AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಿಯಾಂಕಾ ಚೋಪ್ರಾ - ನಿಕ್​ ಜೋನಸ್
ರಾಜೇಶ್ ದುಗ್ಗುಮನೆ
|

Updated on: May 17, 2021 | 5:51 PM

Share

ಪ್ರಿಯಾಂಕಾ ಚೋಪ್ರಾ ಪತಿ, ಅಮೆರಿಕ ಗಾಯಕ ನಿಕ್​ ಜೋನಸ್ ಶೋ ಒಂದರ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಉಂಟಾದ ಅವಘಡದಲ್ಲಿ ಅವರಿಗೆ ಗಾಯಗಳಾಗಿವೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದ ಮೂಲಗಳು ಹೇಳಿವೆ. ಈ ವಿಚಾರ ತಿಳಿಯುತ್ತಿದ್ದಂತೆ ನಿಕ್​ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರಿದ್ದಾರೆ.

ಹೊಸ ಶೋ ಒಂದರ ಶೂಟಿಂಗ್​ನಲ್ಲಿ ನಿಕ್​ ಜೋನಾಸ್​ ಪಾಲ್ಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೀಗಾಗಿ, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ಮೂಲಗಳ ಪ್ರಕಾರ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನಡೆದಿದ್ದಾರೆ ಎನ್ನಲಾಗಿದೆ.

ಭಾರತದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹಬ್ಬುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಯಾವುದೇ ವೈದ್ಯಕೀಯ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ನಿಕ್​ ಜೋನಸ್​ ಅವರು ಭಾರತಕ್ಕಾಗಿ ಮಿಡಿದಿದ್ದರು. ಭಾರತದಲ್ಲಿನ ಕೊವಿಡ್​ ಸೋಂಕಿತರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದರು.

ಭಾರತಕ್ಕೆ ವ್ಯಾಕ್ಸಿನ್​ ಕಳಿಸಿಕೊಡಿ ಎಂದು ಅಮೆರಿಕಕ್ಕೆ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಅವರೀಗ ಪತಿ ನಿಕ್​ ಜೋನಸ್​ ಜೊತೆ ಸೇರಿ ದೇಣಿಗೆ ಸಂಗ್ರಹಕ್ಕೆ ಕರೆ ನೀಡಿದ್ದಾರೆ. ಈ ಬಗ್ಗೆ ಪ್ರಿಯಾಂಕಾ ಮತ್ತು ನಿಕ್​ ಜೋನಸ್​ ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

‘ಕಳೆದ ತಿಂಗಳಿನಿಂದ ಕೊವಿಡ್​ ಪ್ರಕರಣಗಳ ಸಂಖ್ಯೆ ದಿಢೀರ್​ ಹೆಚ್ಚಾಗಿರುವುದನ್ನು ನಾವು ನೋಡಿದ್ದೇವೆ. ಭಾರತದಲ್ಲಿ ಪರಿಸ್ಥಿತಿ ಕೈ ಮೀರಿದೆ. ಸೋಂಕಿತರ ಸಂಖ್ಯೆ ನೋಡಿದರೆ ಶಾಕಿಂಗ್​ ಆಗಿದೆ. ಇದನ್ನು ಈಗಲೇ ತಡೆಯಬೇಕಿದೆ. ಪ್ರತಿಯೊಬ್ಬರೂ ಸುರಕ್ಷಿತವಾಗುವವರೆಗೆ ಇಲ್ಲಿ ಯಾರೂ ಸೇಫ್​ ಅಲ್ಲ’ ಎಂದು ಕೊವಿಡ್​ನ ಗಂಭೀರತೆಯನ್ನು ಅರ್ಥ ಮಾಡಿಸಲು ಈ ದಂಪತಿ ಪ್ರಯತ್ನಿಸಿದ್ದರು.

ಇದನ್ನೂ ಓದಿ: ಬೆನ್ನಿಗೆ ಕಾಳಿ ಮಾತೆ ಚಿತ್ರವಿರುವ ಜಾಕೆಟ್​ ತೊಟ್ಟು, ಪತಿ ನಿಕ್​ ಕೈಹಿಡಿದು ಹೊರಟ ಪ್ರಿಯಾಂಕಾ ಚೋಪ್ರಾ ಫೋಟೋ ವೈರಲ್​

Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?