AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ.

ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Dec 09, 2023 | 12:37 PM

Share

ಮಹೇಶ್ ಬಾಬು (Mahesh Babu) ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಆಂಧ್ರ ಪ್ರದೇಶ, ಕರ್ನಾಟಕ, ತಮಿಳು ನಾಡು ಮಾತ್ರವಲ್ಲದೇ ವಿದೇಶದಲ್ಲೂ ಅವರನ್ನು ಇಷ್ಟಪಡುವ ಅನೇಕರಿದ್ದಾರೆ. ಈಗ ಅವರನ್ನು ನೆಟ್​ಫ್ಲಿಕ್ಸ್ ಸಿಇಒ ಟೆಡ್ ಸೆರಾಂಡಸ್ ಭೇಟಿ ಮಾಡಿದ್ದಾರೆ. ಹೈದರಾಬಾದ್​ನಲ್ಲಿರುವ ಮಹೇಶ್ ಬಾಬು ಮನೆಗೆ ಟೆಡ್ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಮಹೇಶ್ ಬಾಬು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ. ಆ ಬಳಿಕ ಅವರು ಮಹೇಶ್ ಬಾಬು ಮನೆಗೆ ತೆರಳಿದ್ದಾರೆ. ಮಾತುಕತೆಯಲ್ಲಿ ಏನೆಲ್ಲ ನಡೆದಿದೆ ಎನ್ನುವ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ.

ಇಂದು (ಡಿಸೆಂಬರ್ 9) ಬೆಳಿಗ್ಗೆ ಟೆಡ್ ಸೆರಾಂಡಸ್ ಹಾಗೂ ಮಹೇಶ್ ಬಾಬು ಭೇಟಿ ಆಗಿದ್ದಾರೆ. ತ್ರಿವಿಕ್ರಂ ಶ್ರೀನಿವಾಸ್ ಕೂಡ ಈ ಸಂದರ್ಭದಲ್ಲಿ ಇದ್ದರು. ‘ಕಾಫಿ ಹೀರಿ ಚಿಲ್ ಮಾಡಿದೆವು. ದೂರದೃಷ್ಟಿಯುಳ್ಳ ಟೆಡ್​ ಸೆರಾಂಡಸ್​ ಮತ್ತು ಅವರ ತಂಡದೊಂದಿಗೆ ಎಂಟರ್​​ಟೇನ್​ಮೆಂಟ್ ಇಂಡಸ್ಟ್ರಿಯ ಭವಿಷ್ಯದ ಕುರಿತು ಕೆಲವು ಆಸಕ್ತಿದಾಯಕ ವಿಚಾರಗಳ ಕುರಿತು ಚರ್ಚೆ ಮಾಡಿದೆವು’ ಎಂದು ಮಹೇಶ್ ಬಾಬು ಮಾತನಾಡಿದ್ದಾರೆ.

ಇದನ್ನೂ ಓದಿ: ನಾಗಾರ್ಜುನ ಹೊಸ ಸಿನಿಮಾ ‘ನಾ ಸಾಮಿ ರಂಗ’; ಮಹೇಶ್ ಬಾಬು ಜೊತೆ ಕ್ಲ್ಯಾಶ್​ ಆಗುತ್ತಾ ಈ ಚಿತ್ರ?

ಸದ್ಯ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ. ತ್ರಿವಿಕ್ರಂ ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ