AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವ್​ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾಗೆ ಸಿಕ್ತು ಜಾಮೀನು

ಬೆಂಗಳೂರು ಗ್ರಾಮಾಂತರ ಎನ್​ಡಿಪಿಎಸ್​ ವಿಶೇಷ ಕೋರ್ಟ್‌ನಿಂದ ಟಾಲಿವುಡ್​ ನಟಿ ಹೇಮಾಗೆ ಜಾಮೀನು ಮಂಜೂರು ಮಾಡಲಾಗಿದೆ. ‘ಹೇಮಾ ಅವರಿಂದ ಯಾವುದೇ ಮಾದಕವಸ್ತುಗಳನ್ನು ವಶಕ್ಕೆ ಪಡೆದಿಲ್ಲ. ಅನೇಕ ದಿನಗಳ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ’ ಎಂದು ಹೇಮಾ ಪರ ವಕೀಲರಾದ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಹೇಮಾಗೆ ಷರತ್ತುಬದ್ಧ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ.

ರೇವ್​ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾಗೆ ಸಿಕ್ತು ಜಾಮೀನು
ಹೇಮಾ
Follow us
Ramesha M
| Updated By: ಮದನ್​ ಕುಮಾರ್​

Updated on:Jun 12, 2024 | 7:12 PM

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಹೇಮಾ (Hema) ಈಗ ಜಾಮೀನು ಪಡೆದಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಹೊಂದಿರುವ ನಟಿ ಹೇಮಾ ಅವರು ಹೈದರಾಬಾದ್​​ನಿಂದ ಬೆಂಗಳೂರಿಗೆ ಬಂದು ರೇವ್​ ಪಾರ್ಟಿ (Rave Party) ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಅವರನ್ನು ಜೂನ್​ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಇಂದು (ಜೂನ್​ 12) ಹೇಮಾಗೆ ಜಾಮೀನು (Bail) ಮಂಜೂರು ಮಾಡಲಾಗಿದೆ

ಬೆಂಗಳೂರು ಗ್ರಾಮಾಂತರ ಎನ್​ಡಿಪಿಎಸ್​ ವಿಶೇಷ ಕೋರ್ಟ್‌ನಿಂದ ನಟಿ ಹೇಮಾಗೆ ಜಾಮೀನು ನೀಡಲಾಗಿದೆ. ಹೇಮಾಳಿಂದ ಯಾವುದೇ ಮಾದಕವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ.

ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಜೆ.ಆರ್​. ಫಾರ್ಮ್​ಹೌಸ್​ ಮೇಲೆ ದಾಳಿ ನಡೆಸಿದಾಗ ತೆಲುಗು ನಟಿ ಹೇಮಾ ಸಿಕ್ಕಿಬಿದ್ದಿದ್ದರು. ಆ ಸುದ್ದಿ ಹೊರಬಿದ್ದಾಗ ಅದೇ ಫಾರ್ಮ್​ಹೌಸ್​ನಿಂದಲೇ ವಿಡಿಯೋ ರೆಕಾರ್ಡ್​ ಮಾಡಿ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹೇಮಾ ಹರಿಬಿಟ್ಟಿದ್ದರು. ತಾವು ಹೈದರಾಬಾದ್​ನಲ್ಲಿ ಇರುವುದಾಗಿ ಬಿಂಬಿಸಲು ಆ ವಿಡಿಯೋ ಮೂಲಕ ಹೇಮಾ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ಅಲ್ಲದೇ ಬಂಧನ ಆಗುವಾಗಲೂ ಹೇಮಾ ಕೂಗಾಡಿದ್ದರು. ‘ನಾನೇನೂ ತಪ್ಪು ಮಾಡಿಲ್ಲ. ನಾನು ನಿಜವಾಗಿ ಹೈದರಾಬಾದ್​ನಿಂದ ವಿಡಿಯೋ ಮಾಡಿದ್ದು. ಸಿಸಿಬಿಯವರು ನೋಡಿ ಹೇಗೆ ಕರೆದುಕೊಂಡು ಹೋಗ್ತಿದ್ದಾರೆ. ನಾನು ಹುಟ್ಟುಹಬ್ಬದ ಕೇಕ್​ ಕತ್ತರಿಸಿ ಹೈದರಾಬಾದ್​ಗೆ ಬಂದುಬಿಟ್ಟೆ. ನಮ್ಮ ಮನೆಯಿಂದ ಬಿರಿಯಾನಿ ವಿಡಿಯೋ ಹಾಕಿದ್ದೆ. ನಾನು ಡ್ರಗ್ಸ್ ತಗೊಂಡಿಲ್ಲ’ ಎಂದು ಹೇಮಾ ಹೇಳಿದ್ದರು. ಈ ರೀತಿಯಾಗಿ ಹೇಮಾ ಅವರು ಈ ಕೇಸ್​ನಲ್ಲಿ ಶುರುವಿನಿಂದಲೂ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಆದರೆ ಪಾರ್ಟಿ ನಡೆದ ಜಾಗದಲ್ಲಿ ಹೇಮಾ ಇದ್ದರು ಎಂಬುದನ್ನು ಬೆಂಗಳೂರು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಖಚಿತ ಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:12 pm, Wed, 12 June 24

ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು