AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನಿದ್ದರೆ’ ಆಲ್ಬಂ ಹಾಡಿನಿಂದ ಚಿಗುರಿದ ಸಿನಿಮಾ ಕನಸು; ಸುಮಧುರ ಹಾಡು ರಿಲೀಸ್

‘ಸಿರಿ ಮ್ಯೂಸಿಕ್’ ಮೂಲಕ ‘ನೀನಿದ್ದರೆ’ ಹಾಡು ಬಿಡುಗಡೆ ಆಗಿದೆ. ಹೊಸ ಕಲಾವಿದರು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮಧುರ ಪ್ರೀತಿಯ ಮೆಲುಕಿನಂತೆ ಈ ಹಾಡು ಸಿದ್ಧವಾಗಿದೆ. ಇದನ್ನೇ ಒಂದು ಸಿನಿಮಾ ರೂಪದಲ್ಲಿ ಕಟ್ಟಿಕೊಡುವ ಪ್ಲ್ಯಾನ್ ಸಹ ಈ ತಂಡಕ್ಕೆ ಇದೆ. ಆ ಕುರಿತು ತಂಡ ಮಾಹಿತಿ ನೀಡಿದೆ.

‘ನೀನಿದ್ದರೆ’ ಆಲ್ಬಂ ಹಾಡಿನಿಂದ ಚಿಗುರಿದ ಸಿನಿಮಾ ಕನಸು; ಸುಮಧುರ ಹಾಡು ರಿಲೀಸ್
Karen Pinto, Smitha Pinto, Avil Rodrigues
ಮದನ್​ ಕುಮಾರ್​
|

Updated on: May 20, 2026 | 9:46 PM

Share

ಸಿನಿಮಾ ಹಾಡುಗಳು ಮಾತ್ರವಲ್ಲದೇ ಆಲ್ಬಂ ಗೀತೆಗಳು (Kannada Album Songs) ಅಥವಾ ಮ್ಯೂಸಿಕ್ ವಿಡಿಯೋಗಳು ಕೂಡ ಪ್ರೇಕ್ಷಕರ ಗಮನ ಸೆಳೆಯುತ್ತವೆ. ಅಂಥ ಹಾಡುಗಳ ಸಾಲಿಗೆ ‘ನೀನಿದ್ದರೆ’ (Neeniddare) ಎಂಬ ಹೊಸ ಗೀತೆ ಸೇರ್ಪಡೆ ಆಗಿದೆ. ‘ಮೊಗಾಚಿ ಲಾರಂ ಕ್ರಿಯೇಶನ್’ ಮೂಲಕ ಈ ಸಾಂಗ್ ನಿರ್ಮಾಣ ಆಗಿದೆ. ಇದರ ಅವಧಿ 5.52 ನಿಮಿಷ ಇದೆ. ಸಿರಿ ಮ್ಯೂಸಿಕ್ ಮೂಲಕ ಈ ಆಲ್ಬಂ ಸಾಂಗ್ (Album Song) ಬಿಡುಗಡೆ ಆಗಿದೆ. ಹಾಡಿನಿಂದ ಶುರುವಾದ ಈ ಪಯಣವು ಸಿನಿಮಾ ಮಾಡುವ ಕನಸನ್ನು ಹುಟ್ಟುಹಾಕಿದೆ. ಈ ಬಗ್ಗೆ ತಂಡದವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಹಿರಿಯ ನಟ ರಮೇಶ್ ಭಟ್ ಅವರು ‘ನೀನಿದ್ದರೆ..’ ಹಾಡನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ನಿರ್ಮಾಪಕರು ನನ್ನನ್ನು ಫಾದರ್ ಅಂತ ಕರೆಯುತ್ತಾರೆ. ಆದರೆ ನನಗೆ ಅವರು ಗಾಡ್‌ಫಾದರ್. ಮಂಗಳೂರಿಗೆ ಶೂಟಿಂಗ್ ಅಂತ ಹೋದಾಗ, ತಪ್ಪದೇ ಭೇಟಿಯಾಗುತ್ತಾರೆ ಮತ್ತು ಉಡುಗೊರೆ ನೀಡುತ್ತಾರೆ. ಇಂತಹವರ ಋಣ ತೀರಿಸಲು ಬ್ಯುಸಿ ಇದ್ದರೂ ಬಂದಿರುವೆ’ ಎಂದು ಹೇಳಿದರು. ಈ ವೇಳೆ ಹಿರಿಯ ನಟ ಟೆನ್ನಿಸ್ ಕೃಷ್ಣ ಕೂಡ ಉಪಸ್ಥಿತರಿದ್ದರು.

Neeniddare Album Song Team

Neeniddare Album Song Team

ಮಂಗಳೂರು ಮೂಲದವರಾದ, ಸದ್ಯ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ನೂರ್ ರ್ಬಟ್ ಅವರು ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ವಿನ್ಸೆಂಟ್ ಫರ್ನಾಂಡಿಸ್ ಕಾಸ್ಸಿಯಾ ಅವರು ಇದಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ನಿರ್ದೇಶನವನ್ನೂ ಮಾಡಿದ್ದಾರೆ. ಲಕ್ಷೀಕಾಂತ್ ಅವರ ಛಾಯಾಗ್ರಹಣ, ರಾಜೇಶ್ ಚೌಹಾಣ್ ಅವರ ಸಂಕಲನ ಈ ಹಾಡಿಗೆ ಇದೆ. ಲೈನೆಲ್ ಡಿಮೆಲ್ಲೊ ಅವರು ಸಂಗೀತ ನೀಡಿದ್ದಾರೆ.

ಹಿಮಗಿರಿ ಎಸ್ಟೇಟ್ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಈ ಹಾಡು ಮೂಡಿಬಂದಿರುವ ರೀತಿ ಹಾಗೂ ಕೇಳುಗರಿಂದ ಸಿಕ್ಕಿರುವ ಪಾಸಿಟಿವ್ ಪ್ರತಿಕ್ರಿಯಿಂದ ಈ ತಂಡಕ್ಕೆ ಖುಷಿ ಆಗಿದೆ. ಗಾಯಕಿ ಶಿಲ್ಪಾ ಕುಟೀನ್ಹಾ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಹಳೇ ಪ್ರೇಯಸಿ ಮತ್ತು ನಾಯಕಿ ಪಾತ್ರದಲ್ಲಿ ರಿಯಲ್ ಲೈಫ್ ತಾಯಿ-ಮಗಳು ನಟಿಸಿರುವುದು ವಿಶೇಷ.

ಇದನ್ನೂ ಓದಿ: ಯುರೋಪ್​ನಲ್ಲಿ ಚಿತ್ರೀಕರಣಗೊಂಡ ‘ಹನಿ ಹನಿ’ ಆಲ್ಬಂ ಸಾಂಗ್ ಬಿಡುಗಡೆ ಮಾಡಿದ ಅಶ್ವಿನಿ

ನಾಯಕನಾಗಿ ಅವಿಲ್ ರೊಡ್ರಿಗಸ್ ಅವರು ನಟಿಸಿದ್ದಾರೆ. ನಾಯಕಿಯಾಗಿ ಕೆರನ್ ಪಿಂಟೋ ಹಾಗೂ ಹಳೇ ಪ್ರೇಯಸಿಯಾಗಿ ಸ್ಮಿತಾ ಪಿಂಟೋ ಅಭಿನಯಿಸಿದ್ದಾರೆ. ಮಧುರ ಪ್ರೀತಿಯ ಮೆಲುಕಿನಂತೆ ಈ ಹಾಡು ಸಿದ್ಧವಾಗಿದೆ. ಇದನ್ನೇ ಒಂದು ಸಿನಿಮಾ ರೂಪದಲ್ಲಿ ಕಟ್ಟಿಕೊಡುವ ಆಲೋಚನೆ ಕೂಡ ತಂಡಕ್ಕೆ ಬಂದಿದೆ. ಅದಕ್ಕೆ ನಿರ್ಮಾಪಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆಯಂತೆ. ಶೀಘ್ರದಲ್ಲೇ ಸಿನಿಮಾ ಸೆಟ್ಟೇರಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ