಿವ್​ಇನ್​ನಲ್ಲಿದ್ದರೆ ನಾನೇನು ಮಾಡಲಿ?: ವಿವಾದ ಎಬ್ಬಿಸಿದ ಹೇಳಿಕೆ

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ