ಬಿಗ್​ ಬಾಸ್​ ಸ್ಪರ್ಧಿ ನಿಧಿ ಸುಬ್ಬಯ್ಯ ವೈವಾಹಿಕ ಜೀವನದ ಬಗ್ಗೆ ಕೊನೆಗೂ ಸಿಕ್ತು ಸ್ಪಷ್ಟನೆ

ಇತ್ತೀಚೆಗೆ ನಿಧಿ ಲೈವ್​ ಬಂದಿದ್ದರು. ಈ ವೇಳೆ ನಿಮ್ಮ ಮದುವೆ ಮತ್ತು ನಂತರದ ವೈವಾಹಿಕ ಜೀವನದ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಹೇಳಲಿಲ್ಲ ಏಕೆ ಎನ್ನುವ ಪ್ರಶ್ನೆ ಬಂತು. ಆಗ ನಿಧಿ ಎಲ್ಲದಕ್ಕೂ ಉತ್ತರಿಸಿದರು.

ಬಿಗ್​ ಬಾಸ್​ ಸ್ಪರ್ಧಿ ನಿಧಿ ಸುಬ್ಬಯ್ಯ ವೈವಾಹಿಕ ಜೀವನದ ಬಗ್ಗೆ ಕೊನೆಗೂ ಸಿಕ್ತು ಸ್ಪಷ್ಟನೆ
ನಿಧಿ ಸುಬ್ಬಯ್ಯ

Updated on: May 16, 2021 | 6:16 PM

ನಟಿ ನಿಧಿ ಸುಬ್ಬಯ್ಯ ಬಿಗ್​ ಬಾಸ್​ ಮನೆ ಪ್ರವೇಶಿಸಿ 11 ವಾರ ಇದ್ದರು. ಬಿಗ್​ ಬಾಸ್​ ಅರ್ಧಕ್ಕೆ ನಿಂತ ನಂತರದಲ್ಲಿ ಅವರು ಮನೆಯಿಂದ ಹೊರ ಬಂದಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳು ತಮ್ಮ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು. ನಿಧಿ ಕೂಡ ಇದಕ್ಕೆ ಹೊರತಾಗಿರಲಿಲ್ಲ. ತಮ್ಮ ತಂದೆಗೆ ಕ್ಯಾನ್ಸರ್​ ಆಗಿತ್ತು ಎಂಬಿತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದರು. ಆದರೆ, ಅವರು ಎಲ್ಲಿಯೂ ಮದುವೆ ಆಗಿದ್ದ ವಿಚಾರದ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರ ಆ ಬಗ್ಗೆ ನಿಧಿ ಮೌನ ಮುರಿದರು.

ಯೋಗರಾಜ್​ ಭಟ್​ ನಟನೆಯ ಪಂಚರಂಗಿ ಸಿನಿಮಾ ನಿಧಿ ಸುಬ್ಬಯ್ಯಗೆ ಹಿಟ್​ ತಂದುಕೊಟ್ಟಿತ್ತು. ಇದಾದ ನಂತರ ನಿಧಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಾಲಿವುಡ್​ ಅಂಗಳದಲ್ಲೂ ನಿಧಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಲವೇಶ್​ ಹೆಸರಿನ ಉದ್ಯಮಿಯನ್ನು ನಿಧಿ ಪ್ರೀತಿಸುತ್ತಿದ್ದರು. 2017ರಲ್ಲಿ ವಿರಾಜಪೇಟೆಯ ಖಾಸಗಿ ರೆಸಾರ್ಟ್​ನಲ್ಲಿ ಇವರು ಮದುವೆ ಕೂಡ ಆಗಿದ್ದರು. ನಂತರ ನಿಧಿ ಪತಿ ಜತೆ ವಿದೇಶಕ್ಕೆ ಹಾರಿದ್ದರು ಎನ್ನಲಾಗಿತ್ತು. ಈ ಅವಧಿಯಲ್ಲಿ ನಿಧಿ ಸಾಮಾಜಿಕ ಜಾಲತಾಣದಿಂದ ದೂರವೇ ಉಳಿದಿದ್ದರು. ಕೊನೆಗೆ ಪತಿಯಿಂದ ನಿಧಿ ದೂರವಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ನಿಧಿ ಉತ್ತರಿಸಿದ್ದಾರೆ.

ಇತ್ತೀಚೆಗೆ ನಿಧಿ ಲೈವ್​ ಬಂದಿದ್ದರು. ಈ ವೇಳೆ ನಿಮ್ಮ ಮದುವೆ ಮತ್ತು ನಂತರದ ವೈವಾಹಿಕ ಜೀವನದ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಹೇಳಲಿಲ್ಲ ಏಕೆ ಎನ್ನುವ ಪ್ರಶ್ನೆ ಬಂತು. ಆಗ ನಿಧಿ ಎಲ್ಲದಕ್ಕೂ ಉತ್ತರಿಸಿದರು. ‘ಇದಕ್ಕೆ ಹೇಗೆ ಉತ್ತರ ನೀಡಲಿ. ನಿಜ ಜೀವನದಲ್ಲಿ ಏನಾದರೂ ಕೆಟ್ಟದ್ದು ಆಗಿದೆ ಎಂದರೆ ಅದರ ಬಗ್ಗೆ ಹೇಳಿಕೊಂಡು ಸಹಾನುಭೂತಿ ಪಡೆಯಬೇಕು ಎಂಬ ಉದ್ದೇಶ ನನ್ನದಲ್ಲ’ ಎಂದು ಅವರು ಮಾತು ಆರಂಭಿಸಿದರು.

‘ನಾನು ಮದುವೆ ಆಗಿದ್ದೆ. ಆದರೆ, 10 ತಿಂಗಳು ಮಾತ್ರ ಸಂಸಾರ ಮಾಡಿದೆವು. ಅದಕ್ಕಿಂತಲೂ ಮುಂದೆ ನಮ್ಮ ದಾಂಪತ್ಯ ಜೀವನ ನಡೆದಿಲ್ಲ. ಅಮ್ಮನ ಬಳಿಯೂ ನಾನು ಈ ವಿಚಾರ ಚರ್ಚೆ ಮಾಡಲ್ಲ. ಅದನ್ನು ಅಲ್ಲಿಗೆ ಬಿಟ್ಟು ಜೀವನದ ಜೊತೆ ಮುಂದೆ ಸಾಗೋಣ ಅನ್ನೋದು ನನ್ನ ಪಾಲಿಸಿ. ಅದಕ್ಕೆ ನಾನು ಅದರ ಬಗ್ಗೆ ಅಲ್ಲಿ ಮಾತನಾಡಲಿಲ್ಲ’ ಎಂದು ನಿಧಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

Published On - 6:14 pm, Sun, 16 May 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us