Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ

ನಂದಮೂರಿ ತಾರಕ ರಾಮಾ ರಾವ್​ ಅವರ ಜನ್ಮದಿನದ ಪ್ರಯುಕ್ತ ‘ಎನ್​ಬಿಕೆ 107’ ಸಿನಿಮಾದಿಂದ ಹೊಸ ಪೋಸ್ಟರ್​ ರಿಲೀಸ್​ ಆಗಿದೆ. ಅದರಲ್ಲಿ ನಂದಮೂರಿ ಬಾಲಕೃಷ್ಣ ಲುಕ್​ ಸಖತ್​ ಮಾಸ್​ ಆಗಿದೆ.

ದುನಿಯಾ ವಿಜಯ್​ ಎದುರು ಕಾದಾಡಲು ‘ಬೇಟೆ ಶುರು..’ ಎಂದು ಮಾಸ್​ ಅವತಾರ ತಾಳಿದ ನಂದಮೂರಿ ಬಾಲಕೃಷ್ಣ
ನಂದಮೂರಿ ಬಾಲಕೃಷ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: May 28, 2022 | 12:03 PM

ಟಾಲಿವುಡ್​ನ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅಭಿನಯಿಸುತ್ತಿರುವ ಹೊಸ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ಇತ್ತೀಚೆಗೆ ಅವರು ‘ಅಖಂಡ’ ಸಿನಿಮಾದಿಂದ ದೊಡ್ಡ ಯಶಸ್ಸು ಕಂಡರು. ಅದರಿಂದ ಅವರ ಮುಂದಿನ ಚಿತ್ರದ ಮೇಲೆ ಹೆಚ್ಚು ಹೈಪ್ ಸೃಷ್ಟಿ ಆಗಿದೆ. ಆ ಸಿನಿಮಾಗೆ ತಾತ್ಕಾಲಿಕವಾಗಿ ‘ಎನ್​ಬಿಕೆ 107’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾವನ್ನು ಗೋಪಿಚಂದ್​ ಮಲಿನೇನಿ ನಿರ್ದೇಶಿಸುತ್ತಿದ್ದಾರೆ. ಇಂದು (ಮೇ 28) ನಂದಮೂರಿ ತಾರಕ ರಾಮಾರಾವ್​ (Nandamuri Taraka Rama Rao) ಅವರ ಜನ್ಮದಿನ. ಆ ಪ್ರಯುಕ್ತ ಎಲ್ಲರೂ ಅವರನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನದಂದು ನಂದಮೂರಿ ಬಾಲಕೃಷ್ಣ ನಟನೆಯ ‘ಎನ್​ಬಿಕೆ 107’ ಸಿನಿಮಾದಿಂದ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಜೊತೆಗೆ ನಂದಮೂರಿ ತಾರಕ ರಾಮಾರಾವ್​ ಅವರಿಗೆ ಗೌರವ ಸಲ್ಲಿಸಲಾಗಿದೆ. ಸದ್ಯ ಈ ಪೋಸ್ಟರ್​ ವೈರಲ್​ ಆಗುತ್ತಿದೆ. ‘ಎನ್​ಬಿಕೆ 107’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್​ (Duniya Vijay) ಅವರು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ.

ಮಾಸ್​ ಸಿನಿಮಾಗಳನ್ನೇ ಮಾಡಿ ಫೇಮಸ್​ ಆದವರು ನಿರ್ದೇಶಕ ಗೋಪಿಚಂದ್​ ಮಲಿನೇನಿ. ಭರ್ಜರಿ ಸಾಹಸ ಪ್ರಧಾನ ಸಿನಿಮಾಗಳಿಂದ ಮನರಂಜನೆ ನೀಡುವ ನಂದಮೂರಿ ಬಾಲಕೃಷ್ಣ ಜೊತೆ ಅವರು ಕೈ ಜೋಡಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಮನೆ ಮಾಡಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಈ ಹೊಸ ಪೋಸ್ಟರ್​ ಮೂಡಿಬಂದಿದೆ. ಬಾಲಯ್ಯ ಅವರು ಕೈಯಲ್ಲಿ ಹರಿತವಾದ ಆಯುಧ ಹಿಡಿದಿದ್ದಾರೆ. ಅದರಿಂದ ರಕ್ತ ಸುರಿಯುತ್ತಿದೆ. ಆಕ್ರೋಶ ಭರಿತವಾಗಿ ಅವರು ಲುಕ್​ ನೀಡಿದ್ದಾರೆ. ‘ಹಂಟ್​ ಬಿಗಿನ್ಸ್​..’ (ಬೇಟೆ ಶುರು) ಎಂದು ಈ ಪೋಸ್ಟರ್​ ಮೇಲೆ ಬರೆದಿರುವುದು ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
ಟಾಲಿವುಡ್​ ದುನಿಯಾದಿಂದ ವಿಜಯ್​ ಲುಕ್​ ರಿವೀಲ್​; NBK107 ಚಿತ್ರದಲ್ಲಿ ಹೇಗಿದೆ ನೋಡಿ ಸಲಗನ ಗೆಟಪ್​
Image
ಟಾಲಿವುಡ್​ಗೆ ಎಂಟ್ರಿ ನೀಡಿದ ದುನಿಯಾ ವಿಜಯ್​; ನಂದಮೂರಿ ಬಾಲಕೃಷ್ಣ ಚಿತ್ರದಲ್ಲಿ ಬಂಪರ್​ ಚಾನ್ಸ್​
Image
Akhanda: ಅಪರೂಪದ ದಾಖಲೆ ಬರೆದ ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ’; ಏನದು?
Image
Puneeth Rajkumar: ನಾವು ಒಂದೇ ತಾಯಿ ಮಕ್ಕಳಲ್ಲದಿದ್ದರೂ ಸೋದರರಂತಿದ್ದೆವು; ನಂದಮೂರಿ ಬಾಲಕೃಷ್ಣ ಕಂಬನಿ

ಟಾಲಿವುಡ್​ ಮಂದಿ ಮಾತ್ರವಲ್ಲದೇ ಕನ್ನಡದ ಸಿನಿಪ್ರಿಯರು ಕೂಡ ‘ಎನ್​ಬಿಕೆ 107’ ಸಿನಿಮಾ ನೋಡಲು ಕಾದಿದ್ದಾರೆ. ‘ದುನಿಯಾ’ ವಿಜಯ್​ ಅವರು ಈ ಚಿತ್ರದಲ್ಲಿ ನಟಿಸುತ್ತಿರುವುದೇ ಈ ಕಾತರಕ್ಕೆ ಕಾರಣ. ಕೆಲವು ದಿನಗಳ ಹಿಂದೆ ವಿಜಿ ಅವರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಮುಸಲಿ ಮಡುಗು ಪ್ರತಾಪ್​ ರೆಡ್ಡಿ ಎಂಬ ಪತ್ರವನ್ನು ದುನಿಯಾ ವಿಜಯ್​ ಮಾಡುತ್ತಿದ್ದು, ಅವರ ಲುಕ್​ ಕೂಡ ಸಖತ್​ ರಾ ಆಗಿದೆ.

ಇದನ್ನೂ ಓದಿ: ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​

ದುನಿಯಾ ವಿಜಯ್​ ಹಾಗೂ ನಂದಮೂರಿ ಬಾಲಕೃಷ್ಣ ನಡುವಿನ ಮುಖಾಮುಖಿ ಹೇಗಿರಲಿದೆ ಎಂದು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಚಿತ್ರಕ್ಕೆ ಅಂತಿಮವಾಗಿ ಯಾವ ಶೀರ್ಷಿಕೆ ಇಡಲಾಗುವುದು ಎಂಬ ಕೌತುಕ ಕೂಡ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ