AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಪರ್’ ಚಿತ್ರದ ನಟಿ ನಯನತಾರಾ ಎಂಗೇಜ್​​ಮೆಂಟ್​; ಇಲ್ಲಿದೆ ರಿಂಗ್​ ಜೊತೆ ವಿಡಿಯೋ ಸಾಕ್ಷಿ

Nayanthara Engagement: ‘ಮದುವೆಗಾಗಿ ನಾನು ಮತ್ತು ನಯನತಾರಾ ಹಣ ಉಳಿತಾಯ ಮಾಡುತ್ತಿದ್ದೇವೆ. ಯಾಕೆಂದರೆ ಮದುವೆಗೆ ಹೆಚ್ಚು ಖರ್ಚಾಗಲಿದೆ’ ಎಂದು ವಿಘ್ನೇಶ್​ ಶಿವನ್​ ಹೇಳಿದ್ದರು. ಈಗ ನಯನತಾರಾ ಕೂಡ ಬಾಯಿ ಬಿಟ್ಟಿದ್ದಾರೆ.

‘ಸೂಪರ್’ ಚಿತ್ರದ ನಟಿ ನಯನತಾರಾ ಎಂಗೇಜ್​​ಮೆಂಟ್​; ಇಲ್ಲಿದೆ ರಿಂಗ್​ ಜೊತೆ ವಿಡಿಯೋ ಸಾಕ್ಷಿ
ವಿಘ್ನೇಶ್​ ಶಿವನ್​, ನಯನತಾರಾ
TV9 Web
| Updated By: ಮದನ್​ ಕುಮಾರ್​|

Updated on: Aug 11, 2021 | 11:53 AM

Share

ಕನ್ನಡದ ‘ಸೂಪರ್​’ ಸಿನಿಮಾದಲ್ಲಿ ಉಪೇಂದ್ರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಕನ್ನಡಿಗರಿಗೆ ಮನರಂಜನೆ ನೀಡಿದ್ದರು ನಟಿ ನಯನತಾರಾ (Nayanthara). ಆ ಬಳಿಕ ಅವರು ಕನ್ನಡದ ಯಾವುದೇ ಸಿನಿಮಾದಲ್ಲೂ ನಟಿಸಲಿಲ್ಲ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ಅವರು ‘ಲೇಡಿ ಸೂಪರ್​ ಸ್ಟಾರ್’ ಎಂದೇ ಫೇಮಸ್​. ಸಿನಿಮಾ ಜೊತೆಜೊತೆಗೆ ಅವರು ಖಾಸಗಿ ಜೀವನದ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ನಿರ್ದೇಶಕ ವಿಘ್ನೇಶ್​ ಶಿವನ್​ (Vignesh Shivan) ಜೊತೆ ಅವರು ಬಹುಕಾಲದಿಂದ ಡೇಟಿಂಗ್​ ಮಾಡುತ್ತಿದ್ದಾರೆ. ಈಗ ಅವರಿಬ್ಬರು ಎಂಗೇಜ್​ಮೆಂಟ್​ (Engagement) ಕೂಡ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ. ಈ ಮೂಲಕ ಶೀಘ್ರದಲ್ಲೇ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಹಸೆಮಣೆ ಏರುತ್ತಾರೆ ಎಂಬದು ಖಚಿತವಾಗಿದೆ.

ವಿಘ್ನೇಶ್​ ಶಿವನ್​ ಮತ್ತು ನಯನತಾರಾ ನಡುವಿನ ಪ್ರೇಮ್​ ಕಹಾನಿ ಗುಟ್ಟಾಗಿ ಉಳಿದಿಲ್ಲ. ಪರಸ್ಪರ ಜೊತೆಯಾಗಿ ಕಾಲ ಕಳೆಯುತ್ತಿರುವ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲವನ್ನೂ ಬಹಿರಂಗ ಪಡಿಸಿದ್ದಾರೆ. ಅವರಿಬ್ಬರ ಮದುವೆ ಪ್ಲ್ಯಾನ್​ ಬಗ್ಗೆ ಪದೇಪದೇ ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಅದಕ್ಕೀಗ ಪುಷ್ಠಿ ನೀಡುವಂತಹ ಮಾತುಗಳನ್ನು ಸ್ವತಃ ನಯನತಾರಾ ಹೇಳಿದ್ದಾರೆ.

ತಮಿಳಿನ ಸ್ಟಾರ್​ ವಿಜಯ್​ ಟಿವಿಯ ಕಾರ್ಯಕ್ರಮವೊಂದಕ್ಕೆ ನಯನತಾರಾ ಅತಿಥಿಯಾಗಿ ಹೋಗಿದ್ದರು. ಆ ಕಾರ್ಯಕ್ರಮದ ನಡುವೆ ಅವರು ತಮ್ಮ ಎಂಗೇಜ್​ಮೆಂಟ್​ ರಿಂಗ್​ ತೋರಿಸಿದ್ದಾರೆ. ವಿಘ್ನೇಶ್ ಶಿವನ್​ ಕುರಿತಾಗಿಯೂ ನಿರೂಪಕಿ ಪ್ರಶ್ನೆ ಕೇಳಿದ್ದು, ಅದಕ್ಕೂ ಅವರು ಉತ್ತರಿಸಿದ್ದಾರೆ. ಸದ್ಯ ಈ ಪ್ರೋಮೋ ವೈರಲ್​ ಆಗುತ್ತಿದೆ. ಆ.15ರಂದು ಈ ಸಂಚಿಕೆ ಪ್ರಸಾರವಾಗಲಿದೆ. ನಯನತಾರಾ ಅವರ ಪೂರ್ತಿ ಮಾತುಗಳನ್ನು ಕೇಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಮದುವೆ ಯಾವಾಗ ಎಂಬ ಬಗ್ಗೆ ಇತ್ತೀಚೆಗೆ ವಿಘ್ನೇಶ್​ ಶಿವನ್​ ಅವರಿಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದರು. ಅದಕ್ಕೆ ಉತ್ತರಿಸಿದ್ದ ಅವರು, ‘ಮದುವೆಗಾಗಿ ನಾನು ಮತ್ತು ನಯನತಾರಾ ಹಣ ಉಳಿತಾಯ ಮಾಡುತ್ತಿದ್ದೇವೆ. ಯಾಕೆಂದರೆ ಮದುವೆಗೆ ಹೆಚ್ಚು ಖರ್ಚಾಗಲಿದೆ. ಅಲ್ಲದೇ, ಕೊರೊನಾ ಪ್ರಕರಣ ಕಡಿಮೆ ಆಗಲಿ ಅಂತ ಕಾಯುತ್ತಿದ್ದೇವೆ’ ಎಂದು ಹೇಳಿದ್ದರು. ಆದರೆ ಎಂಗೇಜ್​​ಮೆಂಟ್​ ಆಗಿರುವ ಬಗ್ಗೆ ಅವರು ಬಾಯಿ ಬಿಟ್ಟಿರಲಿಲ್ಲ. ಸಿನಿಮಾ ವಿಚಾರಕ್ಕೆ ಬರುವುದಾದರೆ, ‘ಕಾಥು ವಾಕುಲ ರೆಂಡು ಕಾದಲ್​’ ಚಿತ್ರವನ್ನು ವಿಘ್ನೇಶ್​ ನಿರ್ದೇಶಿಸುತ್ತಿದ್ದಾರೆ. ಆ ಸಿನಿಮಾದಲ್ಲಿ ನಯನತಾರಾ, ವಿಜಯ್​ ಸೇತುಪತಿ, ಸಮಂತಾ ಅಕ್ಕಿನೇನಿ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಕೊವಿಡ್​ ಲಸಿಕೆ ವಿಚಾರದಲ್ಲಿ ಗೋಲ್​ಮಾಲ್​ ಮಾಡಿದ್ರಾ ನಯನತಾರಾ? ಫೋಟೋ ತೆರೆದಿಟ್ಟ ಅಸಲಿ ಕಥೆ ಇಲ್ಲಿದೆ

ನಯನತಾರಾ-ಉದಯನಿಧಿ ಲಿವ್​ಇನ್​ನಲ್ಲಿದ್ದರೆ ನಾನೇನು ಮಾಡಲಿ?: ವಿವಾದ ಎಬ್ಬಿಸಿದ ಹೇಳಿಕೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!