AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ.

ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Dec 09, 2023 | 12:37 PM

Share

ಮಹೇಶ್ ಬಾಬು (Mahesh Babu) ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಆಂಧ್ರ ಪ್ರದೇಶ, ಕರ್ನಾಟಕ, ತಮಿಳು ನಾಡು ಮಾತ್ರವಲ್ಲದೇ ವಿದೇಶದಲ್ಲೂ ಅವರನ್ನು ಇಷ್ಟಪಡುವ ಅನೇಕರಿದ್ದಾರೆ. ಈಗ ಅವರನ್ನು ನೆಟ್​ಫ್ಲಿಕ್ಸ್ ಸಿಇಒ ಟೆಡ್ ಸೆರಾಂಡಸ್ ಭೇಟಿ ಮಾಡಿದ್ದಾರೆ. ಹೈದರಾಬಾದ್​ನಲ್ಲಿರುವ ಮಹೇಶ್ ಬಾಬು ಮನೆಗೆ ಟೆಡ್ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಮಹೇಶ್ ಬಾಬು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ. ಆ ಬಳಿಕ ಅವರು ಮಹೇಶ್ ಬಾಬು ಮನೆಗೆ ತೆರಳಿದ್ದಾರೆ. ಮಾತುಕತೆಯಲ್ಲಿ ಏನೆಲ್ಲ ನಡೆದಿದೆ ಎನ್ನುವ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ.

ಇಂದು (ಡಿಸೆಂಬರ್ 9) ಬೆಳಿಗ್ಗೆ ಟೆಡ್ ಸೆರಾಂಡಸ್ ಹಾಗೂ ಮಹೇಶ್ ಬಾಬು ಭೇಟಿ ಆಗಿದ್ದಾರೆ. ತ್ರಿವಿಕ್ರಂ ಶ್ರೀನಿವಾಸ್ ಕೂಡ ಈ ಸಂದರ್ಭದಲ್ಲಿ ಇದ್ದರು. ‘ಕಾಫಿ ಹೀರಿ ಚಿಲ್ ಮಾಡಿದೆವು. ದೂರದೃಷ್ಟಿಯುಳ್ಳ ಟೆಡ್​ ಸೆರಾಂಡಸ್​ ಮತ್ತು ಅವರ ತಂಡದೊಂದಿಗೆ ಎಂಟರ್​​ಟೇನ್​ಮೆಂಟ್ ಇಂಡಸ್ಟ್ರಿಯ ಭವಿಷ್ಯದ ಕುರಿತು ಕೆಲವು ಆಸಕ್ತಿದಾಯಕ ವಿಚಾರಗಳ ಕುರಿತು ಚರ್ಚೆ ಮಾಡಿದೆವು’ ಎಂದು ಮಹೇಶ್ ಬಾಬು ಮಾತನಾಡಿದ್ದಾರೆ.

ಇದನ್ನೂ ಓದಿ: ನಾಗಾರ್ಜುನ ಹೊಸ ಸಿನಿಮಾ ‘ನಾ ಸಾಮಿ ರಂಗ’; ಮಹೇಶ್ ಬಾಬು ಜೊತೆ ಕ್ಲ್ಯಾಶ್​ ಆಗುತ್ತಾ ಈ ಚಿತ್ರ?

ಸದ್ಯ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ. ತ್ರಿವಿಕ್ರಂ ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More