AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಎನ್‌ಟಿಆರ್ ಕೈತಪ್ಪಿದ ದೊಡ್ಡ ಚಿತ್ರ? ತಮಿಳು ನಟ ಸೂರ್ಯನ ಎಂಟ್ರಿ

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ 'ಜೈಲರ್ 2' ನಂತರದ ಬಹುನಿರೀಕ್ಷಿತ ಸಿನಿಮಾದ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಆರಂಭದಲ್ಲಿ ಜೂನಿಯರ್ ಎನ್‌ಟಿಆರ್ ನಾಯಕರಾಗಿ ಕಾಣಿಸಿಕೊಳ್ಳುವ ವದಂತಿಗಳಿದ್ದವು. ಈಗ ಕಾಲಿವುಡ್ ನಟ ಸೂರ್ಯ ಜೂನಿಯರ್ ಎನ್‌ಟಿಆರ್ ಬದಲಿಗೆ ನಾಯಕರಾಗಿ ನಟಿಸಲಿದ್ದಾರೆ ಎಂಬ ಸುದ್ದಿಯಿದೆ .

ಜೂ. ಎನ್‌ಟಿಆರ್ ಕೈತಪ್ಪಿದ ದೊಡ್ಡ ಚಿತ್ರ? ತಮಿಳು ನಟ ಸೂರ್ಯನ ಎಂಟ್ರಿ
ಸೂರ್ಯ-ಎನ್​​ಟಿಆರ್
ರಾಜೇಶ್ ದುಗ್ಗುಮನೆ
|

Updated on: Jun 17, 2026 | 10:28 AM

Share

ತಮಿಳಿನ ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಸದ್ಯ ‘ಜೈಲರ್ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಅವರ ಮುಂದಿನ ಬಿಗ್ ಬಜೆಟ್ ಸಿನಿಮಾದ ಕುರಿತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೊಸದೊಂದು ಬಿಸಿಬಿಸಿ ಚರ್ಚೆ ಆರಂಭವಾಗಿದೆ. ನೆಲ್ಸನ್ ಅವರ ಮುಂದಿನ ಪ್ರಾಜೆಕ್ಟ್‌ಗೆ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಬದಲಿಗೆ ಕಾಲಿವುಡ್ ನಟ ಸೂರ್ಯ (Suriya) ನಾಯಕರಾಗಿ ನಟಿಸಲಿದ್ದಾರೆ ಎಂಬ ಬಲವಾದ ಸುದ್ದಿಯೊಂದು ಹರಿದಾಡುತ್ತಿದೆ.

2025ರಲ್ಲಿ ನಿರ್ಮಾಪಕ ನಾಗವಂಶಿ ಅವರು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದಲ್ಲಿ ಹೊಸ ಚಿತ್ರವೊಂದನ್ನು ನಿರ್ಮಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ, ಆ ಚಿತ್ರಕ್ಕೆ ಟಾಲಿವುಡ್‌ನ ಜೂನಿಯರ್ ಎನ್‌ಟಿಆರ್ ಅವರೇ ಹೀರೋ ಎಂಬ ವದಂತಿಗಳು ಜೋರಾಗಿದ್ದವು. ಆದರೆ, ಚಿತ್ರತಂಡದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿರಲಿಲ್ಲ.

ಈಗ ಕೇಳಿಬರುತ್ತಿರುವ ಲೇಟೆಸ್ಟ್ ಮಾಹಿತಿಯ ಪ್ರಕಾರ, ಜೂನಿಯರ್ ಎನ್‌ಟಿಆರ್ ಜಾಗಕ್ಕೆ ಸೂರ್ಯ ಅವರ ಹೆಸರು ಕೇಳಿ ಬರುತ್ತಿದೆ. ‘ಜೈಲರ್ 2’ ಮುಗಿದ ತಕ್ಷಣವೇ ನೆಲ್ಸನ್ ಮತ್ತು ಸೂರ್ಯ ಕಾಂಬಿನೇಷನ್‌ನ ಹೊಸ ಸಿನಿಮಾ ಸೆಟ್ಟೇರಲಿದೆ ಎನ್ನಲಾಗುತ್ತಿದೆ. ಆದರೆ ಈ ವರದಿಗಳು ಇನ್ನೂ ಅಧಿಕೃತವಾಗಿ ಸಾಬೀತಾಗಬೇಕಿದೆ.

ಇದನ್ನೂ ಓದಿ: ‘ಕರುಪ್ಪು’ ಚಿತ್ರ ಥಿಯೇಟರ್​​​ನಲ್ಲಿ ಹಿಟ್​, ಒಟಿಟಿಯಲ್ಲಿ ಫ್ಲಾಪ್

ಸೂರ್ಯ ಸದ್ಯ ‘ಕರುಪ್ಪು’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಜೂನ್ 12 ರಿಂದ ಸ್ಟ್ರೀಮಿಂಗ್ ಆಗುತ್ತಿದ್ದು, ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಇದರ ಬೆನ್ನಲ್ಲೇ ಸೂರ್ಯ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ವಿಶ್ವನಾಥ್ ಆ್ಯಂಡ್ ಸನ್ಸ್’ ಬಿಡುಗಡೆಗೆ ಸಜ್ಜಾಗಿದೆ.

ಜೂನಿಯರ್ ಎನ್‌ಟಿಆರ್ ಕೈಯಲ್ಲಿದೆ ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’!

ಇತ್ತ ಜೂನಿಯರ್ ಎನ್‌ಟಿಆರ್ ಅವರು ಪ್ರಶಾಂತ್ ನೀಲ್ ನಿರ್ದೇಶನದ ಬಿಗ್ ಆಕ್ಷನ್ ಎಂಟರ್‌ಟೈನರ್ ‘ಡ್ರ್ಯಾಗನ್’ ಸಿನಿಮಾಗಾಗಿ ಸಜ್ಜಾಗುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಇದರ ಫಸ್ಟ್ ಗ್ಲಿಂಪ್ಸ್‌ನಲ್ಲಿ ಎನ್‌ಟಿಆರ್ ಅಬ್ಬರಿಸಿದ್ದಾರೆ. 1967ರ ಅಂತರರಾಷ್ಟ್ರೀಯ ಅಫೀಮು ದಂಧೆ ಮತ್ತು ಅಪರಾಧ ಲೋಕದ ಹಿನ್ನೆಲೆಯಲ್ಲಿ ಈ ಸಿನಿಮಾ ಮೂಡಿಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌