AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇ ಮುಂದೆ ನಿಂತು ಮದುವೆ ಮಾಡಿಸುತ್ತೇನೆ; ಬಿಗ್​ ಬಾಸ್​ ಮನೆಯಲ್ಲಿ ಶಮಂತ್​-ಪ್ರಿಯಾಂಕಾ ಪ್ರೇಮಕಥೆ ಆರಂಭ?

ಮಂಜು ಪಾವಗಡ ಜತೆ ದಿವ್ಯಾ ಹೆಚ್ಚು ಆಪ್ತರಾದರು. ದಿವ್ಯಾ ಉರುಡುಗ ಅವರು ಅರವಿಂದ್​ ಕೆ.ಪಿ. ಜತೆ ಹೆಚ್ಚು ಕ್ಲೋಸ್​ ಆದರು. ಹೀಗಾಗಿ, ಶಮಂತ್​ಗೆ ಜೋಡಿ ಆಗೋಕೆ ಯಾರೊಬ್ಬರೂ ಸಿಕ್ಕಿಲ್ಲ.

ನಾನೇ ಮುಂದೆ ನಿಂತು ಮದುವೆ ಮಾಡಿಸುತ್ತೇನೆ; ಬಿಗ್​ ಬಾಸ್​ ಮನೆಯಲ್ಲಿ ಶಮಂತ್​-ಪ್ರಿಯಾಂಕಾ ಪ್ರೇಮಕಥೆ ಆರಂಭ?
ಶಮಂತ್​-ಪ್ರಿಯಾಂಕಾ
ರಾಜೇಶ್ ದುಗ್ಗುಮನೆ
| Edited By: |

Updated on: May 06, 2021 | 4:13 PM

Share

ಬಿಗ್​ ಬಾಸ್ ಎಂಟನೇ ಸೀಸನ್​ನಲ್ಲಿ ಈಗಾಗಲೇ ಎರಡು ಪ್ರೇಮ ಕಥೆಗಳು ಹುಟ್ಟಿಕೊಂಡಿವೆ. ಇದು ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡುತ್ತಿದೆ. ಹೀಗಿರುವಾಗಲೇ ಮತ್ತೊಂದು ಲವ್​ಸ್ಟೋರಿ ಹುಟ್ಟಿಕೊಳ್ಳುವ ಎಲ್ಲಾ ಲಕ್ಷಣ ಗೋಚರವಾಗುತ್ತಿದೆ! ಅದು ಶಮಂತ್​ ಬ್ರೋ ಗೌಡ ಹಾಗೂ ಪ್ರಿಯಾಂಕಾ ತಿಮ್ಮೇಶ್​ ನಡುವೆ ಅನ್ನೋದು ವಿಶೇಷ.

ಬಿಗ್​ ಬಾಸ್​ ಮನೆ ಸೇರಿದ ನಂತರದಲ್ಲಿ ದಿವ್ಯಾ ಸುರೇಶ್​ ಹಿಂದೆ ಬಿದ್ದಿದ್ದರು ಶಮಂತ್. ಆದರೆ, ಅವರ ಲೆಕ್ಕಾಚಾರ ತಲೆಕೆಳಗಾಗಿತ್ತು. ಮಂಜು ಪಾವಗಡ ಜತೆ ದಿವ್ಯಾ ಹೆಚ್ಚು ಆಪ್ತರಾದರು. ದಿವ್ಯಾ ಉರುಡುಗ ಅವರು ಅರವಿಂದ್​ ಕೆ.ಪಿ. ಜತೆ ಹೆಚ್ಚು ಕ್ಲೋಸ್​ ಆದರು. ಹೀಗಾಗಿ, ಶಮಂತ್​ಗೆ ಜೋಡಿ ಆಗೋಕೆ ಯಾರೊಬ್ಬರೂ ಸಿಕ್ಕಿಲ್ಲ.

ಇತ್ತೀಚೆಗೆ ಪ್ರಿಯಾಂಕಾ ತಿಮ್ಮೇಶ್​ ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಮನೆಗೆ ಬಂದಿದ್ದರು. ಇದು ಶಮಂತ್​ಗೆ ಖುಷಿ ನೀಡಿತ್ತು. ಅಲ್ಲದೆ, ಅವರ ಜತೆ ಹೆಚ್ಚು ಕ್ಲೋಸ್​ ಆಗಿ ವರ್ತಿಸೋಕೆ ಪ್ರಾರಂಭಿಸಿದ್ದರು. ಇದು ಚಕ್ರವರ್ತಿ ಚಂದ್ರಚೂಡ್​ ಗಮನಕ್ಕೆ ಬಂದಿದೆ. ಮೇ 5ರ ಎಪಿಸೋಡ್​ನಲ್ಲಿ ಈ ಬಗ್ಗೆ ಚರ್ಚೆ ಆಗಿದೆ.

ಚಕ್ರವರ್ತಿ, ಶಮಂತ್, ಪ್ರಿಯಾಂಕಾ, ಪ್ರಶಾಂತ್​ ಸಂಬರಗಿ ಕುಳಿತು ಮಾತನಾಡುತ್ತಿದ್ದರು. ಆಗ ಚಕ್ರವರ್ತಿ, ಶಮಂತ್​ ಮೇಲೆ ಪ್ರಿಯಾಂಕಾಗೆ ಒಂದು ಅಫೆಕ್ಷನ್​ ಇದೆ. ನಾನು ಕಣ್ಣನ್ನು ನೋಡಿಯೇ ಎಲ್ಲವನ್ನೂ ಹೇಳುತ್ತೇನೆ ಎಂದರು​. ಆಗ ಪ್ರಶಾಂತ್​ ಸಂಬರಗಿ ನಾನೇ ನಿಂತು ಮದುವೆ ಮಾಡಿಸುತ್ತೇನೆ ಎನ್ನುವ ಭರವಸೆ ಕೂಡ ನೀಡಿದರು.

ವಿಚಿತ್ರ ಎಂದರೆ ಈ ವಿಚಾರವನ್ನು ಶಮಂತ್​ ಗಂಭೀರವಾಗಿ ಸ್ವೀಕರಿಸಬೇಕಿತ್ತು. ಆದರೆ, ಅವರು ಅಷ್ಟಾಗಿ ಚಿಂತಿಸಿಲ್ಲ. ಇದನ್ನು ತುಂಬಾನೇ ಸೀರಿಯಸ್​ ಆಗಿ ತೆಗೆದುಕೊಂಡಿದ್ದು ಚಕ್ರವರ್ತಿ. ನಿನಗೆ ಶಮಂತ್​ ಮೇಲೆ ಪ್ರೀತಿ ಇದೆ ಅಲ್ಲವೇ? ಇಂದೇ ನಿರ್ಧಾರವಾಗಲಿ, ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಿ ಎಂದು ಪ್ರಿಯಾಂಕಾ ಅವರನ್ನು ಚಕ್ರವರ್ತಿ ಒತ್ತಾಯಿಸಿದರು.

ಇದಕ್ಕೆ ಪ್ರಿಯಾಂಕಾ ಇರಿಟೇಷನ್​ಗೆ ಒಳಗಾದರು. ಏನೋ ಹಾಸ್ಯ ಮಾಡುತ್ತಿದ್ದೀರ ಎಂದುಕೊಂಡೆ. ನೀವು ನೋಡಿದ್ರೆ ಗಂಭೀರವಾಗಿದೀರಲ್ಲ ಎಂದು ಪ್ರಿಯಾಂಕಾ ಹೇಳಿದಾಗ, ನಾನು ನಿಮ್ಮ ಬಗ್ಗೆ ಕೇರ್​ ಮಾಡುತ್ತಿದ್ದೆನೆ ಎನ್ನುವ ಉತ್ತರ ಚಕ್ರವರ್ತಿ ಕಡೆಯಿಂದ ಬಂತು. ಇದಕ್ಕೆ ಉತ್ತರಿಸಿದ ಪ್ರಿಯಾಂಕಾ, ನನ್ನನ್ನು ಕೇರ್​ ಮಾಡೋಕೆ ಮನೆಯಲ್ಲಿ ಜನರಿದ್ದಾರೆ. ನನ್ನನ್ನು ಕೇರ್​ ಮಾಡೋಕೆ ನೀವು ಯಾರು ಎಂದು ಪ್ರಿಯಾಂಕಾ ಸಿಟ್ಟಿನಿಂದಲೇ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ಕನ್ನಡ ಬಿಗ್​ ಬಾಸ್ ಮಾಜಿ ಸ್ಪರ್ಧಿ ಅರೆಸ್ಟ್​!

 ಹೆಣ್ಣಿನ ಶಾಪ; ಈ ವಾರ ಮನೆಯಿಂದ ಹೊರ ಹೋಗೋ ಸ್ಪರ್ಧಿ ಶಮಂತ್?

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!