AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸ್ಪರ್ಧಿ ನಿಧಿ ಸುಬ್ಬಯ್ಯ ವೈವಾಹಿಕ ಜೀವನದ ಬಗ್ಗೆ ಕೊನೆಗೂ ಸಿಕ್ತು ಸ್ಪಷ್ಟನೆ

ಇತ್ತೀಚೆಗೆ ನಿಧಿ ಲೈವ್​ ಬಂದಿದ್ದರು. ಈ ವೇಳೆ ನಿಮ್ಮ ಮದುವೆ ಮತ್ತು ನಂತರದ ವೈವಾಹಿಕ ಜೀವನದ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಹೇಳಲಿಲ್ಲ ಏಕೆ ಎನ್ನುವ ಪ್ರಶ್ನೆ ಬಂತು. ಆಗ ನಿಧಿ ಎಲ್ಲದಕ್ಕೂ ಉತ್ತರಿಸಿದರು.

ಬಿಗ್​ ಬಾಸ್​ ಸ್ಪರ್ಧಿ ನಿಧಿ ಸುಬ್ಬಯ್ಯ ವೈವಾಹಿಕ ಜೀವನದ ಬಗ್ಗೆ ಕೊನೆಗೂ ಸಿಕ್ತು ಸ್ಪಷ್ಟನೆ
ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on:May 16, 2021 | 6:16 PM

Share

ನಟಿ ನಿಧಿ ಸುಬ್ಬಯ್ಯ ಬಿಗ್​ ಬಾಸ್​ ಮನೆ ಪ್ರವೇಶಿಸಿ 11 ವಾರ ಇದ್ದರು. ಬಿಗ್​ ಬಾಸ್​ ಅರ್ಧಕ್ಕೆ ನಿಂತ ನಂತರದಲ್ಲಿ ಅವರು ಮನೆಯಿಂದ ಹೊರ ಬಂದಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳು ತಮ್ಮ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು. ನಿಧಿ ಕೂಡ ಇದಕ್ಕೆ ಹೊರತಾಗಿರಲಿಲ್ಲ. ತಮ್ಮ ತಂದೆಗೆ ಕ್ಯಾನ್ಸರ್​ ಆಗಿತ್ತು ಎಂಬಿತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದರು. ಆದರೆ, ಅವರು ಎಲ್ಲಿಯೂ ಮದುವೆ ಆಗಿದ್ದ ವಿಚಾರದ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರ ಆ ಬಗ್ಗೆ ನಿಧಿ ಮೌನ ಮುರಿದರು.

ಯೋಗರಾಜ್​ ಭಟ್​ ನಟನೆಯ ಪಂಚರಂಗಿ ಸಿನಿಮಾ ನಿಧಿ ಸುಬ್ಬಯ್ಯಗೆ ಹಿಟ್​ ತಂದುಕೊಟ್ಟಿತ್ತು. ಇದಾದ ನಂತರ ನಿಧಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಾಲಿವುಡ್​ ಅಂಗಳದಲ್ಲೂ ನಿಧಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಲವೇಶ್​ ಹೆಸರಿನ ಉದ್ಯಮಿಯನ್ನು ನಿಧಿ ಪ್ರೀತಿಸುತ್ತಿದ್ದರು. 2017ರಲ್ಲಿ ವಿರಾಜಪೇಟೆಯ ಖಾಸಗಿ ರೆಸಾರ್ಟ್​ನಲ್ಲಿ ಇವರು ಮದುವೆ ಕೂಡ ಆಗಿದ್ದರು. ನಂತರ ನಿಧಿ ಪತಿ ಜತೆ ವಿದೇಶಕ್ಕೆ ಹಾರಿದ್ದರು ಎನ್ನಲಾಗಿತ್ತು. ಈ ಅವಧಿಯಲ್ಲಿ ನಿಧಿ ಸಾಮಾಜಿಕ ಜಾಲತಾಣದಿಂದ ದೂರವೇ ಉಳಿದಿದ್ದರು. ಕೊನೆಗೆ ಪತಿಯಿಂದ ನಿಧಿ ದೂರವಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ನಿಧಿ ಉತ್ತರಿಸಿದ್ದಾರೆ.

ಇತ್ತೀಚೆಗೆ ನಿಧಿ ಲೈವ್​ ಬಂದಿದ್ದರು. ಈ ವೇಳೆ ನಿಮ್ಮ ಮದುವೆ ಮತ್ತು ನಂತರದ ವೈವಾಹಿಕ ಜೀವನದ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಹೇಳಲಿಲ್ಲ ಏಕೆ ಎನ್ನುವ ಪ್ರಶ್ನೆ ಬಂತು. ಆಗ ನಿಧಿ ಎಲ್ಲದಕ್ಕೂ ಉತ್ತರಿಸಿದರು. ‘ಇದಕ್ಕೆ ಹೇಗೆ ಉತ್ತರ ನೀಡಲಿ. ನಿಜ ಜೀವನದಲ್ಲಿ ಏನಾದರೂ ಕೆಟ್ಟದ್ದು ಆಗಿದೆ ಎಂದರೆ ಅದರ ಬಗ್ಗೆ ಹೇಳಿಕೊಂಡು ಸಹಾನುಭೂತಿ ಪಡೆಯಬೇಕು ಎಂಬ ಉದ್ದೇಶ ನನ್ನದಲ್ಲ’ ಎಂದು ಅವರು ಮಾತು ಆರಂಭಿಸಿದರು.

‘ನಾನು ಮದುವೆ ಆಗಿದ್ದೆ. ಆದರೆ, 10 ತಿಂಗಳು ಮಾತ್ರ ಸಂಸಾರ ಮಾಡಿದೆವು. ಅದಕ್ಕಿಂತಲೂ ಮುಂದೆ ನಮ್ಮ ದಾಂಪತ್ಯ ಜೀವನ ನಡೆದಿಲ್ಲ. ಅಮ್ಮನ ಬಳಿಯೂ ನಾನು ಈ ವಿಚಾರ ಚರ್ಚೆ ಮಾಡಲ್ಲ. ಅದನ್ನು ಅಲ್ಲಿಗೆ ಬಿಟ್ಟು ಜೀವನದ ಜೊತೆ ಮುಂದೆ ಸಾಗೋಣ ಅನ್ನೋದು ನನ್ನ ಪಾಲಿಸಿ. ಅದಕ್ಕೆ ನಾನು ಅದರ ಬಗ್ಗೆ ಅಲ್ಲಿ ಮಾತನಾಡಲಿಲ್ಲ’ ಎಂದು ನಿಧಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

Published On - 6:14 pm, Sun, 16 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!