Nayanthara Marriage: ಪ್ರಭುದೇವ ಜತೆ ಡೇಟಿಂಗ್​ ಮಾಡುತ್ತಿದ್ದ ನಯನತಾರಾ ಬ್ರೇಕಪ್​ ಮಾಡಿಕೊಂಡಿದ್ದು ಯಾಕೆ?

Prabhu Deva | Nayanthara: 2009ರ ಸಮಯದಲ್ಲಿ ನಯನತಾರಾ ಮತ್ತು ಪ್ರಭುದೇವ ಡೇಟಿಂಗ್​ ಮಾಡುತ್ತಿದ್ದರು. ಪ್ರಭುದೇವ ಜತೆಗಿನ ಸಂಬಂಧ ಬ್ರೇಕಪ್​ನಲ್ಲಿ ಅಂತ್ಯವಾದ ಬಳಿಕ ನಯನತಾರಾ ಬದುಕಿನಲ್ಲಿ ವಿಘ್ನೇಶ್​ ಶಿವನ್​ ಎಂಟ್ರಿ ಆಯಿತು.

Nayanthara Marriage: ಪ್ರಭುದೇವ ಜತೆ ಡೇಟಿಂಗ್​ ಮಾಡುತ್ತಿದ್ದ ನಯನತಾರಾ ಬ್ರೇಕಪ್​ ಮಾಡಿಕೊಂಡಿದ್ದು ಯಾಕೆ?
ಪ್ರಭುದೇವ, ವಿಘ್ನೇಶ್ ಶಿವನ್, ನಯನತಾರಾ
Follow us
| Updated By: ಮದನ್​ ಕುಮಾರ್​

Updated on:Jun 09, 2022 | 1:14 PM

ಜನಪ್ರಿಯ ನಟಿ ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ (Vignesh Shivan) ಜೊತೆ ಹಸೆಮಣೆ ಏರುತ್ತಿದ್ದಾರೆ. ಬಹುಕಾಲದಿಂದ ಪ್ರೀತಿಸುತ್ತಿದ್ದ ಈ ಜೋಡಿಗೆ ಇಂದು (ಜೂನ್​ 9) ವಿವಾಹ ಸಂಭ್ರಮ. ಮಹಾಬಲಿಪುರಂನಲ್ಲಿ ಅದ್ದೂರಿಯಾಗಿ ಮದುವೆ ಸಮಾರಂಭ ನಡೆಯುತ್ತಿದೆ. ಶಾರುಖ್​ ಖಾನ್​, ರಜನಿಕಾಂತ್​, ಬೋನಿ ಕಪೂರ್​, ಅಟ್ಲಿ ಕುಮಾರ್​, ಕಾರ್ತಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಹಾರೈಸುತ್ತಿದ್ದಾರೆ. ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ನಯನತಾರಾ (Nayanthara) ಹಾಗೂ ವಿಘ್ನೇಶ್​ ಶಿವನ್​ಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರಿಬ್ಬರ ಲವ್​ ಸ್ಟೋರಿ ಕುರಿತು ಫ್ಯಾನ್ಸ್​ ಮಾತನಾಡುತ್ತಿದ್ದಾರೆ. ಅಷ್ಟೇ ಅಲ್ಲ, ನಯನತಾರಾ ಅವರು ಈ ಹಿಂದೆ ಪ್ರಭುದೇವ (Prabhu Deva) ಜೊತೆ ಡೇಟಿಂಗ್​ ಮಾಡುತ್ತಿದ್ದರು ಎಂಬುದನ್ನು ಕೂಡ ನೆಟ್ಟಿಗರು ನೆನಪಿಸಿಕೊಳ್ಳುತ್ತಿದ್ದಾರೆ. ಅಷ್ಟಕ್ಕೂ ಪ್ರಭುದೇವ ಜತೆ ನಯನತಾರಾ ಬ್ರೇಕಪ್​ ಮಾಡಿಕೊಂಡಿದ್ದು ಯಾಕೆ? ಇಲ್ಲಿದೆ ವಿವರ..

ಬಹುಭಾಷೆಯಲ್ಲಿ ಪ್ರಭುದೇವ ಅವರು ಫೇಮಸ್​ ಆಗಿದ್ದಾರೆ. ಅದ್ಭುತವಾದ ಡ್ಯಾನ್ಸ್​ ಮೂಲಕ ಅವರು ಎಲ್ಲರನ್ನೂ ಮೋಡಿ ಮಾಡಿದ್ದಾರೆ. ನಟನಾಗಿ, ನಿರ್ದೇಶಕನಾಗಿ, ಕೊರಿಯೋಗ್ರಾಫರ್​ ಆಗಿಯೂ ಅವರು ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರ ಜತೆ ನಯನತಾರಾಗೆ ಪ್ರೀತಿ ಚಿಗುರಿತ್ತು. ಅನೇಕ ಸಂದರ್ಭದಲ್ಲಿ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದರು. ಇನ್ನೇನು ಈ ಪ್ರೇಮಿಗಳು ಮದುವೆ ಆಗುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ಅವರ ಬದುಕಿನಲ್ಲಿ ಟ್ವಿಸ್ಟ್​ ಎದುರಾಯಿತು.

ಇದನ್ನೂ ಓದಿ: Nayanthara Vignesh Wedding: ‘ಸೂಪರ್​’ ಚಿತ್ರದ ನಟಿ​ ನಯನತಾರಾಗೆ ಮದುವೆ ಸಂಭ್ರಮ; ವಿಘ್ನೇಶ್​ ಶಿವನ್​ ಕೈ ಹಿಡಿದ ಸುಂದರಿ

ಇದನ್ನೂ ಓದಿ
Image
Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು
Image
Nayanthara Vignesh Wedding: ‘ಸೂಪರ್​’ ಚಿತ್ರದ ನಟಿ​ ನಯನತಾರಾಗೆ ಮದುವೆ ಸಂಭ್ರಮ; ವಿಘ್ನೇಶ್​ ಶಿವನ್​ ಕೈ ಹಿಡಿದ ಸುಂದರಿ
Image
Nayanthara Wedding: ನಯನತಾರಾ ಜತೆ ಮದುವೆ ಆಗೋಕಿಂತ ಕೆಲವೇ ಗಂಟೆ ಮುನ್ನ ಪ್ರಮುಖರಿಗೆ ಧನ್ಯವಾದ ತಿಳಿಸಿದ ವಿಘ್ನೇಶ್​ ಶಿವನ್​
Image
ನಯನತಾರಾ-ವಿಘ್ನೇಶ್​ ಮದುವೆ ಒಟಿಟಿಯಲ್ಲಿ ಪ್ರಸಾರ? ಇದನ್ನು ಖರೀದಿಸಿದ್ದು ಯಾರು?

ಅದು 2009ರ ಸಮಯ. ನಯನತಾರಾ ಮತ್ತು ಪ್ರಭುದೇವ ನಡುವೆ ಏನೋ ನಡೆಯುತ್ತಿದೆ ಎಂಬ ಗುಸುಗುಸು ಜೋರಾಗಿ ಹಬ್ಬಿತ್ತು. ಆದರೆ ಅನೇಕ ವೈಯಕ್ತಿಕ ಕಾರಣಗಳಿಂದ ತಮ್ಮಿಬ್ಬರ ಸಂಬಂಧದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೊಳ್ಳಲು ಈ ಜೋಡಿಗೆ ಸಾಧ್ಯವಾಗಲೇ ಇಲ್ಲ. ಪ್ರಭುದೇವ ಅವರಿಗೆ ಅದಾಗಲೇ ಲತಾ ಜೊತೆ ಮದುವೆ ಆಗಿತ್ತು. ನಯನತಾರಾ ಜೊತೆ ಡೇಟಿಂಗ್ ನಡೆಸುತ್ತಿರುವಾಗ ಪತ್ನಿಗೆ ಇನ್ನೂ ವಿಚ್ಛೇದನ ನೀಡಿಲ್ಲದ ಕಾರಣ ಪ್ರಭುದೇವ ಅವರ ಈ ಪ್ರೇಮ ಪ್ರಸಂಗ ಕಗ್ಗಂಟಾಗಿತ್ತು.

ಇದನ್ನೂ ಓದಿ: Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು

ಕಡೆಗೂ ನಯನತಾರಾ ಮತ್ತು ಪ್ರಭುದೇವ ನಡುವಿನ ಲವ್​ಸ್ಟೋರಿ ಮುಂದುವರಿಯಲಿಲ್ಲ. ದಿನದಿಂದ ದಿನಕ್ಕೆ ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಹೆಚ್ಚಲು ಆರಂಭ ಆಯಿತು. ಅಂತಿಮವಾಗಿ ಬ್ರೇಕಪ್​ನಲ್ಲಿ ಆ ಸಂಬಂಧ ಅಂತ್ಯವಾಯ್ತು. ಆ ಬಳಿಕ ನಯನತಾರ ಬದುಕಿನಲ್ಲಿ ವಿಘ್ನೇಶ್​ ಶಿವನ್​ ಪ್ರವೇಶ ಆಯಿತು. ಇಬ್ಬರ ನಡುವೆ ಪ್ರೀತಿ ಚಿಗುರಿ, ಅದಕ್ಕೀಗ ಮದುವೆಯ ಮುದ್ರೆ ಬೀಳುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:13 pm, Thu, 9 June 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ