ರೇವ್​ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾಗೆ ಸಿಕ್ತು ಜಾಮೀನು

ಬೆಂಗಳೂರು ಗ್ರಾಮಾಂತರ ಎನ್​ಡಿಪಿಎಸ್​ ವಿಶೇಷ ಕೋರ್ಟ್‌ನಿಂದ ಟಾಲಿವುಡ್​ ನಟಿ ಹೇಮಾಗೆ ಜಾಮೀನು ಮಂಜೂರು ಮಾಡಲಾಗಿದೆ. ‘ಹೇಮಾ ಅವರಿಂದ ಯಾವುದೇ ಮಾದಕವಸ್ತುಗಳನ್ನು ವಶಕ್ಕೆ ಪಡೆದಿಲ್ಲ. ಅನೇಕ ದಿನಗಳ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ’ ಎಂದು ಹೇಮಾ ಪರ ವಕೀಲರಾದ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಹೇಮಾಗೆ ಷರತ್ತುಬದ್ಧ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ.

ರೇವ್​ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾಗೆ ಸಿಕ್ತು ಜಾಮೀನು
ಹೇಮಾ
Follow us
| Updated By: ಮದನ್​ ಕುಮಾರ್​

Updated on:Jun 12, 2024 | 7:12 PM

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಹೇಮಾ (Hema) ಈಗ ಜಾಮೀನು ಪಡೆದಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಹೊಂದಿರುವ ನಟಿ ಹೇಮಾ ಅವರು ಹೈದರಾಬಾದ್​​ನಿಂದ ಬೆಂಗಳೂರಿಗೆ ಬಂದು ರೇವ್​ ಪಾರ್ಟಿ (Rave Party) ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಅವರನ್ನು ಜೂನ್​ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಇಂದು (ಜೂನ್​ 12) ಹೇಮಾಗೆ ಜಾಮೀನು (Bail) ಮಂಜೂರು ಮಾಡಲಾಗಿದೆ

ಬೆಂಗಳೂರು ಗ್ರಾಮಾಂತರ ಎನ್​ಡಿಪಿಎಸ್​ ವಿಶೇಷ ಕೋರ್ಟ್‌ನಿಂದ ನಟಿ ಹೇಮಾಗೆ ಜಾಮೀನು ನೀಡಲಾಗಿದೆ. ಹೇಮಾಳಿಂದ ಯಾವುದೇ ಮಾದಕವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ.

ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಜೆ.ಆರ್​. ಫಾರ್ಮ್​ಹೌಸ್​ ಮೇಲೆ ದಾಳಿ ನಡೆಸಿದಾಗ ತೆಲುಗು ನಟಿ ಹೇಮಾ ಸಿಕ್ಕಿಬಿದ್ದಿದ್ದರು. ಆ ಸುದ್ದಿ ಹೊರಬಿದ್ದಾಗ ಅದೇ ಫಾರ್ಮ್​ಹೌಸ್​ನಿಂದಲೇ ವಿಡಿಯೋ ರೆಕಾರ್ಡ್​ ಮಾಡಿ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹೇಮಾ ಹರಿಬಿಟ್ಟಿದ್ದರು. ತಾವು ಹೈದರಾಬಾದ್​ನಲ್ಲಿ ಇರುವುದಾಗಿ ಬಿಂಬಿಸಲು ಆ ವಿಡಿಯೋ ಮೂಲಕ ಹೇಮಾ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ಅಲ್ಲದೇ ಬಂಧನ ಆಗುವಾಗಲೂ ಹೇಮಾ ಕೂಗಾಡಿದ್ದರು. ‘ನಾನೇನೂ ತಪ್ಪು ಮಾಡಿಲ್ಲ. ನಾನು ನಿಜವಾಗಿ ಹೈದರಾಬಾದ್​ನಿಂದ ವಿಡಿಯೋ ಮಾಡಿದ್ದು. ಸಿಸಿಬಿಯವರು ನೋಡಿ ಹೇಗೆ ಕರೆದುಕೊಂಡು ಹೋಗ್ತಿದ್ದಾರೆ. ನಾನು ಹುಟ್ಟುಹಬ್ಬದ ಕೇಕ್​ ಕತ್ತರಿಸಿ ಹೈದರಾಬಾದ್​ಗೆ ಬಂದುಬಿಟ್ಟೆ. ನಮ್ಮ ಮನೆಯಿಂದ ಬಿರಿಯಾನಿ ವಿಡಿಯೋ ಹಾಕಿದ್ದೆ. ನಾನು ಡ್ರಗ್ಸ್ ತಗೊಂಡಿಲ್ಲ’ ಎಂದು ಹೇಮಾ ಹೇಳಿದ್ದರು. ಈ ರೀತಿಯಾಗಿ ಹೇಮಾ ಅವರು ಈ ಕೇಸ್​ನಲ್ಲಿ ಶುರುವಿನಿಂದಲೂ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಆದರೆ ಪಾರ್ಟಿ ನಡೆದ ಜಾಗದಲ್ಲಿ ಹೇಮಾ ಇದ್ದರು ಎಂಬುದನ್ನು ಬೆಂಗಳೂರು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಖಚಿತ ಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:12 pm, Wed, 12 June 24

ತಾಜಾ ಸುದ್ದಿ
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ