ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ

| Updated By: ರಾಜೇಶ್ ದುಗ್ಗುಮನೆ

Updated on: Jul 05, 2021 | 3:31 PM

ಕಳೆದ ವಾರ ಟಾಸ್ಕ್​ ನಡೆಯುವಾಗ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ನಡುವೆ ಜಗಳ ಏರ್ಪಟ್ಟಿತ್ತು. ಅರವಿಂದ್ ಹಾಗೂ ಮಂಜು ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದರು. ಈ ವೇಳೆ ನಿಧಿಗೆ ‘ನೀವು ಸ್ವಲ್ಪ ಮುಚ್ಕೊಳಿ’ ಎಂಬ ಶಬ್ದ ಪ್ರಯೋಗವನ್ನು ಅರವಿಂದ್ ಮಾಡಿದ್ದರು.

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅರವಿಂದ್​ ವಿರುದ್ಧ ಸೇಡು ತೀರಿಸಿಕೊಂಡ ನಿಧಿ ಸುಬ್ಬಯ
ಅರವಿಂದ್​ ಕೆಪಿ- ನಿಧಿ
Follow us on

‘ಬಿಗ್​ ಬಾಸ್ ಕನ್ನಡ ಸೀಸನ್​ 8’ರ ಎರಡನೇ ಇನ್ನಿಂಗ್ಸ್​ನಲ್ಲಿ ಮೊದಲ ಸ್ಪರ್ಧಿಯಾಗಿ ನಿಧಿ ಸುಬ್ಬಯ್ಯ ಎಲಿಮಿನೇಟ್​ ಆಗಿದ್ದಾರೆ. ಮನೆಯಿಂದ ಹೊರ ಹೋಗುತ್ತಿರುವ ವಿಚಾರ ಅವರಿಗೇ ಅಚ್ಚರಿ ಮೂಡಿಸಿದೆ. ಆದರೆ ಎಲ್ಲಿಯೂ ಕಣ್ಣೀರು ಹಾಕದೆ ಅವರು ಬಿಗ್​ ಬಾಸ್​ ಮನೆಯಿಂದ ಹೊರಗೆ ಬಂದರು. ಇನ್ನು, ಬಿಗ್​ ಬಾಸ್​ ಮನೆಯಿಂದ ಎಲಿಮಿನೇಟ್​ ಆಗುವುದಕ್ಕೂ ಮೊದಲು ಅರವಿಂದ್ ಕೆ.ಪಿ. ವಿರುದ್ಧ ನಿಧಿ ಸೇಡು ತೀರಿಸಿಕೊಂಡಿದ್ದಾರೆ.

ಕಳೆದ ವಾರ ಟಾಸ್ಕ್​ ನಡೆಯುವಾಗ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ನಡುವೆ ಜಗಳ ಏರ್ಪಟ್ಟಿತ್ತು. ಅರವಿಂದ್ ಹಾಗೂ ಮಂಜು ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದರು. ಈ ವೇಳೆ ನಿಧಿಗೆ ‘ನೀವು ಸ್ವಲ್ಪ ಮುಚ್ಕೊಳಿ’ ಎಂಬ ಶಬ್ದ ಪ್ರಯೋಗವನ್ನು ಅರವಿಂದ್ ಮಾಡಿದ್ದರು. ಇದು ನಿಧಿ ಕೋಪಕ್ಕೆ ಕಾರಣವಾಗಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಿಧಿ ಹಾಗೂ ಅರವಿಂದ್ ನಡುವೆ ದೊಡ್ಡ ಮಟ್ಟದಲ್ಲಿ ಜಗಳ ಏರ್ಪಟ್ಟಿತ್ತು. ‘ನೀವು ಏನು ಎಂಬುದು ನಂಗೆ ಗೊತ್ತು ಎಂದು ಪದೇಪದೇ ಹೇಳಿದ್ದೀರಿ. ಈ ಆಟದಿಂದ ನಾನು ಏನು ಎಂಬುದು ಗೊತ್ತಾಗುತ್ತದೆಯೇ? ನಾನು ಎಲ್ಲ ಬೈಗುಳಗಳನ್ನು ತೆಗೆದುಕೊಳ್ಳೋಕೆ ರೆಡಿ ಇಲ್ಲ. ನೀವು ಸಾರಿ ಎಂದು ಕೇಳುತ್ತೀರಿ. ಮತ್ತೆ ನನಗೆ ಕ್ಯಾರೆಕ್ಟರ್​ ಇಲ್ಲ ಎಂದು ಹೇಳುತ್ತೀರಿ. ನನಗೆ ಕ್ಯಾರೆಕ್ಟರ್​ ಇದೆ ಅರವಿಂದ್. ನಿಮಗೆ  ಕ್ರೀಡಾಸ್ಫೂರ್ತಿ ​ ಇಲ್ಲ. ಸೋಲನ್ನು ಒಪ್ಪಿಕೊಳ್ಳೋಕೆ ನಿಮಗೆ ಆಗಲ್ಲ’ ಎಂದು ನಿಧಿ ಗರಂ ಆಗಿದ್ದರು.

ಈ ಜಗಳದ ವೇಳೆ ಅರವಿಂದ್ ಮಾಡಿದ ಸಾಧನೆಯನ್ನು ನಿಧಿ ಹೀಯಾಳಿಸಿದ್ದರು. ಇದಕ್ಕಾಗಿಯೇ ನಿಧಿ ಬಿಗ್​ ಬಾಸ್​ನಿಂದ ಹೊರ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ ಎನ್ನುವ ಮಾತು ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಬಿಗ್​ ಬಾಸ್​ನಿಂದ ಹೊರ ಹೋಗುವುದಕ್ಕೂ ಮೊದಲು ನಿಧಿ ಅವರಿಗೆ ಒಬ್ಬರನ್ನು ಎಲಿಮಿನೇಷನ್​ಗೆ ನಾಮಿನೇಟ್ ಮಾಡುವ ಅವಕಾಶ ನೀಡಲಾಯಿತು. ಈ ವೇಳೆ ಅರವಿಂದ್ ಹೆಸರನ್ನು ನಿಧಿ ಹೇಳುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಮಂಜು ವಿನ್ನರ್​, ವೈಷ್ಣವಿ ರನ್ನರ್​ ಅಪ್​’; ಬಿಗ್​ ಬಾಸ್​ ಸ್ಪರ್ಧಿ ನುಡಿದ್ರು ಭವಿಷ್ಯ

ಬಿಗ್​ ಬಾಸ್​ ಮನೆಯಲ್ಲಿ ಮಾಡಿದ ಆ ಒಂದು ತಪ್ಪಿಗೆ ಭಾರೀ ದಂಡ ತೆರಲಿದ್ದಾರಾ ಅರವಿಂದ್​?