ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ.

ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ
ಮಹೇಶ್ ಬಾಬು
Follow us
|

Updated on: Dec 09, 2023 | 12:37 PM

ಮಹೇಶ್ ಬಾಬು (Mahesh Babu) ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಆಂಧ್ರ ಪ್ರದೇಶ, ಕರ್ನಾಟಕ, ತಮಿಳು ನಾಡು ಮಾತ್ರವಲ್ಲದೇ ವಿದೇಶದಲ್ಲೂ ಅವರನ್ನು ಇಷ್ಟಪಡುವ ಅನೇಕರಿದ್ದಾರೆ. ಈಗ ಅವರನ್ನು ನೆಟ್​ಫ್ಲಿಕ್ಸ್ ಸಿಇಒ ಟೆಡ್ ಸೆರಾಂಡಸ್ ಭೇಟಿ ಮಾಡಿದ್ದಾರೆ. ಹೈದರಾಬಾದ್​ನಲ್ಲಿರುವ ಮಹೇಶ್ ಬಾಬು ಮನೆಗೆ ಟೆಡ್ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಮಹೇಶ್ ಬಾಬು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ. ಆ ಬಳಿಕ ಅವರು ಮಹೇಶ್ ಬಾಬು ಮನೆಗೆ ತೆರಳಿದ್ದಾರೆ. ಮಾತುಕತೆಯಲ್ಲಿ ಏನೆಲ್ಲ ನಡೆದಿದೆ ಎನ್ನುವ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ.

ಇಂದು (ಡಿಸೆಂಬರ್ 9) ಬೆಳಿಗ್ಗೆ ಟೆಡ್ ಸೆರಾಂಡಸ್ ಹಾಗೂ ಮಹೇಶ್ ಬಾಬು ಭೇಟಿ ಆಗಿದ್ದಾರೆ. ತ್ರಿವಿಕ್ರಂ ಶ್ರೀನಿವಾಸ್ ಕೂಡ ಈ ಸಂದರ್ಭದಲ್ಲಿ ಇದ್ದರು. ‘ಕಾಫಿ ಹೀರಿ ಚಿಲ್ ಮಾಡಿದೆವು. ದೂರದೃಷ್ಟಿಯುಳ್ಳ ಟೆಡ್​ ಸೆರಾಂಡಸ್​ ಮತ್ತು ಅವರ ತಂಡದೊಂದಿಗೆ ಎಂಟರ್​​ಟೇನ್​ಮೆಂಟ್ ಇಂಡಸ್ಟ್ರಿಯ ಭವಿಷ್ಯದ ಕುರಿತು ಕೆಲವು ಆಸಕ್ತಿದಾಯಕ ವಿಚಾರಗಳ ಕುರಿತು ಚರ್ಚೆ ಮಾಡಿದೆವು’ ಎಂದು ಮಹೇಶ್ ಬಾಬು ಮಾತನಾಡಿದ್ದಾರೆ.

ಇದನ್ನೂ ಓದಿ: ನಾಗಾರ್ಜುನ ಹೊಸ ಸಿನಿಮಾ ‘ನಾ ಸಾಮಿ ರಂಗ’; ಮಹೇಶ್ ಬಾಬು ಜೊತೆ ಕ್ಲ್ಯಾಶ್​ ಆಗುತ್ತಾ ಈ ಚಿತ್ರ?

ಸದ್ಯ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ. ತ್ರಿವಿಕ್ರಂ ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್