AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಿಯಾಂಕಾ ಚೋಪ್ರಾ - ನಿಕ್​ ಜೋನಸ್
ರಾಜೇಶ್ ದುಗ್ಗುಮನೆ
|

Updated on: May 17, 2021 | 5:51 PM

Share

ಪ್ರಿಯಾಂಕಾ ಚೋಪ್ರಾ ಪತಿ, ಅಮೆರಿಕ ಗಾಯಕ ನಿಕ್​ ಜೋನಸ್ ಶೋ ಒಂದರ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಉಂಟಾದ ಅವಘಡದಲ್ಲಿ ಅವರಿಗೆ ಗಾಯಗಳಾಗಿವೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದ ಮೂಲಗಳು ಹೇಳಿವೆ. ಈ ವಿಚಾರ ತಿಳಿಯುತ್ತಿದ್ದಂತೆ ನಿಕ್​ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರಿದ್ದಾರೆ.

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ಮೂಲಗಳ ಪ್ರಕಾರ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನಡೆದಿದ್ದಾರೆ ಎನ್ನಲಾಗಿದೆ.

ಭಾರತದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹಬ್ಬುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಯಾವುದೇ ವೈದ್ಯಕೀಯ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ನಿಕ್​ ಜೋನಸ್​ ಅವರು ಭಾರತಕ್ಕಾಗಿ ಮಿಡಿದಿದ್ದರು. ಭಾರತದಲ್ಲಿನ ಕೊವಿಡ್​ ಸೋಂಕಿತರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದರು.

ಭಾರತಕ್ಕೆ ವ್ಯಾಕ್ಸಿನ್​ ಕಳಿಸಿಕೊಡಿ ಎಂದು ಅಮೆರಿಕಕ್ಕೆ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಅವರೀಗ ಪತಿ ನಿಕ್​ ಜೋನಸ್​ ಜೊತೆ ಸೇರಿ ದೇಣಿಗೆ ಸಂಗ್ರಹಕ್ಕೆ ಕರೆ ನೀಡಿದ್ದಾರೆ. ಈ ಬಗ್ಗೆ ಪ್ರಿಯಾಂಕಾ ಮತ್ತು ನಿಕ್​ ಜೋನಸ್​ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

‘ಕಳೆದ ತಿಂಗಳಿನಿಂದ ಕೊವಿಡ್​ ಪ್ರಕರಣಗಳ ಸಂಖ್ಯೆ ದಿಢೀರ್​ ಹೆಚ್ಚಾಗಿರುವುದನ್ನು ನಾವು ನೋಡಿದ್ದೇವೆ. ಭಾರತದಲ್ಲಿ ಪರಿಸ್ಥಿತಿ ಕೈ ಮೀರಿದೆ. ಸೋಂಕಿತರ ಸಂಖ್ಯೆ ನೋಡಿದರೆ ಶಾಕಿಂಗ್​ ಆಗಿದೆ. ಇದನ್ನು ಈಗಲೇ ತಡೆಯಬೇಕಿದೆ. ಪ್ರತಿಯೊಬ್ಬರೂ ಸುರಕ್ಷಿತವಾಗುವವರೆಗೆ ಇಲ್ಲಿ ಯಾರೂ ಸೇಫ್​ ಅಲ್ಲ’ ಎಂದು ಕೊವಿಡ್​ನ ಗಂಭೀರತೆಯನ್ನು ಅರ್ಥ ಮಾಡಿಸಲು ಈ ದಂಪತಿ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಬೆನ್ನಿಗೆ ಕಾಳಿ ಮಾತೆ ಚಿತ್ರವಿರುವ ಜಾಕೆಟ್​ ತೊಟ್ಟು, ಪತಿ ನಿಕ್​ ಕೈಹಿಡಿದು ಹೊರಟ ಪ್ರಿಯಾಂಕಾ ಚೋಪ್ರಾ ಫೋಟೋ ವೈರಲ್​

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ