AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ

ನೀನಾಸಂ ಸತೀಶ್ ಅವರ ಬದುಕಿನ ಯಶೋಗಾಥೆ ನಿಜಕ್ಕೂ ಸ್ಪೂರ್ತಿದಾಯಕ. ಮದ್ದೂರಿನ ಸಣ್ಣ ರೈತ ಕುಟುಂಬದಿಂದ ಬಂದ ಶಿವಕುಮಾರ್, ಗೋಪಾಲ್ ಥಿಯೇಟರ್‌ನಲ್ಲಿ ಕಸ ಗುಡಿಸಿ, ಟೀ ಮಾರಿ, ಟಾರ್ಚ್ ಬಿಟ್ಟು, ಬಳಿಕ ನೀನಾಸಂ ಸೇರಿ ಇಂದು ಕನ್ನಡ ಚಿತ್ರರಂಗದ ಬೇಡಿಕೆಯ ನಟನಾಗಿ ಹೊರಹೊಮ್ಮಿದ್ದಾರೆ. ಜಾತಿ ತಾರತಮ್ಯದ ವಿರುದ್ಧ ಹೋರಾಡುವ ಅವರ 'ದಿ ರೈಸ್ ಆಫ್ ಅಶೋಕ' ಚಿತ್ರದ ಯಶಸ್ಸಿಗೆ ಸತೀಶ್ ನೆರವು ಕೋರಿದ್ದಾರೆ.

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ
ಸತೀಶ್
ರಾಜೇಶ್ ದುಗ್ಗುಮನೆ
|

Updated on: Feb 28, 2026 | 10:12 AM

Share

ನೀನಾಸಂ ಸತೀಶ್ (Ninasam Satish) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನೀನಾಸಂ ಹಿನ್ನೆಲೆಯಿಂದ ಬಂದ ಅವರು ಇಂದು ಬೇಡಿಕೆಯ ನಟ ಎನಿಸಿಕೊಂಡಿದ್ದಾರೆ. ಅವರ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಗಮನ ಸೆಳೆದಿದೆ. ಜಾತಿ ತಾರತಮ್ಯ ವಿರುದ್ಧ ಹೋರಾಡುವ ಈ ಕಥೆ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸತೀಶ್ ಅವರು ತಮ್ಮ ಜರ್ನಿ ನೆನಪಿಸಿಕೊಂಡಿದ್ದಾರೆ. ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’ ಎಂದು ಮಾತು ಆರಂಭಿಸಿದ್ದಾರೆ ಸತೀಶ್. ‘ಇದು ವಿಧಿ ಬರೆದ ಕಥೆಯಲ್ಲ, ನಾನೇ ಬರೆದುಕೊಂಡ ಸಾಧಾರಣ ಕಥೆ. ನಮ್ಮೂರು ಮದ್ದೂರು ಬಳಿ ಇದೆ. ನಮಗೆ ಇರೋದು 30 ಗುಂಟೆ ಜಾಗ. ನಮ್ಮದು ಸಣ್ಣ ರೈತರ ಕುಟುಂಬ. ಛಲ ಎಲ್ಲಿಂದ ಬಂತು ಎಂದಾಗ ನಮ್ಮಮ್ಮ ನೆನಪಾಗುತ್ತಾಳೆ’ ಎಂದು ಹಳೆಯ ಕಥೆ ನೆನಪಿಸಿಕೊಂಡಿದ್ದಾರೆ ಸತೀಶ್.

‘ಬೆಂಗಳೂರಿಗೆ ಮೊದಲು ಬಂದಾಗ ಸಿಕ್ಕಿದ್ದು ಗೋಪಾಲ್ ಥಿಯೇಟರ್. ಇಲ್ಲಿ, ಕಸ ಗುಡಿಸಿದ್ದೆ, ಟೀ ಮಾರಿದ್ದೆ. ಟಾರ್ಚ್ ಬಿಟ್ಟಿದ್ದೆ. ಆಗ ಹೀರೋ ಆಗ್ತೀನಿ ಎಂದು ಎಂದಿಗೂ ಅಂದುಕೊಂಡಿರಲಿಲ್ಲ’ ಎಂದಿದ್ದಾರೆ ನೀನಾಸಂ ಸತೀಶ್. ಸಿಕ್ಕ ಸಿಕ್ಕ ಕೆಲಸ ಮಾಡಿದೆ. ಮತ್ತೆ ಊರು ಸೇರಿದೆ. ಆ ಬಳಿಕ ನಾಟಕ ಎಂಬ ಹೊಸ ಬಾಗಿಲು ತೆರೆಯಿತು’ ಎಂದು ಜರ್ನಿ ನೆನೆದರು ಸತೀಶ್.

ಇದನ್ನೂ ಓದಿ: ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಶೀರ್ಷಿಕೆ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್ ನೀನಾಸಂ

ಆ ಬಳಿಕ ಅವರು ನೀನಾಸಂ ಸೇರಿಕೊಂಡರು. ಇದಾದ ಬಳಿಕ ಅವರು ಮತ್ತೆ ಬೆಂಗಳೂರಿಗೆ ಬಂದರು. ‘ಹೀಗೆ ಶುರುವಾದ ಜರ್ನಿ ಇಲ್ಲಿವರೆಗೆ ಕರೆದುಕೊಂಡು ಬಂದು ನಿಲ್ಲಿಸಿದೆ. ಗೆಲುವು, ಸೋಲಿಗಿಂತ ಪ್ರಯತ್ನವನ್ನೇ ನಂಬಿದ್ದೇನೆ. ನಾನು ಪ್ರೀತಿಸಿ ಮಾಡಿರೋ ದಿ ರೈಸ್ ಆಫ್ ಅಶೋಕ ಚಿತ್ರ ಗೆಲ್ಲಿಸಿ’ ಎಂದು ಸತೀಶ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ