AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ದುನಿಯಾದಿಂದ ವಿಜಯ್​ ಲುಕ್​ ರಿವೀಲ್​; NBK107 ಚಿತ್ರದಲ್ಲಿ ಹೇಗಿದೆ ನೋಡಿ ಸಲಗನ ಗೆಟಪ್​

NBK 107 | Duniya Vijay: ದುನಿಯಾ ವಿಜಯ್​ ನಟಿಸುತ್ತಿರುವ ತೆಲುಗಿನ NBK107 ಚಿತ್ರತಂಡದಿಂದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಅವರಿಗೆ ಖಡಕ್​ ವಿಲನ್​ ಪಾತ್ರವಿದೆ.

ಟಾಲಿವುಡ್​ ದುನಿಯಾದಿಂದ ವಿಜಯ್​ ಲುಕ್​ ರಿವೀಲ್​; NBK107 ಚಿತ್ರದಲ್ಲಿ ಹೇಗಿದೆ ನೋಡಿ ಸಲಗನ ಗೆಟಪ್​
ದುನಿಯಾ ವಿಜಯ್
TV9 Web
| Edited By: |

Updated on:Mar 16, 2022 | 1:27 PM

Share

ನಟ ದುನಿಯಾ ವಿಜಯ್​ (Duniya Vijay) ಅವರ ಹವಾ ಈಗ ಪರಭಾಷೆ ಚಿತ್ರರಂಗಕ್ಕೂ ಹಬ್ಬಿದೆ. ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಸ್ಟಾರ್​ ನಟನಾಗಿ ಮತ್ತು ಯಶಸ್ವಿ ನಿರ್ದೇಶಕನಾಗಿ ಮಿಂಚಿದ್ದ ಅವರು ಈಗ ಟಾಲಿವುಡ್​ನಲ್ಲೂ ಖದರ್​ ತೋರಿಸುತ್ತಿದ್ದಾರೆ. ಮೊದಲ ಬಾರಿಗೆ ಅವರು ನಟಿಸುತ್ತಿರುವ ತೆಲುಗು ಚಿತ್ರತಂಡದಿಂದ ಅವರ ಫಸ್ಟ್​ಲುಕ್​ ಬಿಡುಗಡೆ ಮಾಡಲಾಗಿದೆ. ಇದು ನಂದಮೂರಿ ಬಾಲಕೃಷ್ಣ ನಟನೆಯ 107ನೇ (NBK 107) ಸಿನಿಮಾ. ಇದರಲ್ಲಿ ದುನಿಯಾ ವಿಜಯ್​ ಅವರು ಖಡಕ್​ ವಿಲನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅವರ ಫಸ್ಟ್​ ಲುಕ್​ ಪೋಸ್ಟರ್​ ತುಂಬ ರಗಡ್​ ಆಗಿದೆ. ಗೋಪಿಚಂದ್​ ಮಲಿನೇನಿ (Gopichand Malineni) ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದು, ದುನಿಯ್​ ವಿಜಯ್​ ಅವರದ್ದು ಪವರ್​ಫುಲ್​ ಪಾತ್ರ ಎಂದು ಅವರು ಹೇಳಿದ್ದಾರೆ. ಗಡ್ಡ ಬಿಟ್ಟು, ಸಿಗರೇಟ್​ ಸೇದುತ್ತ, ಗುರಾಯಿಸುವ ರೀತಿಯಲ್ಲಿ ದುನಿಯಾ ವಿಜಯ್​ ಪೋಸ್​ ನೀಡಿದ್ದಾರೆ. ಈ ಪೋಸ್ಟರ್​ ನೋಡಿದ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಪೂರ್ತಿ ಸಿನಿಮಾದಲ್ಲಿ ಅವರ ಪಾತ್ರ ಹೇಗೆ ಮೂಡಿಬರಬಹುದು ಎಂಬ ಕೌತುಕ ಅಭಿಮಾನಿಗಳಲ್ಲಿ ಇದೆ. ಪೋಸ್ಟರ್​ ಕಂಡು ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಟಾಲಿವುಡ್​ನಲ್ಲಿ ದುನಿಯಾ ವಿಜಯ್​ ಅವರಿಗೆ ದೊಡ್ಡ ಡಿಮ್ಯಾಂಡ್​ ಸೃಷ್ಟಿಯಾಗುವ ನಿರೀಕ್ಷೆ ದಟ್ಟವಾಗಿದೆ.

ದುನಿಯಾ ವಿಜಯ್​ ಅವರಿಗೆ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಇದೆ. ನಟನೆಯಲ್ಲಿ ಅವರು ಈಗಾಗಲೇ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ. ಕಳೆದ ವರ್ಷ ತೆರೆಕಂಡ ‘ಸಲಗ’ ಚಿತ್ರಕ್ಕೆ ಅವರು ಆ್ಯಕ್ಷನ್​-ಕಟ್​ ಹೇಳಿದ್ದರು. ಅದು ಅವರ ಮೊದಲ ನಿರ್ದೇಶನದ ಪ್ರಯತ್ನ. ಚೊಚ್ಚಲ ನಿರ್ದೇಶನದಲ್ಲೇ ಅವರಿಗೆ ಗೆಲುವು ಸಿಕ್ಕಿತು. ‘ಸಲಗ’ ಸಕ್ಸಸ್​ ಬಳಿಕ ಅವರನ್ನು ಅರಸಿ ಬಂದಿದ್ದೇ ಟಾಲಿವುಡ್​ ಅವಕಾಶ. ಖ್ಯಾತ ನಟ ನಂದಮೂರಿ ಬಾಲಕೃಷ್ಣ ಜೊತೆ ತೆರೆ ಹಂಚಿಕೊಳ್ಳುವ ಚಾನ್ಸ್​ ಪಡೆದಿರುವ ದುನಿಯಾ ವಿಜಯ್​ ಅವರು ಈಗ ಫಸ್ಟ್​ಲುಕ್​ ಪೋಸ್ಟರ್​ ಮೂಲಕ ಗಮನ ಸೆಳೆಯುತ್ತಿದ್ದಾರೆ.

‘ಸ್ಯಾಂಡಲ್​ವುಡ್​ ಸೆನ್ಸೇಷನ್​ ದುನಿಯಾ ವಿಜಯ್ ಅವರನ್ನು ಒಂದು ಪವರ್​ಫುಲ್​ ಪಾತ್ರದಲ್ಲಿ ಪರಿಚಯಿಸುತ್ತಿದ್ದೇವೆ. ಈಗಾಗಲೇ ಹೇಳಿದಂತೆ ವಿಲನ್​ ಎಂದರೆ ಏನು ಎಂಬುದನ್ನು ಅವರು ಮರು ವ್ಯಾಖ್ಯಾನ ಮಾಡಲಿದ್ದಾರೆ’ ಎಂಬ ಕ್ಯಾಪ್ಷನ್​ನೊಂದಿಗೆ ನಿರ್ದೇಶಕ ಗೋಪಿಚಂದ್​ ಮಲಿನೇನಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಮುಸಲಿ ಮಡುಗು ಪ್ರತಾಪ್​ ರೆಡ್ಡಿ ಎಂಬುದು ದುನಿಯಾ ವಿಜಯ್​ ನಿಭಾಯಿಸಲಿರುವ ಪಾತ್ರದ ಹೆಸರು ಎಂದು ಕೂಡ ನಿರ್ದೇಶಕರು ತಿಳಿಸಿದ್ದಾರೆ. ಆ ಮೂಲಕ ಸಿನಿಪ್ರಿಯರ ಮನದಲ್ಲಿ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿಯಾಗುವಂತೆ ಅವರು ಮಾಡಿದ್ದಾರೆ.

ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್​ ಅವರು NBK107 ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಚಿತ್ರೀಕರಣದ ಸೆಟ್​ಗೆ ತೆರಳಿದ್ದ ಅವರಿಗೆ ಚಿತ್ರತಂಡದಿಂದ ಭರ್ಜರಿ ಸ್ವಾಗತ ಸಿಕ್ಕಿತ್ತು. ಆ ವಿಷಯವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ನಂದಮೂರಿ ಬಾಲಕೃಷ್ಣ ಮತ್ತು ದುನಿಯಾ ವಿಜಯ್​ ಅವರ ಮುಖಾಮುಖಿ ಈ ಸಿನಿಮಾದಲ್ಲಿ ಹೇಗಿರಲಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದರ ಜೊತೆಗೆ ಎಂದಿನಂತೆ ಚಂದನವನದಲ್ಲೂ ದುನಿಯಾ ವಿಜಯ್​ ಸಕ್ರಿಯರಾಗಿದ್ದಾರೆ. ಅವರ ನಿರ್ದೇಶನದಲ್ಲಿ ಹೊಸ ಸಿನಿಮಾ ‘ಭೀಮಾ’ ಇತ್ತೀಚೆಗಷ್ಟೇ ಅನೌನ್ಸ್​ ಆಯಿತು. ಆ ಚಿತ್ರದ ಫಸ್ಟಲುಕ್​ ಮತ್ತು ಟೈಟಲ್​ ಪೋಸ್ಟರ್​ ಈಗಾಗಲೇ ಜನಮನ ಸೆಳೆಯುತ್ತಿದೆ. ‘ಸಲಗ’ ರೀತಿಯೇ ‘ಭೀಮ’ ಸಿನಿಮಾದಲ್ಲೂ ದುನಿಯಾ ವಿಜಯ್ ಅವರು ಒಂದು ರಕ್ತಸಿಕ್ತ ಕಥೆಯನ್ನು ಹೇಳಲಿದ್ದಾರೆ ಎಂಬುದನ್ನು ಪೋಸ್ಟರ್​ಗಳು ಸೂಚಿಸುತ್ತಿವೆ. ಆ ಸಿನಿಮಾ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ. ಒಟ್ಟಿನಲ್ಲಿ ವಿಜಯ್​ ಅವರು ಈಗ ಸಖತ್​ ಬ್ಯುಸಿ ಆಗಿದ್ದಾರೆ. ಒಂದೆಡೆ ನಟನೆ, ಇನ್ನೊಂದು ಕಡೆ ನಿರ್ದೇಶನ ಮಾಡುತ್ತಾ ಅವರು ಕಾರ್ಯಮಗ್ನರಾಗಿದ್ದಾರೆ.

ಇದನ್ನೂ ಓದಿ:

Duniya Vijay: ‘ಎನ್​ಬಿಕೆ107’ ಚಿತ್ರದ ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

ಶಿವಣ್ಣನ ಕಾಲಿಗೆ ನಮಸ್ಕರಿಸಿದ ದುನಿಯಾ ವಿಜಯ್​, ಕೀರ್ತಿ; ‘ಸಲಗ’ ಸಕ್ಸಸ್​ ವೇದಿಕೆಯಲ್ಲಿ ‘ಹ್ಯಾಟ್ರಿಕ್​ ಹೀರೋ’

Published On - 1:11 pm, Wed, 16 March 22

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!