ಮತ್ತೆ ಚಿಕ್ಕ ಬಟ್ಟೆ ಧರಿಸಿ ಬಂದ ಸಮಂತಾ; ಆದ್ರೆ ಟ್ರೋಲ್​ ಆಗಿದ್ದು ನಯನತಾರಾ ಪ್ರಿಯಕರ: ಕಾರಣ ಏನು?

Vignesh Shivan | Samantha: ಕಲರ್​ಫುಲ್​ ಕಾಸ್ಟ್ಯೂಮ್​ ಧರಿಸಿ ಸಮಂತಾ ಮಿಂಚಿದ್ದಾರೆ. ಗುಲಾಬಿ ಬಣ್ಣದ ಶಾರ್ಟ್​ ಡ್ರೆಸ್​ ತೊಟ್ಟು ಅವರು ಡ್ಯಾನ್ಸ್​ ಮಾಡಿದ್ದಾರೆ.

ಮತ್ತೆ ಚಿಕ್ಕ ಬಟ್ಟೆ ಧರಿಸಿ ಬಂದ ಸಮಂತಾ; ಆದ್ರೆ ಟ್ರೋಲ್​ ಆಗಿದ್ದು ನಯನತಾರಾ ಪ್ರಿಯಕರ: ಕಾರಣ ಏನು?
ನಯನತಾರ, ವಿಜಯ್ ಸೇತುಪತಿ, ಸಮಂತಾ
Follow us
| Updated By: ಮದನ್​ ಕುಮಾರ್​

Updated on: Apr 15, 2022 | 3:49 PM

ನಟಿ ಸಮಂತಾ (Samantha) ಅವರು ಈಗ ಬಗೆಬಗೆಯ ಪಾತ್ರಗಳ ಮೂಲಕ ಜನರಿಗೆ ಮನರಂಜನೆ ನೀಡುತ್ತಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ಅವರು ಯಾವುದೇ ಹಿಂಜರಿಕೆ ಇಟ್ಟುಕೊಂಡಿಲ್ಲ. ಬೋಲ್ಡ್​ ಆದಂತಹ ಗೆಟಪ್​ ಮೂಲಕ ಅವರು ಅಭಿಮಾನಿಗಳನ್ನು ರಂಜಿಸುತ್ತಾರೆ. ‘ಪುಷ್ಪ’ ಸಿನಿಮಾದಲ್ಲಿ ‘ಹು ಅಂತೀಯಾ ಮಾವ.. ಊಹೂ ಅಂತೀಯಾ ಮಾವ..’ ಹಾಡಿಗೆ ಹೆಜ್ಜೆ ಹಾಕಿದ ಅವರು ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದರು. ಅದಕ್ಕೂ ಮುನ್ನ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿಯಲ್ಲಿ ರಾಜಿ ಎಂಬ ಬೋಲ್ಡ್​ ಪಾತ್ರ ಮಾಡಿದ್ದರು. ಈಗ ಅವರ ಕೈಯಲ್ಲಿ ಅನೇಕ ಸಿನಿಮಾಗಳಿವೆ. ಆ ಪೈಕಿ ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ನಯನತಾರಾ (Nayanthara) ಮತ್ತು ವಿಜಯ್​ ಸೇತುಪತಿ ಕೂಡ ಮುಖ್ಯಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ನಯನತಾರಾ ಬಾಯ್​ಫ್ರೆಂಡ್​ ವಿಘ್ನೇಶ್​ ಶಿವನ್​ (Vignesh Shivan) ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಿಂದ ಒಂದು ಹಾಡಿನ ಗ್ಲಿಂಪ್ಸ್​ ರಿಲೀಸ್​ ಆಗಿದೆ. ಅದನ್ನು ನೋಡಿದ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದ ಹಾಡುಗಳಿಗೆ ಅನಿರುದ್ಧ್​ ರವಿಚಂದರ್​ ಸಂಗೀತ ನೀಡಿದ್ದಾರೆ. ಅವರ ಬತ್ತಳಿಕೆಯಿಂದ ‘ಟು ಟು ಟು..’ ಹಾಡು ಮೂಡಿಬಂದಿದೆ. ಅದರ ಗ್ಲಿಂಪ್ಸ್​ ಈಗ ಬಿಡುಗಡೆ ಆಗಿದೆ. ಇದರಲ್ಲಿ ಸಮಂತಾ ಅವರು ಬಣ್ಣ ಬಣ್ಣದ ಕಾಸ್ಟ್ಯೂಮ್​ ಧರಿಸಿ ಮಿಂಚಿದ್ದಾರೆ. ಗುಲಾಬಿ ಬಣ್ಣದ ಶಾರ್ಟ್​ ಡ್ರೆಸ್​ ತೊಟ್ಟು ಅವರು ಡ್ಯಾನ್ಸ್​ ಮಾಡಿರುವ ಪರಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಆದರೆ ಒಂದು ವರ್ಗದ ನೆಟ್ಟಿಗರು ಈ ಹಾಡಿನಲ್ಲಿ ಒಂದು ಮುಖ್ಯ ಸಂಗತಿ ಗಮನಿಸಿದ್ದಾರೆ.

ಇದೇ ಹಾಡಿನಲ್ಲಿ ವಿಜಯ್​ ಸೇತುಪತಿ ಮತ್ತು ನಯನತಾರಾ ಕೂಡ ಹೆಜ್ಜೆ ಹಾಕಿದ್ದಾರೆ. ಆದರೆ ನಯನತಾರಾ ಅವರು ಸಮಂತಾ ರೀತಿ ಚಿಕ್ಕ ಬಟ್ಟೆ ಧರಿಸಿಲ್ಲ, ಗ್ಲಾಮರಸ್​ ಆಗಿ ಕಾಣಿಸಿಕೊಂಡಿಲ್ಲ. ಇದರ ಹಿಂದಿರುವ ಉದ್ದೇಶ ಏನು ಎಂಬುದನ್ನು ನೆಟ್ಟಿಗರು ಪತ್ತೆ ಹಚ್ಚುತ್ತಿದ್ದಾರೆ. ಈಗಾಗಲೇ ಹೇಳಿರುವಂತೆ ವಿಘ್ನೇಶ್​ ಶಿವನ್​ ಮತ್ತು ನಯನತಾರಾ ಅವರು ರಿಲೇಷನ್​ಶಿಪ್​ನಲ್ಲಿ ಇದ್ದಾರೆ. ಹಾಗಾಗಿ ವಿಘ್ನೇಶ್​ ಶಿವನ್​ ಅವರು ತಮ್ಮ ಪ್ರೇಯಸಿಗೆ ಸೀರೆ ತೊಡಿಸಿ, ಸಮಂತಾಗೆ ಮಾತ್ರ ಶಾರ್ಟ್​ ಡ್ರೆಸ್​ ಹಾಕಿಸಿದ್ದಾರೆ ಎಂದು ನೆಟ್ಟಿಗರು ಟೀಕೆ ಮಾಡಿದ್ದಾರೆ.

​ಆದರೆ ಈ ವಾದವನ್ನು ಇನ್ನೊಂದು ವರ್ಗದ ನೆಟ್ಟಿಗರು ತಳ್ಳಿ ಹಾಕಿದ್ದಾರೆ. ಪಾತ್ರಕ್ಕೆ ತಕ್ಕಂತೆ ಕಾಸ್ಟ್ಯೂಮ್​ ಹಾಕಿಸಲಾಗಿರುತ್ತದೆ. ಅದಕ್ಕಿಂತಲೂ ಮುಖ್ಯವಾಗಿ ನಯನತಾರಾ ಅವರು ಗ್ಲಾಮರ್​ ಪಾತ್ರಗಳಿಗೆ ಈಗಾಗಲೇ ಗುಡ್​ ಬೈ ಹೇಳಿದ್ದಾರೆ. ಈ ವಿಚಾರದಲ್ಲಿ ಸಮಂತಾ ಯಾವುದೇ ನಿರ್ಬಂಧಗಳನ್ನು ಹಾಕಿಕೊಂಡಿಲ್ಲ. ಆ ಕಾರಣಕ್ಕಾಗಿಯೇ ಈ ಹಾಡಿನಲ್ಲಿ ಅವರಿಬ್ಬರಿಗೆ ಈ ಬಗೆಯ ಕಾಸ್ಟ್ಯೂಮ್​ ನೀಡಲಾಗಿದೆ. ಇದರಲ್ಲಿ ವಿಘ್ನೇಶ್​ ಶಿವನ್​ ಯಾವುದೇ ರೀತಿಯ ತಾರತಮ್ಯ ಮಾಡಿಲ್ಲ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.

ಸಮಂತಾ ಕೈಯಲ್ಲಿ ಅನೇಕ ಆಫರ್​ಗಳಿವೆ. ‘ಶಾಕುಂತಲಂ’, ‘ಯಶೋಧ’, ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಮುಂತಾದ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾ ಏ.28ಕ್ಕೆ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಮಾಜಿ ಗಂಡನ ಫ್ಯಾಮಿಲಿ ಕಡೆಗೆ ಮತ್ತೆ ಒಲವು ತೋರಿದ ಸಮಂತಾ; ಏನಿದು ಹೊಸ ಸಮಾಚಾರ?

3 ವರ್ಷದ ಹಿಂದಿನ ಘಟನೆ ನೆನೆದು ಖುಷಿಪಟ್ಟ ಸಮಂತಾ; ಇದು ಮಾಜಿ ಪತಿ ನಾಗ ಚೈತನ್ಯ ಕುರಿತ ವಿಷಯ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್