AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಅಂಕಲ್​ ಅಂತ ಹೀಯಾಳಿಸಿದ್ರು, ಈಗ ಛೋಟಾ ಭೀಮ್​ ಅಂದ್ರು: ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಭಾಸ್

ಇತ್ತೀಚಿನ ದಿನಗಳಲ್ಲಿ ಪ್ರಭಾಸ್ ಅವರು ಫಿಟ್ನೆಸ್​ ವಿಚಾರದಲ್ಲಿ ಹಳಿ ತಪ್ಪಿದ್ದಾರೆ. ಅನೇಕ ಫೋಟೋಗಳು ಅದಕ್ಕೆ ಸಾಕ್ಷಿ ಒದಗಿಸುತ್ತಿವೆ. ಫ್ಯಾಟ್​ ಅವತಾರದಲ್ಲಿ ಅವರನ್ನು ನೋಡಿದ ಅನೇಕರು ಹೀಯಾಳಿಸುತ್ತಿದ್ದಾರೆ.

ಅಂದು ಅಂಕಲ್​ ಅಂತ ಹೀಯಾಳಿಸಿದ್ರು, ಈಗ ಛೋಟಾ ಭೀಮ್​ ಅಂದ್ರು: ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಭಾಸ್
ಟ್ರೋಲ್ ಆಗುತ್ತಿರುವ ಪ್ರಭಾಸ್​ ಫೋಟೋ
Follow us
TV9 Web
| Updated By: ಮದನ್​ ಕುಮಾರ್​

Updated on: Sep 30, 2021 | 9:15 AM

ನಟ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ ಎಂಬುದೇನೋ ನಿಜ. ಅದರೆ ಅದೇಕೋ ಗೊತ್ತಿಲ್ಲ ಉತ್ತರ ಭಾರತದ ಮಂದಿ ಮಾತ್ರ ಇತ್ತೀಚೆಗೆ ಪ್ರಭಾಸ್​ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ. ಫಿಟ್ನೆಸ್​ ವಿಚಾರವನ್ನೇ ಮುಖ್ಯವಾಗಿ ಇಟ್ಟುಕೊಂಡು ಹೀನಾಯವಾಗಿ ಕಮೆಂಟ್​ ಮಾಡಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ಅವರನ್ನು ಕೆಲವರು ‘ಅಂಕಲ್​’ ಎಂದು ಹೀಯಾಳಿಸಿದ್ದರು. ಈಗ ಛೋಟಾ ಭೀಮ್​ ಅಂತ ಕರೆಯುತ್ತಿದ್ದಾರೆ. ಇದು ಪ್ರಭಾಸ್​ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ಮೂಡಿಸಿದೆ.

ಇತ್ತೀಚಿನ ದಿನಗಳಲ್ಲಿ ಪ್ರಭಾಸ್ ಅವರು ಫಿಟ್ನೆಸ್​ ವಿಚಾರದಲ್ಲಿ ಹಳಿ ತಪ್ಪಿದ್ದಾರೆ. ಅನೇಕ ಫೋಟೋಗಳು ಅದಕ್ಕೆ ಸಾಕ್ಷಿ ಒದಗಿಸುತ್ತಿವೆ. ಫ್ಯಾಟ್​ ಅವತಾರದಲ್ಲಿ ಅವರನ್ನು ನೋಡಿದ ಅನೇಕರು ಹೀಯಾಳಿಸುತ್ತಿದ್ದಾರೆ. ದಕ್ಷಿಣ ಭಾರತದ ಮಂದಿ ಈ ರೀತಿ ಕಾಲೆಳೆಯುತ್ತಿಲ್ಲ. ಬದಲಿಗೆ, ಉತ್ತರ ಭಾರತದ ಹಿಂದಿ ಭಾಷಿಕರು ತಮ್ಮ ಕಮೆಂಟ್​ಗಳ ಮೂಲಕ ಪ್ರಭಾಸ್​ ಅವರನ್ನು ಹೀನಾಯವಾಗಿ ಟ್ರೋಲ್​ ಮಾಡುತ್ತಿದ್ದಾರೆ. ‘ಈ ಹೀರೋಗಳು ವಯಸ್ಸಾದ ಬಳಿಕ ನಿವೃತ್ತಿ ಪಡೆದುಕೊಂಡು ತಮಗೆ ಸೂಕ್ತ ಆಗುವ ಪಾತ್ರವನ್ನಷ್ಟೇ ಮಾಡಬೇಕು. ತಮಗಿಂದ ಅರ್ಧ ವಯಸ್ಸಿನ ನಾಯಕಿಯರ ಜೊತೆ ರೊಮ್ಯಾನ್​ ಮಾಡಬಾರದು’ ಎಂದೆಲ್ಲ ಜನರು ಕಮೆಂಟ್​ ಮಾಡಿದ್ದಾರೆ.

‘ಆದಿಪುರುಷ್​’ ಚಿತ್ರದ ಮೂಲಕ ಹಿಂದಿಯಲ್ಲಿ ಕಮಾಲ್​ ಮಾಡಬೇಕು ಎಂದುಕೊಂಡಿರುವ ಪ್ರಭಾಸ್​ಗೆ ಈ ರೀತಿ ಟ್ರೋಲ್​ ಕಾಟ ಎದುರಾದರೆ ಅದು ಗಲ್ಲಾಪೆಟ್ಟಿಗೆ ಮೇಲೆ ಪರಿಣಾಮ ಬೀರಿದರೂ ಅಚ್ಚರಿ ಏನಿಲ್ಲ. ಸದ್ಯ ಪ್ರಭಾಸ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ‘ಆದಿಪುರುಷ್​’ ಚಿತ್ರದಲ್ಲಿ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್​ ಮತ್ತು ಪೂಜಾ ಹೆಗ್ಡೆ ನಟಿಸಿರುವ ‘ರಾಧೆ ಶ್ಯಾಮ್​’ ಸಿನಿಮಾ 2022ರ ಜ.14ರಂದು ಬಿಡುಗಡೆ ಆಗಲಿದೆ. ಪ್ರಶಾಂತ್​ ನೀಲ್​ ಜೊತೆ ಅವರು ‘ಸಲಾರ್​’ ಸಿನಿಮಾ ಮಾಡುತ್ತಿದ್ದಾರೆ.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಈಗ ಕೇಳಿಬರುತ್ತಿದೆ. ಹೀಗೆ ಏಕಾಏಕಿ ದೇಹದ ತೂಕ ಹೆಚ್ಚಲು ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಇಂಗ್ಲೆಂಡ್​ನಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಗುವುದು. ಅಲ್ಲಿಯೇ ಚಿಕಿತ್ಸೆ ಕೊಡಿಸಿ, ಆದಷ್ಟು ಬೇಗ ಅವರನ್ನು ಮೊದಲಿನ ಗೆಟಪ್​ಗೆ ಮರಳಿಸಲು ‘ಆದಿಪುರುಷ್​’ ಚಿತ್ರದ ನಿರ್ದೇಶಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಕುರಿತಂತೆ ಚಿತ್ರತಂಡದ ಯಾರೊಬ್ಬರೂ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ:

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?

ಕ್ಯಾನ್ಸರ್​ ಪೀಡಿತ ಅಭಿಮಾನಿಗೆ ಅತ್ಯಮೂಲ್ಯ ಕ್ಷಣಗಳನ್ನು ನೀಡಿದ ಪ್ರಭಾಸ್​; ನಟನ ದೊಡ್ಡತನಕ್ಕೆ ಮೆಚ್ಚುಗೆ​

ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ