AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಳ ಬಗ್ಗೆ ಬೇಕಾಬಿಟ್ಟಿ ಮಾತನಾಡಬೇಡಿ, ನಿಮ್ಮ ಚಪ್ಪಲ್ಲಿಯಲ್ಲಿ ನೀವೇ ಹೊಡ್ಕೋಳಿ; ಚಕ್ರವರ್ತಿ ವಿರುದ್ಧ ತಿರುಗಿಬಿದ್ದ ನಿಧಿ

Chakravarthy Chandrachud: ಟಾಸ್ಕ್​​ನಲ್ಲಿ ರಾಜೀವ್​ ಪಾಲ್ಗೊಂಡ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಅಸಮಧಾನ ಹೊರ ಹಾಕಿದರು.

ಹೆಣ್ಮಕ್ಳ ಬಗ್ಗೆ ಬೇಕಾಬಿಟ್ಟಿ ಮಾತನಾಡಬೇಡಿ, ನಿಮ್ಮ ಚಪ್ಪಲ್ಲಿಯಲ್ಲಿ ನೀವೇ ಹೊಡ್ಕೋಳಿ; ಚಕ್ರವರ್ತಿ ವಿರುದ್ಧ ತಿರುಗಿಬಿದ್ದ ನಿಧಿ
ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Apr 22, 2021 | 10:36 PM

Share

ಮನೆಯಲ್ಲಿ ಸ್ಪರ್ಧಿಗಳು ಬಳಕೆ ಮಾಡುವ ವಸ್ತುಗಳ ಮೌಲ್ಯವನ್ನು ತಿಳಿಸುವ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಬಿಗ್​ ಬಾಸ್​ ಹಿಂದಕ್ಕೆ ಪಡೆದಿದೆ. ಇದರಿಂದ ಮನೆಯ ಸದಸ್ಯರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಶುಭಾ ಪೂಂಜಾ ಸೇರಿದಂತೆ ಅನೇಕರು ಬಿಗ್​ ಬಾಸ್​ಗೆ ಹಿಡಿಶಾಪ ಹಾಕುತ್ತಿದ್ದಾರೆ. ಇದರ ಜತೆಗೆ ಅವರಿಗೆ ಮನೆಯಲ್ಲಿರುವ ವಸ್ತುಗಳ ಮೌಲ್ಯ ನಿಧಾನವಾಗಿ ತಿಳಿಯುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಜಗಳವೇ ನಡೆದುಹೋಗಿದೆ.

ಬಿಗ್​ ಬಾಸ್​ ಮನೆಯಲ್ಲಿ ನೀಡುವ ಟಾಸ್ಕ್​ ಗೆಲ್ಲಬೇಕು ಎನ್ನುವ ಕಾರಣಕ್ಕೆ ದೈಹಿಕವಾಗಿ ಬಲಾಢ್ಯರಾದ ಮಂಜು ಪಾವಗಡ, ರಾಜೀವ್​ ಹಾಗೂ ಅರವಿಂದ್​ ಟಾಸ್ಕ್​ನಲ್ಲಿ ಪಾಲ್ಗೊಂಡಿದ್ದಾರೆ. ಐದು ಟಾಸ್ಕ್​ಗಳ ಪೈಕಿ ಮೂರು ಟಾಸ್ಕ್​ನಲ್ಲಿ ಇವರೇ ಆಟವಾಡಿದ್ದಾರೆ. ಇದನ್ನು ಬಿಗ್​ ಬಾಸ್​ ಗಮನಿಸಿದ್ದಾರೆ. ಅಲ್ಲದೆ, ಈ ಮೂವರಿಗೆ ಮಾತ್ರ ಗ್ಯಾಸ್​ ಸೌಲಭ್ಯ ಸಿಗುತ್ತಿದೆ. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗುತ್ತಿದೆ.

ಟಾಸ್ಕ್​​ನಲ್ಲಿ ರಾಜೀವ್​ ಪಾಲ್ಗೊಂಡ ಬಗ್ಗೆ ಚಕ್ರವರ್ತಿ ಚಂದ್ರಚೂಡ್​ ಅಸಮಧಾನ ಹೊರ ಹಾಕಿದರು. ಈ ಬಗ್ಗೆ ಮಾತನಾಡಿದ ಚಕ್ರವರ್ತಿ, ಬೆಳಗ್ಗೆ ನಾನು ಟಾಸ್ಕ್​ನಲ್ಲಿ ಪಾಲ್ಗೊಳ್ಳುತ್ತೇನೆ ಎಂದೆ. ಆಗ ನಿಧಿ ನಾನು ಬೇಡ ರಾಜೀವ್​ ಪಾಲ್ಗೊಳ್ಳಲಿ ಎಂದರು. ಈ ವಿಚಾರಕ್ಕೆ ನನಗೆ ಬೇಸರ ಆಯ್ತು ಎಂದರು. ಆಗ ನಿಧಿ ಸಿಟ್ಟಾದರು.

ನಾನು ಹಾಗೆ ಹೇಳಲೇ ಇಲ್ಲ. ಹೆಣ್ಮಕ್ಳ ಬಗ್ಗೆ ಬೇಕಾಬಿಟ್ಟಿ ಮಾತಾಡಬೇಡಿ ಎಂದು ಸಿಟ್ಟಾದರು. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್​ ಕೂಡ ಸಿಟ್ಟಾದರು. ನಾನು ಹೇಳಿದ್ದು ಸುಳ್ಳು ಎನ್ನುವುದಾದರೆ ನನ್ನ ಚಪ್ಪಲ್ಲಿ ಕೊಡ್ತೇನೆ. ಹೊಡೆದುಬಿಡಿ ಎಂದರು. ನೀವು ಹೇಳಿದ್ದು ಸಂಪೂರ್ಣ ಸುಳ್ಳು. ನಿಮ್ಮ ಚಪ್ಪಲ್ಲಿಯಲ್ಲಿ ನೀವೇ ಹೊಡೆದುಕೊಳ್ಳಿ ಎಂದು ನಿಧಿ ಸಿಟ್ಟಾದರು. ಈ ವಿಚಾರದ ಬಗ್ಗೆ ಮನೆಯಲ್ಲಿ ದೊಡ್ಡ ಜಗಳವೇ ನಡೆದುಹೋಗಿದೆ.

ಇದನ್ನೂ ಓದಿ: Kichcha Sudeep Salary: ಬಿಗ್​ ಬಾಸ್​ ಸೀಸನ್​ 8ಗೆ ಕಿಚ್ಚ ಸುದೀಪ್​ ಪಡೆದ ಸಂಭಾವನೆ ಎಷ್ಟು?

ಮಂಜು-ಅರವಿಂದ್​ ಸ್ಟ್ರಾಂಗ್​​ ಎಂದು ಒಪ್ಪಿಕೊಂಡ ಬಿಗ್​ಬಾಸ್​ ಸ್ಪರ್ಧಿಗಳಿಗೆ ಕಠಿಣ ಶಿಕ್ಷೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More