AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಿಯಾಂಕಾ ಚೋಪ್ರಾ - ನಿಕ್​ ಜೋನಸ್
ರಾಜೇಶ್ ದುಗ್ಗುಮನೆ
|

Updated on: May 17, 2021 | 5:51 PM

Share

ಪ್ರಿಯಾಂಕಾ ಚೋಪ್ರಾ ಪತಿ, ಅಮೆರಿಕ ಗಾಯಕ ನಿಕ್​ ಜೋನಸ್ ಶೋ ಒಂದರ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಉಂಟಾದ ಅವಘಡದಲ್ಲಿ ಅವರಿಗೆ ಗಾಯಗಳಾಗಿವೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದ ಮೂಲಗಳು ಹೇಳಿವೆ. ಈ ವಿಚಾರ ತಿಳಿಯುತ್ತಿದ್ದಂತೆ ನಿಕ್​ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರಿದ್ದಾರೆ.

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ಮೂಲಗಳ ಪ್ರಕಾರ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನಡೆದಿದ್ದಾರೆ ಎನ್ನಲಾಗಿದೆ.

ಭಾರತದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹಬ್ಬುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಯಾವುದೇ ವೈದ್ಯಕೀಯ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ನಿಕ್​ ಜೋನಸ್​ ಅವರು ಭಾರತಕ್ಕಾಗಿ ಮಿಡಿದಿದ್ದರು. ಭಾರತದಲ್ಲಿನ ಕೊವಿಡ್​ ಸೋಂಕಿತರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದರು.

ಭಾರತಕ್ಕೆ ವ್ಯಾಕ್ಸಿನ್​ ಕಳಿಸಿಕೊಡಿ ಎಂದು ಅಮೆರಿಕಕ್ಕೆ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಅವರೀಗ ಪತಿ ನಿಕ್​ ಜೋನಸ್​ ಜೊತೆ ಸೇರಿ ದೇಣಿಗೆ ಸಂಗ್ರಹಕ್ಕೆ ಕರೆ ನೀಡಿದ್ದಾರೆ. ಈ ಬಗ್ಗೆ ಪ್ರಿಯಾಂಕಾ ಮತ್ತು ನಿಕ್​ ಜೋನಸ್​ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

‘ಕಳೆದ ತಿಂಗಳಿನಿಂದ ಕೊವಿಡ್​ ಪ್ರಕರಣಗಳ ಸಂಖ್ಯೆ ದಿಢೀರ್​ ಹೆಚ್ಚಾಗಿರುವುದನ್ನು ನಾವು ನೋಡಿದ್ದೇವೆ. ಭಾರತದಲ್ಲಿ ಪರಿಸ್ಥಿತಿ ಕೈ ಮೀರಿದೆ. ಸೋಂಕಿತರ ಸಂಖ್ಯೆ ನೋಡಿದರೆ ಶಾಕಿಂಗ್​ ಆಗಿದೆ. ಇದನ್ನು ಈಗಲೇ ತಡೆಯಬೇಕಿದೆ. ಪ್ರತಿಯೊಬ್ಬರೂ ಸುರಕ್ಷಿತವಾಗುವವರೆಗೆ ಇಲ್ಲಿ ಯಾರೂ ಸೇಫ್​ ಅಲ್ಲ’ ಎಂದು ಕೊವಿಡ್​ನ ಗಂಭೀರತೆಯನ್ನು ಅರ್ಥ ಮಾಡಿಸಲು ಈ ದಂಪತಿ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಬೆನ್ನಿಗೆ ಕಾಳಿ ಮಾತೆ ಚಿತ್ರವಿರುವ ಜಾಕೆಟ್​ ತೊಟ್ಟು, ಪತಿ ನಿಕ್​ ಕೈಹಿಡಿದು ಹೊರಟ ಪ್ರಿಯಾಂಕಾ ಚೋಪ್ರಾ ಫೋಟೋ ವೈರಲ್​

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!