AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಕಷ್ಟದಲ್ಲಿದ್ದಾಗ ಮಾಲ್ಡೀವ್ಸ್​ಗೆ ಹೋಗಿ ಮಜಾ ಮಾಡುವ ಸೆಲೆಬ್ರಿಟಿಗಳು; ನೆಟ್ಟಿಗರಿಂದ ತರಾಟೆ

ಅನೇಕ ಸೆಲೆಬ್ರಿಟಿಗಳು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಇನ್ನೂ ಕೆಲವರು ಅಲ್ಲಿಗೆ ಹೋಗಲು ತಯಾರಿ ನಡೆಸಿದ್ದರು. ಅಷ್ಟರಲ್ಲಾಗಲೇ ಮಾಲ್ಡೀವ್ಸ್​ ಸರ್ಕಾರ ಶಾಕ್​ ನೀಡಿದೆ.

ಭಾರತ ಕಷ್ಟದಲ್ಲಿದ್ದಾಗ ಮಾಲ್ಡೀವ್ಸ್​ಗೆ ಹೋಗಿ ಮಜಾ ಮಾಡುವ ಸೆಲೆಬ್ರಿಟಿಗಳು; ನೆಟ್ಟಿಗರಿಂದ ತರಾಟೆ
ಮಾಲ್ಡೀವ್ಸ್​ನಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು
ಮದನ್​ ಕುಮಾರ್​
| Edited By: |

Updated on:Apr 27, 2021 | 12:07 PM

Share

ಭಾರತ ಈಗ ತುಂಬಾ ಸಂಕಷ್ಟದಲ್ಲಿದೆ. ಕೊರೊನಾ ವೈರಸ್​ನ ಎರಡನೇ ಅಲೆಗೆ ಸಿಲುಕಿ ಜನರೆಲ್ಲ ಪರದಾಡುತ್ತಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಜನಸಾಮಾನ್ಯರು ಕಣ್ಣೀರು ಹಾಕುತ್ತಿರುವಾಗ ಕೆಲವು ಸೆಲೆಬ್ರಿಟಗಳು ವಿದೇಶಕ್ಕೆ ಹಾರಿದ್ದಾರೆ. ತಮ್ಮ ಸಿನಿಮಾಗಳು ತೆರೆಕಂಡಾಗ ಪ್ರಚಾರಕ್ಕಾಗಿ ಜನರ ಬಳಿಗೆ ಬರುವ ಸೆಲೆಬ್ರಿಟಿಗಳೆಲ್ಲ ಕೊರೊನಾ ವೈರಸ್​ನಿಂದ ಉಂಟಾದ ಈ ಕಡುಕಷ್ಟ ಕಾಲದಲ್ಲಿ ವಿದೇಶಕ್ಕೆ ಹೋಗಿದ್ದಾರೆ. ಅದರಲ್ಲೂ ಮಾಲ್ಡೀವ್ಸ್​ನ ದ್ವೀಪಗಳಲ್ಲಿ ಎಂಜಾಯ್​ ಮಾಡುತ್ತ, ಸುಖವಾಗಿದ್ದಾರೆ. ಅಂಥವರನ್ನು ಈಗ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತದ ಸೆಲೆಬ್ರಿಟಿಗಳಿಗೆ ಮಾಲ್ಡೀವ್ಸ್​ ಎಂದರೆ ಸಿಕ್ಕಾಪಟ್ಟೆ ಇಷ್ಟ. ಬಿಡುವು ಸಿಕ್ಕಾಗಲೆಲ್ಲ ಅವರು ಮಾಲ್ಡೀವ್ಸ್​ಗೆ ಹೋಗಿ ಅಲ್ಲಿನ ದ್ವೀಪಗಳಲ್ಲಿ ಕಾಲ ಕಳೆಯುತ್ತಾರೆ. ಇತ್ತೀಚೆಗೆ ಮುಂಬೈನಲ್ಲಿ ಕೊರೊನಾ ವೈರಸ್​ ನಿಯಂತ್ರಿಸುವ ಸಲುವಾಗಿ ಲಾಕ್​ಡೌನ್​ ಘೋಷಿಸಲಾಯಿತು. ಈ ಸಂದರ್ಭದಲ್ಲಿ ಸಿನಿಮಾ ಶೂಟಿಂಗ್​ಗಳನ್ನೂ ನಿಲ್ಲಿಸಲಾಗಿದೆ. ಹಾಗಾಗಿ ಅನೇಕ ಸೆಲೆಬ್ರಿಟಿಗಳು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಇನ್ನೂ ಕೆಲವರು ಅಲ್ಲಿಗೆ ಹೋಗಲು ತಯಾರಿ ನಡೆಸಿದ್ದರು. ಅಷ್ಟರಲ್ಲಾಗಲೇ ಮಾಲ್ಡೀವ್ಸ್​ ಸರ್ಕಾರ ಶಾಕ್​ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿ ಹಬ್ಬುತ್ತಿರುವುದರಿಂದ ಭಾರತದಿಂದ ಪ್ರವಾಸಕ್ಕೆ ಬರುವವರನ್ನು ಮಾಲ್ಡೀವ್ಸ್​ ನಿರ್ಬಂಧಿಸಿದೆ. ಅಲ್ಲಿನ ಹೋಟೆಲ್​, ರೆಸ್ಟೋರೆಂಟ್​ಗಳಲ್ಲಿ ಉಳಿದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಇದು ಬಾಲಿವುಡ್​ ಮಂದಿಗೆ ಬರೆ ಹಾಕಿದಂತಾಗಿದೆ. ಕೆಲವೇ ದಿನಗಳ ಹಿಂದೆ ಜರ್ಮನಿ, ಇಟಲಿ, ಇರಾನ್​, ಸಿಂಗಾಪುರ್​ ಮುಂತಾದ ದೇಶಗಳು ಭಾರತೀಯರ ಪ್ರವೇಶವನ್ನು ನಿರ್ಬಂಧಿಸಿದ್ದವು. ಈಗಿನದ್ದು ಮಾಲ್ಡೀವ್ಸ್​ ಸರದಿ.

ಜಾನ್ವಿ ಕಪೂರ್​, ದಿಶಾ ಪಠಾಣಿ, ಟೈಗರ್​ ಶ್ರಾಫ್​, ರಣಬೀರ್​ ಕಪೂರ್​, ಆಲಿಯಾ ಭಟ್​ ಮುಂತಾದ ಸೆಲೆಬ್ರಿಟಿಗಳು ಮಾಲ್ಡೀವ್ಸ್​ನಲ್ಲಿ ಎಂಜಾಯ್​ ಮಾಡುತ್ತಿದ್ದರು. ತಮ್ಮ ಫೋಟೋಗಳನ್ನು ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಾಕಿಕೊಂಡು ಖುಷಿಪಡುತ್ತಿದ್ದರು. ಈಗ ಅಂಥವರಿಗೆಲ್ಲ ಮಾಲ್ಡೀವ್ಸ್​ ಸರ್ಕಾರ ಕಡಿವಾಣ ಹಾಕಿದೆ. ಪರಿಣಾಮವಾಗಿ ಬಾಲಿವುಡ್​ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

ದೇಶದ ಜನರು ಕಷ್ಟಪಡುತ್ತಿದ್ದಾಗ ಇವರೆಲ್ಲ ಮೋಜು ಮಸ್ತಿ ಮಾಡುತ್ತಿದ್ದರು. ಆದರೆ ಹೀಗೆ ಸರಿಯಾಗಿ ಪಾಠ ಕಲಿಸಿದಂತಾಗಿದೆ ಎಂಬ ಅರ್ಥದಲ್ಲಿ ನೆಟ್ಟಿಗರು ಮೀಮ್ಸ್​ ಮಾಡಿ ಹರಿಬಿಡುತ್ತಿದ್ದಾರೆ. ಅವು ಇಂಟರ್​ನೆಟ್​ನಲ್ಲಿ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಸ್ವಲ್ಪ ಆದ್ರೂ ನಾಚಿಕೆ ಇರಲಿ: ಕೊರೊನಾ ಸಮಯದಲ್ಲಿ ಬೀಚ್​ಗೆ ಹೋಗಿ ಬಿಕಿನಿ ಹಾಕುವವರಿಗೆ ಸ್ಟಾರ್​ ನಟನ ಟಾಂಗ್

Published On - 11:33 am, Tue, 27 April 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?