AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ.

ಹೈದರಾಬಾದ್​​ಗೆ ಬಂದು ಮಹೇಶ್ ಬಾಬು ಜೊತೆ ಕಾಫಿ ಕುಡಿದ ನೆಟ್​ಫ್ಲಿಕ್ಸ್ ಸಿಇಒ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Dec 09, 2023 | 12:37 PM

Share

ಮಹೇಶ್ ಬಾಬು (Mahesh Babu) ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಆಂಧ್ರ ಪ್ರದೇಶ, ಕರ್ನಾಟಕ, ತಮಿಳು ನಾಡು ಮಾತ್ರವಲ್ಲದೇ ವಿದೇಶದಲ್ಲೂ ಅವರನ್ನು ಇಷ್ಟಪಡುವ ಅನೇಕರಿದ್ದಾರೆ. ಈಗ ಅವರನ್ನು ನೆಟ್​ಫ್ಲಿಕ್ಸ್ ಸಿಇಒ ಟೆಡ್ ಸೆರಾಂಡಸ್ ಭೇಟಿ ಮಾಡಿದ್ದಾರೆ. ಹೈದರಾಬಾದ್​ನಲ್ಲಿರುವ ಮಹೇಶ್ ಬಾಬು ಮನೆಗೆ ಟೆಡ್ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಮಹೇಶ್ ಬಾಬು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಟೆಡ್ ಸೆರಾಂಡಸ್ ಅವರು ಇತ್ತೀಚೆಗೆ ಹೈದರಾಬಾದ್​ಗೆ ಆಗಮಿಸಿದ್ದಾರೆ. ಅವರು ನೇರವಾಗಿ ರಾಮ್ ಚರಣ್ ಹಾಗೂ ಚಿರಂಜೀವಿ ಅವರ ಮನೆಗೆ ಭೇಟಿ ನೀಡಿದ್ದಾರೆ. ಭಾರತೀಯ ಸಿನಿಮಾ ರಂಗದ ಕುರಿತು, ಇಲ್ಲಿನ ಬೆಳವಣಿಗೆ ಕುರಿತು ಮಾತುಕತೆ ನಡೆದಿದೆ. ಆ ಬಳಿಕ ಅವರು ಮಹೇಶ್ ಬಾಬು ಮನೆಗೆ ತೆರಳಿದ್ದಾರೆ. ಮಾತುಕತೆಯಲ್ಲಿ ಏನೆಲ್ಲ ನಡೆದಿದೆ ಎನ್ನುವ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ.

ಇಂದು (ಡಿಸೆಂಬರ್ 9) ಬೆಳಿಗ್ಗೆ ಟೆಡ್ ಸೆರಾಂಡಸ್ ಹಾಗೂ ಮಹೇಶ್ ಬಾಬು ಭೇಟಿ ಆಗಿದ್ದಾರೆ. ತ್ರಿವಿಕ್ರಂ ಶ್ರೀನಿವಾಸ್ ಕೂಡ ಈ ಸಂದರ್ಭದಲ್ಲಿ ಇದ್ದರು. ‘ಕಾಫಿ ಹೀರಿ ಚಿಲ್ ಮಾಡಿದೆವು. ದೂರದೃಷ್ಟಿಯುಳ್ಳ ಟೆಡ್​ ಸೆರಾಂಡಸ್​ ಮತ್ತು ಅವರ ತಂಡದೊಂದಿಗೆ ಎಂಟರ್​​ಟೇನ್​ಮೆಂಟ್ ಇಂಡಸ್ಟ್ರಿಯ ಭವಿಷ್ಯದ ಕುರಿತು ಕೆಲವು ಆಸಕ್ತಿದಾಯಕ ವಿಚಾರಗಳ ಕುರಿತು ಚರ್ಚೆ ಮಾಡಿದೆವು’ ಎಂದು ಮಹೇಶ್ ಬಾಬು ಮಾತನಾಡಿದ್ದಾರೆ.

ಇದನ್ನೂ ಓದಿ: ನಾಗಾರ್ಜುನ ಹೊಸ ಸಿನಿಮಾ ‘ನಾ ಸಾಮಿ ರಂಗ’; ಮಹೇಶ್ ಬಾಬು ಜೊತೆ ಕ್ಲ್ಯಾಶ್​ ಆಗುತ್ತಾ ಈ ಚಿತ್ರ?

ಸದ್ಯ ಮಹೇಶ್ ಬಾಬು ಅವರು ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ. ತ್ರಿವಿಕ್ರಂ ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ