AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?

ಅರವಿಂದ್​ ಈ ರೀತಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್​ಗಳಾಗಿವೆ. ಇತ್ತೀಚೆಗೆ ಚಕ್ರವರ್ತಿ ಜತೆ ಅರವಿಂದ್​ ಹೆಚ್ಚು ಬೆರೆಯುತ್ತಿದ್ದಾರೆ. ಹೀಗಾಗಿ, ಸಹವಾಸ ದೋಷ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?
ಅರವಿಂದ್​ ಕೆಪಿ- ನಿಧಿ
TV9 Web
| Edited By: |

Updated on:Jun 30, 2021 | 4:21 PM

Share

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ. ತಾವಾಗಿಯೇ ಯಾರ ತಂಟೆಗೂ ಹೋದವರಲ್ಲ. ಪ್ರತಿ ಬಾರಿ ಆಟವನ್ನು ಅವರು ಸ್ಪೋರ್ಟಿವ್​ ಆಗಿ ತೆಗೆದುಕೊಳ್ಳುತ್ತಾರೆ. ಆದರೆ, ಜೂನ್​ 29ರ ಎಪಿಸೋಡ್​ನಲ್ಲಿ ಅವರು ಮೊದಲಿನ ಅರವಿಂದ್ ಆಗಿರಲಿಲ್ಲ. ಅವರು ಮಾಡಿದ ಆ ಒಂದು ತಪ್ಪಿನಿಂದ ಸಾಕಷ್ಟು ಟ್ರೋಲ್​ ಆಗುತ್ತಿದ್ದಾರೆ.

ಬಿಗ್​ ಬಾಸ್ ಸ್ಪರ್ಧಿಗಳಿಗೆ​ ಟಾಸ್ಕ್ ಒಂದನ್ನು ನೀಡಿದ್ದಾರೆ. ಇದರ ಅನುಸಾರ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ತಂಡಕ್ಕೆ ಅರವಿಂದ್ ಕ್ಯಾಪ್ಟನ್​ ಆದರೆ, ಮತ್ತೊಂದು ಟೀಂಅನ್ನು ಮಂಜು ಮುನ್ನಡೆಸುತ್ತಿದ್ದಾರೆ. ಟಾಸ್ಕ್​ ನಿಯಮದ ಅನುಸಾರ ಟಿಶ್ಯೂ ರೋಲ್​ಗಳನ್ನು ಸ್ಟೋ ರೂಂನಿಂದ ತಂದು ಗುರುತಿಸಿದ ಜಾಗದಲ್ಲಿ ಒಂದರ ಮೇಲೆ ಒಂದನ್ನು ಎತ್ತರವಾಗಿ ನಿಲ್ಲಿಸಬೇಕು. ಈ ಟಾಸ್ಕ್​ ಆಡುವಾಗ ದಾರಿಯಲ್ಲಿ ಬಿದ್ದ ಟಿಶ್ಯುರೋಲ್​ಗಳನ್ನು ನಿಧಿ ಹೆಕ್ಕಿದ್ದಾರೆ. ಇದು ಅರವಿಂದ್ ಕೋಪಕ್ಕೆ ಕಾರಣವಾಗಿದೆ.

ಈ ವಿಚಾರದಲ್ಲಿ ಮಂಜು-ಅರವಿಂದ್ ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದಾರೆ. ಆಗ ಅರವಿಂದ್, ‘ನಾನು ಕ್ಯಾಪ್ಟನ್​ ಜತೆ ಮಾತನಾಡುತ್ತಿದ್ದೇನೆ. ನೀವು ಸ್ವಲ್ಪ ಮುಚ್ಕೊಳಿ’ ಎಂದಿದ್ದಾರೆ.

ನಂತರ ಅರವಿಂದ್​ ಅವರು ಹೋಗಿ ನಿಧಿಗೆ ಕ್ಷಮೆ ಕೇಳಿದ್ದಾರೆ. ಆದರೆ, ನಿಧಿ ಇದನ್ನು ಒಪ್ಪಿಲ್ಲ. ಇಬ್ಬರ ನಡುವೆ ಈ ವಿಚಾರಕ್ಕೆ ಮಾತಿನ ಚಕಮಕಿ ಏರ್ಪಟ್ಟಿದೆ. ‘ನೀವು ಏನು ಎಂಬುದು ನಂಗೆ ಗೊತ್ತು ಎಂದು ಪದೇಪದೇ ಹೇಳಿದ್ದೀರಿ. ಈ ಆಟದಿಂದ ನಾನು ಏನು ಎಂಬುದು ಗೊತ್ತಾಗುತ್ತದೆಯೇ? ನಾನು ಎಲ್ಲ ಬೈಗುಳಗಳನ್ನು ತೆಗೆದುಕೊಳ್ಳೋಕೆ ರೆಡಿ ಇಲ್ಲ. ನೀವು ಸಾರಿ ಎಂದು ಕೇಳುತ್ತೀರಿ. ಮತ್ತೆ ನನಗೆ ಕ್ಯಾರೆಕ್ಟರ್​ ಇಲ್ಲ ಎಂದು ಹೇಳುತ್ತೀರಿ. ನನಗೆ ಕ್ಯಾರೆಕ್ಟರ್​ ಇದೆ ಅರವಿಂದ್. ನಿಮಗೆ  ಕ್ರೀಡಾಸ್ಫೂರ್ತಿ ​ ಇಲ್ಲ. ಸೋಲನ್ನು ಒಪ್ಪಿಕೊಳ್ಳೋಕೆ ನಿನಗೆ ಆಗಲ್ಲ’ ಎಂದು ನಿಧಿ ಗರಂ ಆದರು.

ಅರವಿಂದ್​ ಈ ರೀತಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್​ಗಳಾಗಿವೆ. ಇತ್ತೀಚೆಗೆ ಚಕ್ರವರ್ತಿ ಜತೆ ಅರವಿಂದ್​ ಹೆಚ್ಚು ಬೆರೆಯುತ್ತಿದ್ದಾರೆ. ಹೀಗಾಗಿ, ಸಹವಾಸ ದೋಷ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ. ಅರವಿಂದ್ ಈ ರೀತಿ ಮಾತನಾಡಿರುವುದಕ್ಕೆ ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಅವರ ಬಿಗ್​ ಬಾಸ್​ ಜರ್ನಿಗೆ ಹಿನ್ನಡೆ ಆದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

Published On - 3:28 pm, Wed, 30 June 21

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ