AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಳ ಬಗ್ಗೆ ಬೇಕಾಬಿಟ್ಟಿ ಮಾತನಾಡಬೇಡಿ, ನಿಮ್ಮ ಚಪ್ಪಲ್ಲಿಯಲ್ಲಿ ನೀವೇ ಹೊಡ್ಕೋಳಿ; ಚಕ್ರವರ್ತಿ ವಿರುದ್ಧ ತಿರುಗಿಬಿದ್ದ ನಿಧಿ

Chakravarthy Chandrachud: ಟಾಸ್ಕ್​​ನಲ್ಲಿ ರಾಜೀವ್​ ಪಾಲ್ಗೊಂಡ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಅಸಮಧಾನ ಹೊರ ಹಾಕಿದರು.

ಹೆಣ್ಮಕ್ಳ ಬಗ್ಗೆ ಬೇಕಾಬಿಟ್ಟಿ ಮಾತನಾಡಬೇಡಿ, ನಿಮ್ಮ ಚಪ್ಪಲ್ಲಿಯಲ್ಲಿ ನೀವೇ ಹೊಡ್ಕೋಳಿ; ಚಕ್ರವರ್ತಿ ವಿರುದ್ಧ ತಿರುಗಿಬಿದ್ದ ನಿಧಿ
ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Apr 22, 2021 | 10:36 PM

Share

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಬಿಗ್​ ಬಾಸ್​ ಹಿಂದಕ್ಕೆ ಪಡೆದಿದೆ. ಇದರಿಂದ ಮನೆಯ ಸದಸ್ಯರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಶುಭಾ ಪೂಂಜಾ ಸೇರಿದಂತೆ ಅನೇಕರು ಬಿಗ್​ ಬಾಸ್​ಗೆ ಹಿಡಿಶಾಪ ಹಾಕುತ್ತಿದ್ದಾರೆ. ಇದರ ಜತೆಗೆ ಅವರಿಗೆ ಮನೆಯಲ್ಲಿರುವ ವಸ್ತುಗಳ ಮೌಲ್ಯ ನಿಧಾನವಾಗಿ ತಿಳಿಯುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಜಗಳವೇ ನಡೆದುಹೋಗಿದೆ.

ಬಿಗ್​ ಬಾಸ್​ ಮನೆಯಲ್ಲಿ ನೀಡುವ ಟಾಸ್ಕ್​ ಗೆಲ್ಲಬೇಕು ಎನ್ನುವ ಕಾರಣಕ್ಕೆ ದೈಹಿಕವಾಗಿ ಬಲಾಢ್ಯರಾದ ಮಂಜು ಪಾವಗಡ, ರಾಜೀವ್​ ಹಾಗೂ ಅರವಿಂದ್​ ಟಾಸ್ಕ್​ನಲ್ಲಿ ಪಾಲ್ಗೊಂಡಿದ್ದಾರೆ. ಐದು ಟಾಸ್ಕ್​ಗಳ ಪೈಕಿ ಮೂರು ಟಾಸ್ಕ್​ನಲ್ಲಿ ಇವರೇ ಆಟವಾಡಿದ್ದಾರೆ. ಇದನ್ನು ಬಿಗ್​ ಬಾಸ್​ ಗಮನಿಸಿದ್ದಾರೆ. ಅಲ್ಲದೆ, ಈ ಮೂವರಿಗೆ ಮಾತ್ರ ಗ್ಯಾಸ್​ ಸೌಲಭ್ಯ ಸಿಗುತ್ತಿದೆ. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗುತ್ತಿದೆ.

ಟಾಸ್ಕ್​​ನಲ್ಲಿ ರಾಜೀವ್​ ಪಾಲ್ಗೊಂಡ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಅಸಮಧಾನ ಹೊರ ಹಾಕಿದರು. ಈ ಬಗ್ಗೆ ಮಾತನಾಡಿದ ಚಕ್ರವರ್ತಿ, ಬೆಳಗ್ಗೆ ನಾನು ಟಾಸ್ಕ್​ನಲ್ಲಿ ಪಾಲ್ಗೊಳ್ಳುತ್ತೇನೆ ಎಂದೆ. ಆಗ ನಿಧಿ ನಾನು ಬೇಡ ರಾಜೀವ್​ ಪಾಲ್ಗೊಳ್ಳಲಿ ಎಂದರು. ಈ ವಿಚಾರಕ್ಕೆ ನನಗೆ ಬೇಸರ ಆಯ್ತು ಎಂದರು. ಆಗ ನಿಧಿ ಸಿಟ್ಟಾದರು.

ನಾನು ಹಾಗೆ ಹೇಳಲೇ ಇಲ್ಲ. ಹೆಣ್ಮಕ್ಳ ಬಗ್ಗೆ ಬೇಕಾಬಿಟ್ಟಿ ಮಾತಾಡಬೇಡಿ ಎಂದು ಸಿಟ್ಟಾದರು. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್​ ಕೂಡ ಸಿಟ್ಟಾದರು. ನಾನು ಹೇಳಿದ್ದು ಸುಳ್ಳು ಎನ್ನುವುದಾದರೆ ನನ್ನ ಚಪ್ಪಲ್ಲಿ ಕೊಡ್ತೇನೆ. ಹೊಡೆದುಬಿಡಿ ಎಂದರು. ನೀವು ಹೇಳಿದ್ದು ಸಂಪೂರ್ಣ ಸುಳ್ಳು. ನಿಮ್ಮ ಚಪ್ಪಲ್ಲಿಯಲ್ಲಿ ನೀವೇ ಹೊಡೆದುಕೊಳ್ಳಿ ಎಂದು ನಿಧಿ ಸಿಟ್ಟಾದರು. ಈ ವಿಚಾರದ ಬಗ್ಗೆ ಮನೆಯಲ್ಲಿ ದೊಡ್ಡ ಜಗಳವೇ ನಡೆದುಹೋಗಿದೆ.

ಇದನ್ನೂ ಓದಿ: Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ

ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು