AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

Prashanth Sambargi - Nidhi Subbaiah: ಕಳೆದ ವಾರ ಮಾತನಾಡಿದ್ದ ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಮನೆಯಲ್ಲಿ ಬೆಂಕಿ ಹಚ್ಚುವ ಸೂಚನೆ ನೀಡಿದ್ದರು. ಇದಕ್ಕೆ ತಕ್ಕಂತೆ ಇಬ್ಬರೂ ಸ್ಟ್ರೆಟಜಿ ಮಾಡಿಕೊಂಡಂತೆ ಕಾಣುತ್ತಿದೆ.

ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ
ನಿಧಿ ಸುಬ್ಬಯ್ಯ - ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on:Apr 23, 2021 | 9:20 AM

Share

ಪ್ರಶಾಂತ್​ ಸಂಬರಗಿ ಅಡುಗೆ ಮನೆ ವಿಚಾರದಲ್ಲಿ ತುಂಬಾನೇ ಚರ್ಚೆ ಆಗುತ್ತಿದ್ದಾರೆ. ಆರಂಭದಲ್ಲಿ ತುಪ್ಪ ತಿಂದ ವಿಚಾರಕ್ಕೆ ಭಾರೀ ಸುದ್ದಿಯಾಗಿದ್ದರು. ತುಪ್ಪಾ ತಿಂದಿದ್ದೇ ತಪ್ಪಾ ಎಂದು ಪುಸ್ತಕ ಬರೆಯುತ್ತೇನೆ ಎಂದು ಕೂಡ ಹೇಳಿದ್ದರು. ಇದಾದ ನಂತರ ಸಾಕಷ್ಟು ಬಾರಿ ಅವರ ವಿರುದ್ಧ ಆರೋಪಗಳು ಕೇಳಿ ಬರುತ್ತಲೇ ಇದ್ದವು. ಈಗ ಮೊಟ್ಟೆ ವಿಚಾರದಲ್ಲಿ ನಡೆದ ಜಗಳದಲ್ಲಿ ಮನೆ ರಣರಂಗವಾಗಿದೆ.

ಕಳೆದ ವಾರ ಮಾತನಾಡಿದ್ದ ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಮನೆಯಲ್ಲಿ ಬೆಂಕಿ ಹಚ್ಚುವ ಸೂಚನೆ ನೀಡಿದ್ದರು. ಇದಕ್ಕೆ ತಕ್ಕಂತೆ ಇಬ್ಬರೂ ಸ್ಟ್ರೆಟಜಿ ಮಾಡಿಕೊಂಡಂತೆ ಕಾಣುತ್ತಿದೆ. ಈ ವಾರ ಬಿಗ್​ ಬಾಸ್​ ಮನೆಯಲ್ಲಿ ಬೆಂಕಿ ಹತ್ತಿಕೊಂಡಿದೆ.

ಬಿಗ್​ ಬಾಸ್ ಸೌಲಭ್ಯಗಳನ್ನು ಕಿತ್ತುಕೊಂಡಿದ್ದಾರೆ. ಹೀಗಾಗಿ, ಗ್ಯಾಸ್​ ಇಲ್ಲದೆ ಅಡುಗೆ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಮೊಟ್ಟೆಯನ್ನು ಓವನ್​ನಲ್ಲಿ ಇಟ್ಟು ಬೇಯಿಸೋಕೆ ಮನೆ ಮಂದಿ ಮುಂದಾಗಿದ್ದರು. ನಿಧಿ ಹಾಗೂ ಪ್ರಶಾಂತ್​ ಇಬ್ಬರೂ ಸೇರಿ ಮೊಟ್ಟೆ ಬೇಯಿಸಿದರು. ಆದರೆ, ಅದು ಒಡೆದೇ ಹೋಯಿತು. ಇದನ್ನು ನಾನು ಟ್ರೈಲ್​ ನೋಡ್ತೀನಿ ಎಂದು ಪ್ರಶಾಂತ್​ ತಿಂದರು.

ಇದಾದ ನಂತರ ಮತ್ತೊಮ್ಮೆ ಪ್ರಶಾಂತ್​ ಮೊಟ್ಟೆ ತಿನ್ನೋಕೆ ಮುಂದಾದರು. ಈ ವಿಚಾರ ಭಾರೀ ಚರ್ಚೆಗೆ ಕಾರಣವಾಯಿತು. ಮನೆಯವರ ಜತೆ ನಿಧಿ ಈ ಬಗ್ಗೆ ಅಪಸ್ವರ ತೆಗೆದರು. ಆಗ ಪ್ರಶಾಂತ್​ ಸಂಬರಗಿ ತೀರಾ ಖಾಸಗಿ ವಿಚಾರಗಳನ್ನು ತೆಗೆದು ಮಾತನಾಡಿದರು.

ನೀನು ಒಡೆದು ಹಾಕಿದ ಮೊಟ್ಟೆಯನ್ನು ನಾನು ಬಳಿದುಕೊಂಡು ತಿಂದಿದ್ದೇನೆ. ನಾನು ನಿನ್ನ ವಿಚಾರಕ್ಕೆ ಬಂದಿಲ್ಲ. ನೀನು ನನ್ನ ವಿಚಾರಕ್ಕೆ ಬರಬೇಡ. ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ ಎಂದು ಪದೇಪದೇ ಒತ್ತಿ ಹೇಳಿದರು. ಇದಕ್ಕೆ ನಿಧಿ ಅತ್ತೇಬಿಟ್ಟರು.

ಕಳೆದವಾರ ಪ್ರಶಾಂತ್​, ನಾನು ಕೂಡ ಹಾಗೇ. ಪಾಪ ಅನ್ನೋದಲ್ಲ ಇನ್ಮುಂದೆ ಇರಲ್ಲ. ಮೊದಲಿನ ಆಟಕ್ಕೆ ಮರಳುತ್ತೇನೆ ಎಂದಿದ್ದರು. ಅದರಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಹೆಣ್ಮಕ್ಳ ಬಗ್ಗೆ ಬೇಕಾಬಿಟ್ಟಿ ಮಾತನಾಡಬೇಡಿ, ನಿಮ್ಮ ಚಪ್ಪಲ್ಲಿಯಲ್ಲಿ ನೀವೇ ಹೊಡ್ಕೋಳಿ; ಚಕ್ರವರ್ತಿ ವಿರುದ್ಧ ತಿರುಗಿಬಿದ್ದ ನಿಧಿ

Published On - 7:13 am, Fri, 23 April 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?