AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಿಆರ್​ಕೆ ಆಡಿಯೋ’ದಲ್ಲಿ ‘ನೀನೊಂದು ಶಾಯರಿ’; ಕಾಡುವ ಕಿರುಚಿತ್ರಕ್ಕೆ ಸಿಕ್ತು ಮೆಚ್ಚುಗೆ

ರಾಕೇಶ್​ ಮಯ್ಯ ಮತ್ತು ಅಶ್ವಿತಾ ಹೆಗಡೆ ಅವರು ‘ನೀನೊಂದು ಶಾಯರಿ’ ಕಿರುಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಪ್ರೇಮಿಗಳಾಗಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಇಬ್ಬರ ಕಾಂಬಿನೇಷನ್​ ಚೆನ್ನಾಗಿ ಮೂಡಿಬಂದಿದೆ. ಸ್ವರಾ ಮತ್ತು ಸಾಗರ್​ ಎಂಬ ಪಾತ್ರಗಳಿಗೆ ಅವರು ಜೀವ ತುಂಬಿದ್ದಾರೆ. ಈ ಪಾತ್ರಗಳು ನೋಡುಗರಿಂದ ಪ್ರಶಂಸೆ ಗಳಿಸುತ್ತಿವೆ.

‘ಪಿಆರ್​ಕೆ ಆಡಿಯೋ’ದಲ್ಲಿ ‘ನೀನೊಂದು ಶಾಯರಿ’; ಕಾಡುವ ಕಿರುಚಿತ್ರಕ್ಕೆ ಸಿಕ್ತು ಮೆಚ್ಚುಗೆ
ರಾಕೇಶ್​ ಮಯ್ಯ, ಅಶ್ವಿತಾ ಹೆಗಡೆ
ಮದನ್​ ಕುಮಾರ್​
|

Updated on: Jan 18, 2024 | 5:31 PM

Share

ಕನ್ನಡದಲ್ಲಿ ಕಿರುಚಿತ್ರಗಳಿಗೇನೂ ಕೊರತೆ ಇಲ್ಲ. ಅವುಗಳ ನಡುವೆ ಕೆಲವು ಪ್ರಯತ್ನಗಳು ವಿಶೇಷವಾಗಿ ಗಮನ ಸೆಳೆಯುತ್ತವೆ. ಇತ್ತೀಚೆಗೆ ಪಿಆರ್​ಕೆ ಆಡಿಯೋ’ (PRK Audio) ಮೂಲಕ ‘ನೀನೊಂದು ಶಾಯರಿ’ ಶಾರ್ಟ್​ ಫಿಲ್ಮ್​ (Kannada Short Film) ಬಿಡುಗಡೆ ಆಗಿದೆ. 20 ನಿಮಿಷ ಅವಧಿಯ ಈ ಕಿರುಚಿತ್ರಕ್ಕೆ ವೀಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನೋಡಿದ ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಕೇವಲ ಎರಡು ಪಾತ್ರಗಳನ್ನು ಹೊಂದಿರುವ ‘ನೀನೊಂದು ಶಾಯರಿ’ (Neenondu Shayari) ಕಿರುಚಿತ್ರವು ತುಂಬ ಕಾವ್ಯಾತ್ಮಕವಾಗಿ ಮೂಡಿಬಂದಿದೆ. ದಿನ ಕಳೆದಂತೆ ‘ಪಿಆರ್​ಕೆ ಆಡಿಯೋ’ದಲ್ಲಿ ಇದರ ವೀಕ್ಷಣೆ ಹೆಚ್ಚಾಗುತ್ತಿದೆ.

ರಾಕೇಶ್​ ಮಯ್ಯ ಮತ್ತು ಅಶ್ವಿತಾ ಹೆಗಡೆ ಅವರು ‘ನೀನೊಂದು ಶಾಯರಿ’ ಕಿರುಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಪ್ರೇಮಿಗಳಾಗಿ ಅವರಿಬ್ಬರು ಕಾಣಿಸಿಕೊಂಡಿದ್ದಾರೆ. ಇಬ್ಬರ ಕಾಂಬಿನೇಷನ್​ ಚೆನ್ನಾಗಿ ಮೂಡಿಬಂದಿದೆ. ಸ್ವರಾ ಮತ್ತು ಸಾಗರ್​ ಎಂಬ ಪಾತ್ರಗಳಿಗೆ ಅವರು ಜೀವ ತುಂಬಿದ್ದಾರೆ. ಈ ಪಾತ್ರಗಳು ನೋಡುಗರಿಂದ ಪ್ರಶಂಸೆ ಗಳಿಸುತ್ತಿವೆ. ಒಂದು ಕವನದ ರೀತಿ ಮೂಡಿಬಂದಿರುವ ಈ ಕಿರುಚಿತ್ರದ ಲವ್​ಸ್ಟೋರಿ ಇಷ್ಟವಾಗುವಂತಿದೆ. ‘ಮಳೆ ಎಲ್ಲರಿಗೂ ರೊಮ್ಯಾಂಟಿಕ್​ ಆಗಿರುವುದಿಲ್ಲ. ಕೆಲವರಿಗೆ ಕಣ್ಣೀರು ಮರೆಮಾಚಲು, ಇನ್ನೂ ಕೆಲವರಿಗೆ ನೆನಪುಗಳ ಮರೆಯಲು..’ ಎಂಬಿತ್ಯಾದಿ ಡೈಲಾಗ್​ಗಳಿಂದಾಗಿ ‘ನೀನೊಂದು ಶಾಯರಿ’ಯ ಅಂದ ಹೆಚ್ಚಿದೆ.

ಇದನ್ನೂ ಓದಿ: ‘ಕಾಮಿಡಿ ಕಿಲಾಡಿಗಳು’ ನಟ ಸೀರುಂಡೆ ರಘು ಹೀರೋ ಆಗಿರುವ ‘ರಣಾಕ್ಷ’ ಚಿತ್ರದ ಆಡಿಯೋ ಬಿಡುಗಡೆ

ಭರತ ಕೆ. ತುಮಕೂರು ಅವರು ‘ನೀನೊಂದು ಶಾಯರಿ’ ಕಿರುಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಂಭಾಷಣೆ ಕೂಡ ಅವರದ್ದೇ. ಅವಿನಾಶ ಶಾಸ್ತ್ರಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಕಥೆಯ ಜೊತೆಗೆ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ. ಪ್ರಸನ್ನ ಕುಮಾರ್​ ಎಂ.ಎಸ್​. ಅವರ ಸಂಗೀತ ನಿರ್ದೇಶನ ಈ ಕಿರುಚಿತ್ರಕ್ಕಿದೆ. ಸಂಜೀವ್​ ಜಾಗಿರ್ದಾರ್​ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ‘4s ಪ್ರೊಡಕ್ಷನ್​’ ಮತ್ತು ‘ಕ್ಲ್ಯಾಪ್​ಬೋರ್ಡ್​ ಪ್ರೊಡಕ್ಷನ್​’ ಮೂಲಕ ಈ ಶಾರ್ಟ್​ಫಿಲ್ಮ್​ ನಿರ್ಮಾಣ ಆಗಿದೆ.

‘ನೀನೊಂದು ಶಾಯರಿ’ ಕಿರುಚಿತ್ರ:

ರಂಗಭೂಮಿ ಹಿನ್ನೆಲೆ ಹೊಂದಿರುವ ಅಶ್ವಿತಾ ಹೆಗಡೆ ಅವರು ಈ ಮೊದಲು ‘ಕಂಬ್ಳಿಹುಳ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರು ‘ನೀನೊಂದು ಶಾಯರಿ’ ಶಾರ್ಟ್​ ಫಿಲ್ಮ್​ ಮೂಲಕ ಗಮನ ಸಳೆಯುತ್ತಿದ್ದಾರೆ. ಇನ್ನು, ‘ಮಗಳು ಜಾನಕಿ’ ಸೀರಿಯಲ್​ನಲ್ಲಿ ಪ್ರಮುಖ ಪಾತ್ರ ಮಾಡಿ ಜನಮನ ಗೆದ್ದ ನಟ ರಾಕೇಶ್​ ಮಯ್ಯ ಅವರು ಈಗಾಗಲೇ ‘ಖುಷ್​ ಖುಷಿಯಾಗಿ’ ರೀತಿಯ ಕಿರುಚಿತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರ ನಟನೆಯಿಂದ ‘ನೀನೊಂದು ಶಾಯರಿ’ ತೂಕ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?