AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷಗಳ ಹಿಂದೆ ನಿಧಿ ಸುಬ್ಬಯ್ಯ ಮದುವೆ ಆಗಿದ್ರು; ಆಮೇಲೇನಾಯ್ತು?

ಯೋಗರಾಜ್​ ಭಟ್​ ನಟನೆಯ ಪಂಚರಂಗಿ ಸಿನಿಮಾ ನಿಧಿ ಸುಬ್ಬಯ್ಯಗೆ ಹಿಟ್​ ತಂದುಕೊಟ್ಟಿತ್ತು. ಇದಾದ ನಂತರ ನಿಧಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ನಿಧಿ ಸುಬ್ಬಯ್ಯ ಮದುವೆ ಆಗಿದ್ರು; ಆಮೇಲೇನಾಯ್ತು?
ಸಂಗ್ರಹ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Apr 03, 2021 | 7:05 AM

Share

ನಟಿ ನಿಧಿ ಸುಬ್ಬಯ್ಯ ಬಿಗ್​ ಬಾಸ್​ ಮನೆ ಪ್ರವೇಶಿಸಿ ಐದು ವಾರಗಳು ಕಳೆದಿವೆ. ಎಲ್ಲಾ ಸ್ಪರ್ಧಿಗಳು ತಮ್ಮ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ನಿಧಿ ಕೂಡ ಇದಕ್ಕೆ ಹೊರತಾಗಿಲ್ಲ. ತಮ್ಮ ತಂದೆಗೆ ಕ್ಯಾನ್ಸರ್​ ಆಗಿತ್ತು ಎಂಬಿತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದರು. ಆದರೆ, ಅವರು ಎಲ್ಲಿಯೂ ಮದುವೆ ಆಗಿದೆ ಎನ್ನುವ ವಿಚಾರದ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಇದು ಏಕೆ? ಎನ್ನುವ ಪ್ರಶ್ನೆ ಅನೇಕರಲ್ಲಿ ಕಾಡುತ್ತಿದೆ. ಯೋಗರಾಜ್​ ಭಟ್​ ನಟನೆಯ ಪಂಚರಂಗಿ ಸಿನಿಮಾ ನಿಧಿ ಸುಬ್ಬಯ್ಯಗೆ ಹಿಟ್​ ತಂದುಕೊಟ್ಟಿತ್ತು. ಇದಾದ ನಂತರ ನಿಧಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಾಲಿವುಡ್​ ಅಂಗಳದಲ್ಲೂ ನಿಧಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಈ ಮಧ್ಯೆ 2017ರಲ್ಲಿ ನಿಧಿ ಮದುವೆ ಆಗಿದ್ದರು.

ಲವೇಶ್​ ಹೆಸರಿನ ಉದ್ಯಮಿಯನ್ನು ನಿಧಿ ಪ್ರೀತಿಸುತ್ತಿದ್ದರು. 2017ರಲ್ಲಿ ವಿರಾಜಪೇಟೆಯ ಖಾಸಗಿ ರೆಸಾರ್ಟ್​ನಲ್ಲಿ ಇವರು ಮದುವೆ ಕೂಡ ಆಗಿದ್ದರು. ನಂತರ ನಿಧಿ ಪತಿ ಜತೆ ವಿದೇಶಕ್ಕೆ ಹಾರಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ನಿಧಿ ಸಾಮಾಜಿಕ ಜಾಲತಾಣದಲ್ಲಿ ದೂರವೇ ಉಳಿದಿದ್ದರು.

2017ರ ಸಮಯದಲ್ಲಿ ನಿಧಿ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಆ ಫೋಟೋಗಳು ಕಾಣುತ್ತಿಲ್ಲ. ಅಲ್ಲದೆ, ಬಿಗ್​ ಬಾಸ್​ ಮನೆಯಲ್ಲಿ ಎಲ್ಲೂ ಅವರು ತಮಗೆ ಮದುವೆ ಆಗಿತ್ತು ಎಂಬುದಾಗಲೀ, ಪತಿ ಏನು ಮಾಡುತ್ತಿದ್ದಾರೆ ಎಂಬುದಾಗಲೀ ಹಂಚಿಕೊಂಡಿಲ್ಲ. ಇತ್ತೀಚೆಗೆ ಅವರು ನನಗೂ ಒಬ್ಬ ಗೆಳೆಯ ಬೇಕು ಎಂದು ಹೇಳಿಕೊಂಡಿದ್ದರು. ಇದು ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ.

ಮೂಲಗಳ ಪ್ರಕಾರ ಮದುವೆ ಆದ ನಂತರ ಒಂದೇ ವರ್ಷದಲ್ಲಿ ಇಬ್ಬರೂ ವಿಚ್ಛೇದನ ಪಡೆದಿದ್ದಾರಂತೆ. ಆದರೆ, ಈ ವಿಚಾರ ಎಲ್ಲೂ ಅಷ್ಟಾಗಿ ಸುದ್ದಿಯಾಗಿಲ್ಲ. ನಿಧಿ ಕೂಡ ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಸದ್ಯ, ಈ ವಿಚಾರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಇದೆ. ಈ ಬಗ್ಗೆ ಅವರು ಬಿಗ್​ ಬಾಸ್​ ಮನೆಯಲ್ಲಿ ಎಲ್ಲಾದರೂ ಹೇಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ಎದುರು ತಪ್ಪು ಒಪ್ಪಿಕೊಂಡ ನಿಧಿ; ದ್ವೇಷ ಕಳೆದುಕೊಂಡು ಒಂದಾದರು!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ