AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?

ಅರವಿಂದ್​ ಈ ರೀತಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್​ಗಳಾಗಿವೆ. ಇತ್ತೀಚೆಗೆ ಚಕ್ರವರ್ತಿ ಜತೆ ಅರವಿಂದ್​ ಹೆಚ್ಚು ಬೆರೆಯುತ್ತಿದ್ದಾರೆ. ಹೀಗಾಗಿ, ಸಹವಾಸ ದೋಷ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?
ಅರವಿಂದ್​ ಕೆಪಿ- ನಿಧಿ
TV9 Web
| Edited By: |

Updated on:Jun 30, 2021 | 4:21 PM

Share

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ. ತಾವಾಗಿಯೇ ಯಾರ ತಂಟೆಗೂ ಹೋದವರಲ್ಲ. ಪ್ರತಿ ಬಾರಿ ಆಟವನ್ನು ಅವರು ಸ್ಪೋರ್ಟಿವ್​ ಆಗಿ ತೆಗೆದುಕೊಳ್ಳುತ್ತಾರೆ. ಆದರೆ, ಜೂನ್​ 29ರ ಎಪಿಸೋಡ್​ನಲ್ಲಿ ಅವರು ಮೊದಲಿನ ಅರವಿಂದ್ ಆಗಿರಲಿಲ್ಲ. ಅವರು ಮಾಡಿದ ಆ ಒಂದು ತಪ್ಪಿನಿಂದ ಸಾಕಷ್ಟು ಟ್ರೋಲ್​ ಆಗುತ್ತಿದ್ದಾರೆ.

ಬಿಗ್​ ಬಾಸ್ ಸ್ಪರ್ಧಿಗಳಿಗೆ​ ಟಾಸ್ಕ್ ಒಂದನ್ನು ನೀಡಿದ್ದಾರೆ. ಇದರ ಅನುಸಾರ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ತಂಡಕ್ಕೆ ಅರವಿಂದ್ ಕ್ಯಾಪ್ಟನ್​ ಆದರೆ, ಮತ್ತೊಂದು ಟೀಂಅನ್ನು ಮಂಜು ಮುನ್ನಡೆಸುತ್ತಿದ್ದಾರೆ. ಟಾಸ್ಕ್​ ನಿಯಮದ ಅನುಸಾರ ಟಿಶ್ಯೂ ರೋಲ್​ಗಳನ್ನು ಸ್ಟೋ ರೂಂನಿಂದ ತಂದು ಗುರುತಿಸಿದ ಜಾಗದಲ್ಲಿ ಒಂದರ ಮೇಲೆ ಒಂದನ್ನು ಎತ್ತರವಾಗಿ ನಿಲ್ಲಿಸಬೇಕು. ಈ ಟಾಸ್ಕ್​ ಆಡುವಾಗ ದಾರಿಯಲ್ಲಿ ಬಿದ್ದ ಟಿಶ್ಯುರೋಲ್​ಗಳನ್ನು ನಿಧಿ ಹೆಕ್ಕಿದ್ದಾರೆ. ಇದು ಅರವಿಂದ್ ಕೋಪಕ್ಕೆ ಕಾರಣವಾಗಿದೆ.

ಈ ವಿಚಾರದಲ್ಲಿ ಮಂಜು-ಅರವಿಂದ್ ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದಾರೆ. ಆಗ ಅರವಿಂದ್, ‘ನಾನು ಕ್ಯಾಪ್ಟನ್​ ಜತೆ ಮಾತನಾಡುತ್ತಿದ್ದೇನೆ. ನೀವು ಸ್ವಲ್ಪ ಮುಚ್ಕೊಳಿ’ ಎಂದಿದ್ದಾರೆ.

ನಂತರ ಅರವಿಂದ್​ ಅವರು ಹೋಗಿ ನಿಧಿಗೆ ಕ್ಷಮೆ ಕೇಳಿದ್ದಾರೆ. ಆದರೆ, ನಿಧಿ ಇದನ್ನು ಒಪ್ಪಿಲ್ಲ. ಇಬ್ಬರ ನಡುವೆ ಈ ವಿಚಾರಕ್ಕೆ ಮಾತಿನ ಚಕಮಕಿ ಏರ್ಪಟ್ಟಿದೆ. ‘ನೀವು ಏನು ಎಂಬುದು ನಂಗೆ ಗೊತ್ತು ಎಂದು ಪದೇಪದೇ ಹೇಳಿದ್ದೀರಿ. ಈ ಆಟದಿಂದ ನಾನು ಏನು ಎಂಬುದು ಗೊತ್ತಾಗುತ್ತದೆಯೇ? ನಾನು ಎಲ್ಲ ಬೈಗುಳಗಳನ್ನು ತೆಗೆದುಕೊಳ್ಳೋಕೆ ರೆಡಿ ಇಲ್ಲ. ನೀವು ಸಾರಿ ಎಂದು ಕೇಳುತ್ತೀರಿ. ಮತ್ತೆ ನನಗೆ ಕ್ಯಾರೆಕ್ಟರ್​ ಇಲ್ಲ ಎಂದು ಹೇಳುತ್ತೀರಿ. ನನಗೆ ಕ್ಯಾರೆಕ್ಟರ್​ ಇದೆ ಅರವಿಂದ್. ನಿಮಗೆ  ಕ್ರೀಡಾಸ್ಫೂರ್ತಿ ​ ಇಲ್ಲ. ಸೋಲನ್ನು ಒಪ್ಪಿಕೊಳ್ಳೋಕೆ ನಿನಗೆ ಆಗಲ್ಲ’ ಎಂದು ನಿಧಿ ಗರಂ ಆದರು.

ಅರವಿಂದ್​ ಈ ರೀತಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್​ಗಳಾಗಿವೆ. ಇತ್ತೀಚೆಗೆ ಚಕ್ರವರ್ತಿ ಜತೆ ಅರವಿಂದ್​ ಹೆಚ್ಚು ಬೆರೆಯುತ್ತಿದ್ದಾರೆ. ಹೀಗಾಗಿ, ಸಹವಾಸ ದೋಷ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ. ಅರವಿಂದ್ ಈ ರೀತಿ ಮಾತನಾಡಿರುವುದಕ್ಕೆ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಅವರ ಬಿಗ್​ ಬಾಸ್​ ಜರ್ನಿಗೆ ಹಿನ್ನಡೆ ಆದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

Published On - 3:28 pm, Wed, 30 June 21

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ