ನಿಧಿಯ ಉಡುಗೆ ಜನರನ್ನು ಕೆರಳಿಸಿತು; ವಿವಾದಾತ್ಮಕ ಹೇಳಿಕೆ ಕೊಟ್ಟ ನಟ

ಹೈದರಾಬಾದ್ ಮಾಲ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್ವಾಲ್ ಅವರಿಗೆ ಆದ ಅನುಭವದ ಬಗ್ಗೆ ತೆಲುಗು ನಟ ಶಿವಾಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟಿಯ ಉಡುಗೆಯೇ ಜನರನ್ನು ಕೆರಳಿಸಿತು ಎಂದು ಶಿವಾಜಿ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಿಧಿ ಅಗರ್ವಾಲ್, ಸಂತ್ರಸ್ತೆಯನ್ನು ದೂಷಿಸುವುದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ನಿಧಿಯ ಉಡುಗೆ ಜನರನ್ನು ಕೆರಳಿಸಿತು; ವಿವಾದಾತ್ಮಕ ಹೇಳಿಕೆ ಕೊಟ್ಟ ನಟ
ನಿಧಿ

Updated on: Dec 25, 2025 | 3:01 PM

ಹೈದರಾಬಾದ್‌ ಮಾಲ್​​ನಲ್ಲಿ ನಡೆದ ‘ರಾಜಾ ಸಾಬ್’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್​​ವಾಲ್ (Nidhi Agerwal) ಭಾಗಿ ಆಗಿದ್ದರು. ಈ ವೇಳೆ ನಟಿಯ ಮೇಲೆ ಅಲ್ಲಿದ್ದ ಜನರು ಮುಗಿಬಿದ್ದಿದ್ದರು.ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ನಟಿ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ ಈ ಘಟನೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ‘ನಟಿಯರು ಸಾಧಾರಣ ಉಡುಗೆ ತೊಡಬೇಕು’ ಎಂದಿದ್ದಾರೆ. ಈ ಹೇಳಿಕೆ ನಟಿಗೆ ಬೇಸರ ಮೂಡಿಸಿದೆ.

ಡಿಸೆಂಬರ್ 17 ರಂದು ಹೈದರಾಬಾದ್‌ನ ಲುಲು ಮಾಲ್‌ನಲ್ಲಿ ರಾಜಾ ಸಾಬ್‌ನ ಹಾಡಿನ ಬಿಡುಗಡೆ ಸಮಾರಂಭದಲ್ಲಿ ನಿಧಿ ಚಿತ್ರತಂಡದೊಂದಿಗೆ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಊಹೆಗೂ ಮೀರಿದ ಸಂಖ್ಯೆಯಲ್ಲಿ ಜನರು ಸೇರಿದ್ದರು.ಈವೆಂಟ್ ಮುಗಿದ ಬಳಿಕ ನಟಿ ಅಲ್ಲಿಂದ ಹೊರ ಬರಲು ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ಸಾಕಷ್ಟು ಜನರು ಅವರ ದೇಹವನ್ನು ಟಚ್ ಮಾಡಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಯಿತು.
ಶಿವಾಜಿ ಪ್ರತಿಕ್ರಿಯೆ..

ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರೋ ಶಿವಾಜಿ, ‘ನಿಧಿಯ ಉಡುಗೆ ಜನಸಮೂಹವನ್ನು ಕೆರಳಿಸಿತು’ ಎಂದು ನೇರವಾಗಿ ಅವರ ಉಡುಗೆ ಬಗ್ಗೆ ಆರೋಪ ಮಾಡಿದ್ದಾರೆ. ‘ಸಾಯಿ ಪಲ್ಲವಿ, ಅನುಷ್ಕಾ, ಸೌಂದರ್ಯ, ಭೂಮಿಕಾ ಮೊದಲಾದವರನ್ನು ಯಾರಾದರೂ ಟಚ್​ ಮಾಡಿದ್ದಾರಾ? ಏಕೆಂದರೆ ಅವರು ಸರಿಯಾಗಿ ಬಟ್ಟೆ ಹಾಕುತ್ತಾರೆ’ ಎಂದಿದ್ದಾರೆ ಶಿವಾಜಿ.

ಇದನ್ನೂ ಓದಿ: ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

‘ಯಾರೂ ಪ್ರಚೋದಿಸಬೇಡಿ. ನೀವು ಹಾಗೆ ಮಾಡಿದಾಗ ಪುರುಷರು ನಿಮ್ಮನ್ನು ಮುಟ್ಟಬಹುದು ಎಂದು ಭಾವಿಸುತ್ತಾರೆ. ನಿಮಗೆ ಹೇಗೆ ಅನಿಸುತ್ತದೆಯೋ ಹಾಗೆ ಉಡುಗೆ ಧರಿಸಿ. ಆದರೆ,ನಾನು ನಿಜವನ್ನು ಹೇಳುತ್ತಿದ್ದೇನೆ’ ಎಂದಿದ್ದಾರೆ ಅವರು.

ನಟಿಯ ಪ್ರತಿಕ್ರಿಯೆ

ಈ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ನಿಧಿ, ‘ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಲುಲು ಮಾಲ್ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡು, ‘ಸಂತ್ರಸ್ತೆಯನ್ನು ದೂಷಿಸುವುದು ತಪ್ಪು’ ಎಂರ್ಥದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us