AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ, ಸುಂದರ ಪ್ರೇಮಕಥೆ ಹೇಳುವ ‘ಕನಸಲು’ ಆಲ್ಬಂ ಹಾಡು ಬಿಡುಗಡೆ

ಶ್ರೀರಾಮ್ ಗಂಧರ್ವ ಅವರು ‘ಕನಸಲು’ ಎಂಬ ಆಲ್ಬಂ ಗೀತೆಯನ್ನು ಹೊರತಂದಿದ್ದಾರೆ. ಇದರಲ್ಲಿ ದರ್ಶನ್ ಮತ್ತು ಗಗನಾ ನಟಿಸಿದ್ದಾರೆ. ರಿಚರ್ಡ್ ಅವರು ಈ ಹಾಡನ್ನು ನಿರ್ಮಿಸಿದ್ದಾರೆ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಂಡದವರು ಒಂದಷ್ಟು ಮಾಹಿತಿ ಹಂಚಿಕೊಂಡರು. ‘ಆನಂದ್ ಆಡಿಯೋ’ ಮೂಲಕ ‘ಕನಸಲು’ ಗೀತೆ ರಿಲೀಸ್ ಆಗಿದೆ.

ಸರಳ, ಸುಂದರ ಪ್ರೇಮಕಥೆ ಹೇಳುವ ‘ಕನಸಲು’ ಆಲ್ಬಂ ಹಾಡು ಬಿಡುಗಡೆ
Kanasalu TeamImage Credit source: Tv9 Kannada
ಮದನ್​ ಕುಮಾರ್​
|

Updated on: Sep 18, 2026 | 4:42 PM

Share

ಯುವ ಪ್ರತಿಭೆ ಶ್ರೀರಾಮ್ ಗಂಧರ್ವ ಸಾರಥ್ಯದಲ್ಲಿ ಮೂಡಿಬಂದಿರುವ ನವಿರಾದ ಪ್ರೇಮಕಥೆಯ ‘ಕನಸಲು…’ ಆಲ್ಬಂ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರೋದ್ಯಮದ ಹಲವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಡನ್ನು ಪ್ರದರ್ಶಿಸಿ ಶುಭಕೋರಲಾಯಿತು. ಸಾಧಾರಣ ಹಳ್ಳಿಯ ಹಿನ್ನೆಲೆಯಲ್ಲಿ ನಡೆಯುವ ಸುಂದರ ಪ್ರೇಮಕಥೆ ಈ ಹಾಡಿನಲ್ಲಿದೆ. ಟೈಲರಿಂಗ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕ, ಅಲ್ಲಿಗೆ ಬರುವ ಮೀರಾ ಎಂಬ ಯುವತಿಯ ಪ್ರೀತಿಯಲ್ಲಿ ಬೀಳುತ್ತಾನೆ. ಆತನ ಪ್ರಾಮಾಣಿಕತೆಗೆ ಒಲಿಯುವ ಯುವತಿಯ ಪ್ರತಿಕ್ರಿಯೆ ಏನು ಎಂಬುದನ್ನು ಹಾಡಿನ ಕೊನೆಯಲ್ಲಿ ಕುತೂಹಲಕಾರಿಯಾಗಿ ತೋರಿಸಲಾಗಿದೆ.

ಶ್ರೀರಾಮ್ ಗಂಧರ್ವ ಅವರು ಈ ಹಾಡಿಗೆ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿ, ಸ್ವತಃ ಹಾಡಿ ನಿರ್ದೇಶನವನ್ನೂ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರ್ದೇಶಕನಾಗಿ ತಮ್ಮ ಮೂರು ಸಿನಿಮಾಗಳು ಸಿದ್ಧವಾಗುತ್ತಿವೆ ಎಂದು ತಿಳಿಸಿದರು. ಕಿಶೋರ್, ರವಿಶಂಕರ್ ಗೌಡ ನಟನೆಯ ಚಿತ್ರಗಳು ಹಾಗೂ ಒಂದು ಬಾಲಿವುಡ್ ಸಿನಿಮಾ ಕೂಡ ಅದರಲ್ಲಿ ಸೇರಿದೆ ಎಂದು ಅವರು ಹೇಳಿದರು.

ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ‘ಕಂಗ್ರಾಜುಲೇಶನ್ಸ್ ಬ್ರದರ್ಸ್’ ಚಿತ್ರದ ನಾಯಕ ರಕ್ಷಿತ್ ನಾಗ್ ಮಾತನಾಡಿ, ‘ಜನರು ಬೇಗ ಮರೆಯುವುದರಿಂದ ಶ್ರೀರಾಮ್ ಅವರು ನಿರಂತರವಾಗಿ ಇಂತಹ ಉತ್ತಮ ಹಾಡುಗಳನ್ನು ನೀಡುತ್ತಿರಬೇಕು’ ಎಂದು ಸಲಹೆ ನೀಡಿದರು. ಖ್ಯಾತ ಜಾನಪದ ಗಾಯಕ ಜೋಗಿಲಾ ಸಿದ್ಧರಾಜು ಮಾತನಾಡಿ, ‘ಕನ್ನಡದಲ್ಲಿ ಹೆಚ್ಚಾಗಿ ಹೊರಗಿನ ಗಾಯಕರನ್ನೇ ಬಳಸಿಕೊಳ್ಳಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಶ್ರೀರಾಮ್ ಅವರಂತಹ ಸ್ಥಳೀಯ ಬಹುಮುಖ ಪ್ರತಿಭೆಗಳು ಹೊರಬರಲು ಇಂತಹ ಆಲ್ಬಮ್‌ಗಳು ಅಗತ್ಯ’ ಎಂದರು.

‘ಕನಸಲು..’ ಆಲ್ಬಂ ಗೀತೆ:

ಶ್ರೀರಾಮ್ ಅವರ ತಂದೆ ಗಂಧರ್ವ ಅವರು ಮಾತನಾಡಿ, ‘ಎರಡೂವರೆ ಗಂಟೆಯ ಸಿನಿಮಾದಲ್ಲಿ ಹೇಳಲಾಗದ ಭಾವನೆಯನ್ನು ಕೆಲವೇ ನಿಮಿಷಗಳ ಆಲ್ಬಮ್‌ನಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ’ ಎಂದು ಮಗನ ತಂಡವನ್ನು ಹಾರೈಸಿದರು. ಪ್ರಿಯಕರನಾಗಿ ಅಭಿನಯಿಸಿರುವ ದರ್ಶನ್ ಅವರಿಗೆ ಇದು ಮೊದಲ ಕ್ಯಾಮೆರಾ ಅನುಭವವಾದರೆ, ಪ್ರೇಯಸಿ ಮೀರಾ ಪಾತ್ರದಲ್ಲಿ ನಟಿಸಿರುವ ಗಗನಾ ಅವರಿಗೆ ಇದು ಮೊದಲ ಆಲ್ಬಮ್ ಹಾಡಾಗಿದೆ.

ಇದನ್ನೂ ಓದಿ: ಡ್ರೋನ್​ನಲ್ಲಿ ಚಿತ್ರಿತವಾಯ್ತು ‘ಗಗನ ಮಿಲನ’ ರೊಮ್ಯಾಂಟಿಕ್ ಆಲ್ಬಂ ಗೀತೆ

‘ಡಾಲಿ ಪಿಕ್ಚರ್ಸ್’ ಬ್ಯಾನರ್‌ನಲ್ಲಿ ರಿಚರ್ಡ್ ಅವರು ‘ಕನಸಲು..’ ಆಲ್ಬಂ ಗೀತೆಯನ್ನು ನಿರ್ಮಿಸಿದ್ದಾರೆ. ರವಿಕುಮಾರ್ ಬಿ.ಎಮ್. ಅವರು ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿ ನಿರ್ವಹಿಸಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಈ ಹಾಡಿನ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ. ‘ಆನಂದ್ ಆಡಿಯೋ’ ಮೂಲಕ ಈ ಹಾಡು ಬಿಡುಗಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್