AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುಗೆ ದಿವ್ಯಾ ಮೇಲೆ ಇರೋದು ಪ್ರೀತಿ ಅಲ್ಲ ಅದು ಬೇರೆಯೇ; ಶುಭಾ-ನಿಧಿ ಗುಟ್ಟಿನ ಮಾತು ರಟ್ಟು

ಮಂಜು ಪಾವಗಡ ಇತ್ತೀಚೆಗೆ ಟಾಸ್ಕ್​ ಮೇಲೆ ಹೆಚ್ಚು ಕಾನ್ಸಂಟ್ರೇಟ್​​ ಮಾಡುತ್ತಿಲ್ಲ. ದಿವ್ಯಾ ಅತ್ತಾಗ, ಬೇಸರ ಮಾಡಿಕೊಂಡಾಗ ಅಲ್ಲಿಗೆ ಹೋಗಿ ಅವರನ್ನು ಸಮಾಧಾನ ಮಾಡೋಕೆ ಪ್ರಯತ್ನ ಮಾಡುತ್ತಾರೆ.

ಮಂಜುಗೆ ದಿವ್ಯಾ ಮೇಲೆ ಇರೋದು ಪ್ರೀತಿ ಅಲ್ಲ ಅದು ಬೇರೆಯೇ; ಶುಭಾ-ನಿಧಿ ಗುಟ್ಟಿನ ಮಾತು ರಟ್ಟು
ಮಂಜು ಪಾವಗಡ - ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Edited By: |

Updated on: May 09, 2021 | 7:11 AM

Share

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಮೊದಲ ದಿನದಿಂದಲೂ ಆಪ್ತರಾಗಿದ್ದಾರೆ. ಆದರೆ, ಬರುಬರುತ್ತಾ ಮಂಜು ತಮ್ಮ ಎನರ್ಜಿಯೆಲ್ಲ ದಿವ್ಯಾ ಅವರನ್ನು ಸಂಭಾಳಿಸಲು ವ್ಯರ್ಥ ಮಾಡುತ್ತಿದ್ದಾರೆ ಎನ್ನುವ ಮಾತಿದೆ. ಪ್ರೇಕ್ಷಕರಿಗೂ ಕೂಡ ಇದು ಹೌದೆನ್ನಿಸಿದೆ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಯಲ್ಲಿ ನಿಧಿ ಹಾಗೂ ಶುಭಾ ಗುಟ್ಟಿನ ಮಾತು ಹೊರ ಬಿದ್ದಿದೆ.

ಮಂಜು ಪಾವಗಡ ಇತ್ತೀಚೆಗೆ ಟಾಸ್ಕ್​ ಮೇಲೆ ಹೆಚ್ಚು ಕಾನ್ಸಂಟ್ರೇಟ್​​ ಮಾಡುತ್ತಿಲ್ಲ. ದಿವ್ಯಾ ಅತ್ತಾಗ, ದಿವ್ಯಾ ಬೇಸರ ಮಾಡಿಕೊಂಡಾಗ ಅಲ್ಲಿಗೆ ಹೋಗಿ ಅವರನ್ನು ಸಮಾಧಾನ ಮಾಡೋಕೆ ಪ್ರಯತ್ನ ಮಾಡುತ್ತಾರೆ. ಇನ್ನು ಸಂತೋಷದಲ್ಲಿದ್ದಾಗ ದಿವ್ಯಾ-ಮಂಜು ಪ್ರತ್ಯೇಕವಾಗಿ ಕೂತು ಮಾತುಕತೆ ನಡೆಸುತ್ತಾರೆ.

ಮೇ 8ರ ಎಪಿಸೋಡ್​ನಲ್ಲಿ ಅದೇ ರೀತಿ ಆಗಿದೆ. ಕಥೆ ಕಟ್ಟುವ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಒಂದೊಂದು ಜೋಡಿ ಕಥೆ ಹೇಳಬೇಕು. ಮಧ್ಯೆ ಮಧ್ಯೆ ಸ್ಪರ್ಧಿಗಳು ಒಂದು ಶಬ್ದಕೊಡುತ್ತಾರೆ. ಆ ಶಬ್ದ ಬಳಕೆ ಮಾಡಿಕೊಂಡು ಕಥೆ ಮುಂದುವರಿಸಬೇಕು.

ಯಾರು ಉತ್ತಮವಾಗಿ ಕಥೆ ಹೇಳಿದರೋ ಅವರು ಟಾಸ್ಕ್​ ಗೆದ್ದಂತೆ. ಈ ಟಾಸ್ಕ್​ನಲ್ಲಿ ನಾನು  ಉತ್ತಮವಾಗಿ ಕಥೆ ಹೇಳಿದ್ದೇನೆ ಎಂದು ಹೇಳುವಂತೆ ಮಂಜು ಅವರನ್ನು ಒತ್ತಾಯಿಸಿದರು. ಈ ವಿಚಾರ ನಿಧಿ ಕಿವಿಗೆ ಬಿದ್ದಿದೆ. ಇದನ್ನು ಶುಭಾ ಬಳಿ ಹಂಚಿಕೊಂಡಿದ್ದಾರೆ.

ಮಂಜುನ ನಾನೂ ಗಮನಿಸುತ್ತಿದ್ದೇನೆ. ಆರಂಭದಲ್ಲಿ ಆತ ಫಿಯರ್​ಲೆಸ್​ ಆಗಿದ್ದ. ಈಗ ಮಂಜು ಬದಲಾಗಿದ್ದಾನೆ. ಮಂಜುಗೆ ದಿವ್ಯಾ ಮೇಲೆ ಪ್ರೀತಿ ಇಲ್ಲ. ಆತನಿಗೆ ಅವಳ ಮೇಲೆ ಇರೋದು ಕೇವಲ ಭಯ ಎಂದು ಶುಭಾ-ನಿಧಿ ಮಾತನಾಡಿಕೊಂಡರು. ಪ್ರೇಕ್ಷಕರಿಗೂ ಕೂಡ ಇದು ಹೌದೆನ್ನಿಸಿದೆ.

ಇದನ್ನೂ ಓದಿ: Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​ 

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಅಂದು ಹೇಳಿದ್ದ ಮಾತು ಇಷ್ಟು ಬೇಗ ನಿಜವಾಯ್ತೇ?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು