AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಿಯಾಂಕಾ ಚೋಪ್ರಾ - ನಿಕ್​ ಜೋನಸ್
ರಾಜೇಶ್ ದುಗ್ಗುಮನೆ
|

Updated on: May 17, 2021 | 5:51 PM

Share

ಪ್ರಿಯಾಂಕಾ ಚೋಪ್ರಾ ಪತಿ, ಅಮೆರಿಕ ಗಾಯಕ ನಿಕ್​ ಜೋನಸ್ ಶೋ ಒಂದರ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಉಂಟಾದ ಅವಘಡದಲ್ಲಿ ಅವರಿಗೆ ಗಾಯಗಳಾಗಿವೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದ ಮೂಲಗಳು ಹೇಳಿವೆ. ಈ ವಿಚಾರ ತಿಳಿಯುತ್ತಿದ್ದಂತೆ ನಿಕ್​ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರಿದ್ದಾರೆ.

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ಮೂಲಗಳ ಪ್ರಕಾರ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನಡೆದಿದ್ದಾರೆ ಎನ್ನಲಾಗಿದೆ.

ಭಾರತದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹಬ್ಬುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಯಾವುದೇ ವೈದ್ಯಕೀಯ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ನಿಕ್​ ಜೋನಸ್​ ಅವರು ಭಾರತಕ್ಕಾಗಿ ಮಿಡಿದಿದ್ದರು. ಭಾರತದಲ್ಲಿನ ಕೊವಿಡ್​ ಸೋಂಕಿತರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದರು.

ಭಾರತಕ್ಕೆ ವ್ಯಾಕ್ಸಿನ್​ ಕಳಿಸಿಕೊಡಿ ಎಂದು ಅಮೆರಿಕಕ್ಕೆ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಅವರೀಗ ಪತಿ ನಿಕ್​ ಜೋನಸ್​ ಜೊತೆ ಸೇರಿ ದೇಣಿಗೆ ಸಂಗ್ರಹಕ್ಕೆ ಕರೆ ನೀಡಿದ್ದಾರೆ. ಈ ಬಗ್ಗೆ ಪ್ರಿಯಾಂಕಾ ಮತ್ತು ನಿಕ್​ ಜೋನಸ್​ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

‘ಕಳೆದ ತಿಂಗಳಿನಿಂದ ಕೊವಿಡ್​ ಪ್ರಕರಣಗಳ ಸಂಖ್ಯೆ ದಿಢೀರ್​ ಹೆಚ್ಚಾಗಿರುವುದನ್ನು ನಾವು ನೋಡಿದ್ದೇವೆ. ಭಾರತದಲ್ಲಿ ಪರಿಸ್ಥಿತಿ ಕೈ ಮೀರಿದೆ. ಸೋಂಕಿತರ ಸಂಖ್ಯೆ ನೋಡಿದರೆ ಶಾಕಿಂಗ್​ ಆಗಿದೆ. ಇದನ್ನು ಈಗಲೇ ತಡೆಯಬೇಕಿದೆ. ಪ್ರತಿಯೊಬ್ಬರೂ ಸುರಕ್ಷಿತವಾಗುವವರೆಗೆ ಇಲ್ಲಿ ಯಾರೂ ಸೇಫ್​ ಅಲ್ಲ’ ಎಂದು ಕೊವಿಡ್​ನ ಗಂಭೀರತೆಯನ್ನು ಅರ್ಥ ಮಾಡಿಸಲು ಈ ದಂಪತಿ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಬೆನ್ನಿಗೆ ಕಾಳಿ ಮಾತೆ ಚಿತ್ರವಿರುವ ಜಾಕೆಟ್​ ತೊಟ್ಟು, ಪತಿ ನಿಕ್​ ಕೈಹಿಡಿದು ಹೊರಟ ಪ್ರಿಯಾಂಕಾ ಚೋಪ್ರಾ ಫೋಟೋ ವೈರಲ್​

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ