AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ ನಂಬಿ 100 ಕೋಟಿ ರೂ. ಕಳೆದುಕೊಂಡ ನೆಟ್​ಫ್ಲಿಕ್ಸ್​! 200 ಕೋಟಿಯಲ್ಲಿ ಈಗ ಇನ್ನೊಂದು ಪ್ಲ್ಯಾನ್​

ಭಾರತೀಯ ಚಿತ್ರರಂಗದಲ್ಲಿ ಬಾಹುಬಲಿ ಸಿನಿಮಾ ಎಬ್ಬಿಸಿದ ಹವಾ ಸಣ್ಣದೇನಲ್ಲ. ಆದರೆ ಅದೇ ಬಾಹುಬಲಿಯನ್ನು ನಂಬಿಕೊಂಡಿದ್ದಕ್ಕಾಗಿ ನೆಟ್​ಫ್ಲಿಕ್ಸ್​ ಸಂಸ್ಥೆಗೆ ಬರೋಬ್ಬರಿ 100 ಕೋಟಿ ರೂ. ನಷ್ಟ ಆಗಿದೆ!

‘ಬಾಹುಬಲಿ’ ನಂಬಿ 100 ಕೋಟಿ ರೂ. ಕಳೆದುಕೊಂಡ ನೆಟ್​ಫ್ಲಿಕ್ಸ್​! 200 ಕೋಟಿಯಲ್ಲಿ ಈಗ ಇನ್ನೊಂದು ಪ್ಲ್ಯಾನ್​
ಬಾಹುಬಲಿ - ನೆಟ್​ಫ್ಲಿಕ್ಸ್​ ವೆಬ್​ ಸಿರೀಸ್​
ಮದನ್​ ಕುಮಾರ್​
| Edited By: |

Updated on: Mar 17, 2021 | 5:14 PM

Share

ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಆ್ಯಕ್ಷನ್​ ಕಟ್​ ಹೇಳಿದ್ದ ಬಾಹುಬಲಿ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬಂದಿತ್ತು. ಎರಡೂ ಪಾರ್ಟ್​​ಗೆ ಸಿಕ್ಕಾಪಟ್ಟೆ ಕಮಾಯಿ ಆಗಿತ್ತು. ಆದರೆ ಬಾಹುಬಲಿಯ ಕಥೆ ಅಷ್ಟಕ್ಕೇ ಮುಗಿಯುವಂಥದ್ದಲ್ಲ. ಮೊದಲ ಪಾರ್ಟ್​ಗಿಂತಲೂ ಮುಂಚಿನ ಕಥೆ ಏನು ಎಂಬುದನ್ನು ತೋರಿಸಲು ಒಂದು ಹೊಸ ಯೋಜನೆ ರೂಪಿಸಲಾಗಿತ್ತು. ಆದರೆ ಅದರಲ್ಲಿ ಈಗ ದೊಡ್ಡ ಬದಲಾವಣೆ ಆಗಿದೆ.

‘ಬಾಹುಬಲಿ: ದಿ ಬಿಗಿನಿಂಗ್’​ ಮತ್ತು ‘ಬಾಹುಬಲಿ: ದಿ ಕನ್​ಕ್ಲೂಷನ್​’ ಸಿನಿಮಾಗಳ ಪ್ರೀಕ್ವೆಲ್​ ಮಾಡಲು ಈ ಹಿಂದೆ ಪ್ಲ್ಯಾನ್​ ಮಾಡಲಾಗಿತ್ತು. ಅದಕ್ಕೆ ‘ಬಾಹುಬಲಿ: ಬಿಫೋರ್​ ದಿ ಬಿಗಿನಿಂಗ್​’ ಎಂದು ಹೆಸರಿಡಲಾಗಿತ್ತು. ಹಾಗಂತ ಅದು ಸಿನಿಮಾ ಅಲ್ಲ. ಬದಲಿಗೆ ವೆಬ್​ ಸಿರೀಸ್​ ರೂಪದಲ್ಲಿ ರಾಜಮಾತೆ ಶಿವಗಾಮಿಯ ಕಥೆ ಹೇಳುವುದು ಇದರ ಉದ್ದೇಶ. ಅದನ್ನು ನೆಟ್​ಫ್ಲಿಕ್ಸ್​ ಸಂಸ್ಥೆ ನಿರ್ಮಾಣ ಮಾಡುತ್ತಿತ್ತು. ಮೃಣಾಲ್​ ಠಾಕೂರ್ ಮುಖ್ಯ ಪಾತ್ರ ಮಾಡುತ್ತಿದ್ದು ಈಗಾಗಲೇ ಚಿತ್ರೀಕರಣ ಕೂಡ ಮುಗಿದಿತ್ತು. ಆದರೆ ಈಗ ನೆಟ್​ಫ್ಲಿಕ್ಸ್​ ಸಂಸ್ಥೆ ಒಂದು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಅದರಿಂದ 100 ಕೋಟಿ ರೂ. ನಷ್ಟ ಮಾಡಿಕೊಳ್ಳುತ್ತಿದೆ!

ಹೌದು, ಈಗಾಗಲೇ ಚಿತ್ರೀಕರಣ ಆಗಿರುವ ದೃಶ್ಯಗಳು ನೆಟ್​ಫ್ಲಿಕ್ಸ್​ನವರಿಗೆ ಕಿಂಚಿತ್ತೂ ಸಮಾಧಾನ ತಂದಿಲ್ಲವಂತೆ. ಹಾಗಾಗಿ 100 ಕೋಟಿ ರೂ. ಖರ್ಚು ಮಾಡಿ ಚಿತ್ರೀಕರಣ ಮಾಡಿರುವ 9 ಎಪಿಸೋಡ್​ಗಳ ಈ ವೆಬ್​ಸರಣಿಯನ್ನು ಕಸದ ಬುಟ್ಟಿಗೆ ಎಸೆಯಲು ತೀರ್ಮಾನಿಸಲಾಗಿದೆ. ಅದರ ಬದಲಿಗೆ, ಮತ್ತೆ 200 ಕೋಟಿ ರೂ. ಬಜೆಟ್​ನಲ್ಲಿ ಹೊಸದಾಗಿ ಚಿತ್ರೀಕರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ನಿಜವಾಗಿಯೂ ಒಂದು ಸಂಸ್ಥೆ ಹೀಗೆ ನೂರು ಕೋಟಿ ರೂ. ಕಳೆದುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಸಿನಿಪ್ರಿಯರ ವಲಯದಲ್ಲಿ ಕೇಳಿಬರುತ್ತಿದೆ.

ಈ ಬಗ್ಗೆ ಹಲವು ಕಡೆ ವರದಿ ಆಗಿದೆ. ಆದರೆ ಅಧಿಕೃತವಾಗಿ ನೆಟ್​ಫ್ಲಿಕ್ಸ್​ನಲ್ಲಿ ಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಾಜೆಕ್ಟ್​ಗೆ ರಾಜಮೌಳಿ ಕೂಡ ಬಂಡವಾಳ ಹೂಡುತ್ತಿದ್ದಾರೆ. ಆದರೆ ಅವರು ಸಹ ಈ ಗಾಸಿಪ್​ ಬಗ್ಗೆ ಮಾತನಾಡಿಲ್ಲ. ಸದ್ಯ ಅವರು ಆರ್​ಆರ್​ಆರ್​ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘RRR’ ಚಿತ್ರದಲ್ಲಿ ಜ್ಯೂ. ಎನ್​ಟಿಆರ್​, ರಾಮ್​​ ಚರಣ್​ ಹಾಗೂ ಆಲಿಯಾ ಭಟ್​ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಆಲಿಯಾ ಜನ್ಮದಿನದ ಪ್ರಯುಕ್ತ ಮಾ.15ರಂದು ಅವರ ಪಾತ್ರದ ಫಸ್ಟ್​ಲುಕ್​ ರಿಲೀಸ್​ ಮಾಡಲಾಗಿದ್ದು, ಅಭಿಮಾನಿಗಳ ಮೆಚ್ಚುಗೆ ಗಳಿಸಿದೆ.

ಇದನ್ನೂ ಓದಿ: ಟಿವಿ9 ಜೊತೆ ಬಾಹುಬಲಿ, ಭಜರಂಗಿ ಭಾಯ್ ಜಾನ್, RRR ಸಿನಿಮಾಗಳ ಕಥೆಗಾರ ವಿಜಯೇಂದ್ರ ಪ್ರಸಾದ್ ಮಾತು

ಸ್ನೇಹಿತರ ಅಕೌಂಟ್​ನಿಂದ ನೆಟ್​ಫ್ಲಿಕ್ಸ್​ ನೋಡುತ್ತಿರುವವರಿಗೆ ಕಹಿ ಸುದ್ದಿ; ಶೀಘ್ರದಲ್ಲೇ ಬರಲಿದೆ ಹೊಸ ನಿಯಮ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ