AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ

ಕಳೆದ ವಾರ ಟಾಸ್ಕ್​ ನಡೆಯುವಾಗ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ನಡುವೆ ಜಗಳ ಏರ್ಪಟ್ಟಿತ್ತು. ಅರವಿಂದ್ ಹಾಗೂ ಮಂಜು ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದರು. ಈ ವೇಳೆ ನಿಧಿಗೆ ‘ನೀವು ಸ್ವಲ್ಪ ಮುಚ್ಕೊಳಿ’ ಎಂಬ ಶಬ್ದ ಪ್ರಯೋಗವನ್ನು ಅರವಿಂದ್ ಮಾಡಿದ್ದರು.

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ
ಅರವಿಂದ್​ ಕೆಪಿ- ನಿಧಿ
TV9 Web
| Edited By: |

Updated on: Jul 05, 2021 | 3:31 PM

Share

‘ಬಿಗ್​ ಬಾಸ್ ಕನ್ನಡ ಸೀಸನ್​ 8’ರ ಎರಡನೇ ಇನ್ನಿಂಗ್ಸ್​ನಲ್ಲಿ ಮೊದಲ ಸ್ಪರ್ಧಿಯಾಗಿ ನಿಧಿ ಸುಬ್ಬಯ್ಯ ಎಲಿಮಿನೇಟ್​ ಆಗಿದ್ದಾರೆ. ಮನೆಯಿಂದ ಹೊರ ಹೋಗುತ್ತಿರುವ ವಿಚಾರ ಅವರಿಗೇ ಅಚ್ಚರಿ ಮೂಡಿಸಿದೆ. ಆದರೆ ಎಲ್ಲಿಯೂ ಕಣ್ಣೀರು ಹಾಕದೆ ಅವರು ಬಿಗ್​ ಬಾಸ್​ ಮನೆಯಿಂದ ಹೊರಗೆ ಬಂದರು. ಇನ್ನು, ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗುವುದಕ್ಕೂ ಮೊದಲು ಅರವಿಂದ್ ಕೆ.ಪಿ. ವಿರುದ್ಧ ನಿಧಿ ಸೇಡು ತೀರಿಸಿಕೊಂಡಿದ್ದಾರೆ.

ಕಳೆದ ವಾರ ಟಾಸ್ಕ್​ ನಡೆಯುವಾಗ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ನಡುವೆ ಜಗಳ ಏರ್ಪಟ್ಟಿತ್ತು. ಅರವಿಂದ್ ಹಾಗೂ ಮಂಜು ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದರು. ಈ ವೇಳೆ ನಿಧಿಗೆ ‘ನೀವು ಸ್ವಲ್ಪ ಮುಚ್ಕೊಳಿ’ ಎಂಬ ಶಬ್ದ ಪ್ರಯೋಗವನ್ನು ಅರವಿಂದ್ ಮಾಡಿದ್ದರು. ಇದು ನಿಧಿ ಕೋಪಕ್ಕೆ ಕಾರಣವಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಿಧಿ ಹಾಗೂ ಅರವಿಂದ್ ನಡುವೆ ದೊಡ್ಡ ಮಟ್ಟದಲ್ಲಿ ಜಗಳ ಏರ್ಪಟ್ಟಿತ್ತು. ‘ನೀವು ಏನು ಎಂಬುದು ನಂಗೆ ಗೊತ್ತು ಎಂದು ಪದೇಪದೇ ಹೇಳಿದ್ದೀರಿ. ಈ ಆಟದಿಂದ ನಾನು ಏನು ಎಂಬುದು ಗೊತ್ತಾಗುತ್ತದೆಯೇ? ನಾನು ಎಲ್ಲ ಬೈಗುಳಗಳನ್ನು ತೆಗೆದುಕೊಳ್ಳೋಕೆ ರೆಡಿ ಇಲ್ಲ. ನೀವು ಸಾರಿ ಎಂದು ಕೇಳುತ್ತೀರಿ. ಮತ್ತೆ ನನಗೆ ಕ್ಯಾರೆಕ್ಟರ್​ ಇಲ್ಲ ಎಂದು ಹೇಳುತ್ತೀರಿ. ನನಗೆ ಕ್ಯಾರೆಕ್ಟರ್​ ಇದೆ ಅರವಿಂದ್. ನಿಮಗೆ  ಕ್ರೀಡಾಸ್ಫೂರ್ತಿ ​ ಇಲ್ಲ. ಸೋಲನ್ನು ಒಪ್ಪಿಕೊಳ್ಳೋಕೆ ನಿಮಗೆ ಆಗಲ್ಲ’ ಎಂದು ನಿಧಿ ಗರಂ ಆಗಿದ್ದರು.

ಈ ಜಗಳದ ವೇಳೆ ಅರವಿಂದ್ ಮಾಡಿದ ಸಾಧನೆಯನ್ನು ನಿಧಿ ಹೀಯಾಳಿಸಿದ್ದರು. ಇದಕ್ಕಾಗಿಯೇ ನಿಧಿ ಬಿಗ್​ ಬಾಸ್​ನಿಂದ ಹೊರ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ ಎನ್ನುವ ಮಾತು ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಬಿಗ್​ ಬಾಸ್​ನಿಂದ ಹೊರ ಹೋಗುವುದಕ್ಕೂ ಮೊದಲು ನಿಧಿ ಅವರಿಗೆ ಒಬ್ಬರನ್ನು ಎಲಿಮಿನೇಷನ್​ಗೆ ನಾಮಿನೇಟ್ ಮಾಡುವ ಅವಕಾಶ ನೀಡಲಾಯಿತು. ಈ ವೇಳೆ ಅರವಿಂದ್ ಹೆಸರನ್ನು ನಿಧಿ ಹೇಳುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ

ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!