ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?

ಅರವಿಂದ್​ ಈ ರೀತಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್​ಗಳಾಗಿವೆ. ಇತ್ತೀಚೆಗೆ ಚಕ್ರವರ್ತಿ ಜತೆ ಅರವಿಂದ್​ ಹೆಚ್ಚು ಬೆರೆಯುತ್ತಿದ್ದಾರೆ. ಹೀಗಾಗಿ, ಸಹವಾಸ ದೋಷ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?
ಅರವಿಂದ್​ ಕೆಪಿ- ನಿಧಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 30, 2021 | 4:21 PM

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ. ತಾವಾಗಿಯೇ ಯಾರ ತಂಟೆಗೂ ಹೋದವರಲ್ಲ. ಪ್ರತಿ ಬಾರಿ ಆಟವನ್ನು ಅವರು ಸ್ಪೋರ್ಟಿವ್​ ಆಗಿ ತೆಗೆದುಕೊಳ್ಳುತ್ತಾರೆ. ಆದರೆ, ಜೂನ್​ 29ರ ಎಪಿಸೋಡ್​ನಲ್ಲಿ ಅವರು ಮೊದಲಿನ ಅರವಿಂದ್ ಆಗಿರಲಿಲ್ಲ. ಅವರು ಮಾಡಿದ ಆ ಒಂದು ತಪ್ಪಿನಿಂದ ಸಾಕಷ್ಟು ಟ್ರೋಲ್​ ಆಗುತ್ತಿದ್ದಾರೆ.

ಬಿಗ್​ ಬಾಸ್ ಸ್ಪರ್ಧಿಗಳಿಗೆ​ ಟಾಸ್ಕ್ ಒಂದನ್ನು ನೀಡಿದ್ದಾರೆ. ಇದರ ಅನುಸಾರ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ತಂಡಕ್ಕೆ ಅರವಿಂದ್ ಕ್ಯಾಪ್ಟನ್​ ಆದರೆ, ಮತ್ತೊಂದು ಟೀಂಅನ್ನು ಮಂಜು ಮುನ್ನಡೆಸುತ್ತಿದ್ದಾರೆ. ಟಾಸ್ಕ್​ ನಿಯಮದ ಅನುಸಾರ ಟಿಶ್ಯೂ ರೋಲ್​ಗಳನ್ನು ಸ್ಟೋ ರೂಂನಿಂದ ತಂದು ಗುರುತಿಸಿದ ಜಾಗದಲ್ಲಿ ಒಂದರ ಮೇಲೆ ಒಂದನ್ನು ಎತ್ತರವಾಗಿ ನಿಲ್ಲಿಸಬೇಕು. ಈ ಟಾಸ್ಕ್​ ಆಡುವಾಗ ದಾರಿಯಲ್ಲಿ ಬಿದ್ದ ಟಿಶ್ಯುರೋಲ್​ಗಳನ್ನು ನಿಧಿ ಹೆಕ್ಕಿದ್ದಾರೆ. ಇದು ಅರವಿಂದ್ ಕೋಪಕ್ಕೆ ಕಾರಣವಾಗಿದೆ.

ಈ ವಿಚಾರದಲ್ಲಿ ಮಂಜು-ಅರವಿಂದ್ ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದಾರೆ. ಆಗ ಅರವಿಂದ್, ‘ನಾನು ಕ್ಯಾಪ್ಟನ್​ ಜತೆ ಮಾತನಾಡುತ್ತಿದ್ದೇನೆ. ನೀವು ಸ್ವಲ್ಪ ಮುಚ್ಕೊಳಿ’ ಎಂದಿದ್ದಾರೆ.

ನಂತರ ಅರವಿಂದ್​ ಅವರು ಹೋಗಿ ನಿಧಿಗೆ ಕ್ಷಮೆ ಕೇಳಿದ್ದಾರೆ. ಆದರೆ, ನಿಧಿ ಇದನ್ನು ಒಪ್ಪಿಲ್ಲ. ಇಬ್ಬರ ನಡುವೆ ಈ ವಿಚಾರಕ್ಕೆ ಮಾತಿನ ಚಕಮಕಿ ಏರ್ಪಟ್ಟಿದೆ. ‘ನೀವು ಏನು ಎಂಬುದು ನಂಗೆ ಗೊತ್ತು ಎಂದು ಪದೇಪದೇ ಹೇಳಿದ್ದೀರಿ. ಈ ಆಟದಿಂದ ನಾನು ಏನು ಎಂಬುದು ಗೊತ್ತಾಗುತ್ತದೆಯೇ? ನಾನು ಎಲ್ಲ ಬೈಗುಳಗಳನ್ನು ತೆಗೆದುಕೊಳ್ಳೋಕೆ ರೆಡಿ ಇಲ್ಲ. ನೀವು ಸಾರಿ ಎಂದು ಕೇಳುತ್ತೀರಿ. ಮತ್ತೆ ನನಗೆ ಕ್ಯಾರೆಕ್ಟರ್​ ಇಲ್ಲ ಎಂದು ಹೇಳುತ್ತೀರಿ. ನನಗೆ ಕ್ಯಾರೆಕ್ಟರ್​ ಇದೆ ಅರವಿಂದ್. ನಿಮಗೆ  ಕ್ರೀಡಾಸ್ಫೂರ್ತಿ ​ ಇಲ್ಲ. ಸೋಲನ್ನು ಒಪ್ಪಿಕೊಳ್ಳೋಕೆ ನಿನಗೆ ಆಗಲ್ಲ’ ಎಂದು ನಿಧಿ ಗರಂ ಆದರು.

ಅರವಿಂದ್​ ಈ ರೀತಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್​ಗಳಾಗಿವೆ. ಇತ್ತೀಚೆಗೆ ಚಕ್ರವರ್ತಿ ಜತೆ ಅರವಿಂದ್​ ಹೆಚ್ಚು ಬೆರೆಯುತ್ತಿದ್ದಾರೆ. ಹೀಗಾಗಿ, ಸಹವಾಸ ದೋಷ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ. ಅರವಿಂದ್ ಈ ರೀತಿ ಮಾತನಾಡಿರುವುದಕ್ಕೆ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಅವರ ಬಿಗ್​ ಬಾಸ್​ ಜರ್ನಿಗೆ ಹಿನ್ನಡೆ ಆದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

Published On - 3:28 pm, Wed, 30 June 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ