AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು ಗೌಡಗೆ ಎಫ್​ ಶಬ್ದದ ಮೂಲಕ ಬೈದ ನಿಧಿ ಸುಬ್ಬಯ್ಯ!

ಆಗ ರಘು ಮಧ್ಯದಲ್ಲಿ ಮಾತನಾಡೋಕೆ ಪ್ರಯತ್ನಿಸಿದ್ದಾರೆ. ಇದು ನಿಧಿಗೆ ಇಷ್ಟವಾಗಿಲ್ಲ. ಎಕ್ಸ್​ಕ್ಯೂಸ್​ಮಿ, ನಾನು ಹೇಳಿ ಮುಗಿಸಿಕೊಳ್ಳುತ್ತೇನೆ ಎಂದು ದೊಡ್ಡ ಧ್ವನಿಯಲ್ಲೇ ನಿಧಿ ಹೇಳಿದರು.

ರಘು ಗೌಡಗೆ ಎಫ್​ ಶಬ್ದದ ಮೂಲಕ ಬೈದ ನಿಧಿ ಸುಬ್ಬಯ್ಯ!
ರಘು ಗೌಡ-ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on:Apr 03, 2021 | 6:41 PM

Share

 ಬಿಗ್​ ಬಾಸ್​ ಮನೆಯಲ್ಲಿರುವ ನಿಧಿ ಸುಬ್ಬಯ್ಯ ಅವರು ರಘು ಗೌಡ ಜತೆ ಉತ್ತಮ ಒಡನಾಟ ಹೊಂದಿದ್ದಾರೆ. ನಿಧಿ ಎಲ್ಲರ ಜತೆಯೂ ಓಪನ್​ಅಪ್​ ಆಗಿಲ್ಲ. ಆದರೆ, ರಘು ಗೌಡ ಎಂದರೆ ಅವರಿಗೆ ಹೆಚ್ಚು ಇಷ್ಟ. ಇದೇ ಕಾರಣಕ್ಕೆ ಏನೇ ಕಷ್ಟ ಸುಖ ಇದ್ದರೂ ರಘು ಬಳಿ ಹಂಚಿಕೊಳ್ಳುತ್ತಾರೆ. ಆದರೆ, ಈಗ ಇಬ್ಬರ ನಡುವೆ ವೈಮನಸ್ಸು ಮೂಡುವ ಲಕ್ಷಣ ಗೋಚರವಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​, ಚಕ್ರವರ್ತಿ ಚಂದ್ರಚೂಡ್, ನಿಧಿ ಸುಬ್ಬಯ್ಯ ಹಾಗೂ ಮಂಜು ಕೂತು ಮಾತನಾಡುತ್ತಿದ್ದರು. ಈ ವೇಳೆ ನಿಧಿ, ಟಾಸ್ಕ್​ ಚೆನ್ನಾಗಿ ಮಾಡಿಲ್ಲ ಎಂದರೆ ಎಲ್ಲರೂ ನಮಗೆ ಕಳಪೆ ಎನ್ನುವ ಪಟ್ಟ ಕಟ್ಟುತ್ತಾರೆ. ಉಳಿದ ಯಾವ ವಿಚಾರವನ್ನೂ ಗಮನಿಸುವುದೇ ಇಲ್ಲ ಎಂದು ಬೇಸರ ಹೊರ ಹಾಕಿದರು.

ಆಗ ರಘು ಮಧ್ಯದಲ್ಲಿ ಮಾತನಾಡೋಕೆ ಪ್ರಯತ್ನಿಸಿದ್ದಾರೆ. ಇದು ನಿಧಿಗೆ ಇಷ್ಟವಾಗಿಲ್ಲ. ಎಕ್ಸ್​ಕ್ಯೂಸ್​ಮಿ, ನಾನು ಹೇಳಿ ಮುಗಿಸಿಕೊಳ್ಳುತ್ತೇನೆ ಎಂದು ದೊಡ್ಡ ಧ್ವನಿಯಲ್ಲೇ ನಿಧಿ ಹೇಳಿದರು. ಇದಕ್ಕೆ ರಘು ಸಿಟ್ಟಾಗಿದ್ದಾರೆ. ನೀವು ಮೆಲ್ಲಗೆ ಹೇಳಿದ್ರೆ ನಂಗೆ ಅರ್ಥವಾಗುತ್ತೆ. ದೊಡ್ಡ ಧ್ವನಿ ಮಾಡಿ ಹೇಳುವ ಅಗತ್ಯವೇನಿತ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಆಗ ನಿಧಿ, ನಾನು ನಿಮಗೆ ಬಯ್ಯುತ್ತಿಲ್ಲ ಅಥವಾ ನಿಮ್ಮನ್ನು ಟೀಕೆ ಮಾಡುತ್ತಿಲ್ಲ. ಇದ್ದ ವಿಚಾರವನ್ನು ಹೇಳುತ್ತಿದ್ದೇನೆ ಎಂದರು. ಆಗ ರಘು, ಹೌದು ಎಂದು ಕೊಂಕಾಗಿ ಉತ್ತರಿಸಿದರು. ಆಗ ನಿಧಿ What the F*** Dude ಎಂದು ಪ್ರಶ್ನೆ ಮಾಡಿದ್ದಾರೆ.

ನಂತರ ಮಾತಿಗೆ ಮಾತು ಬೆಳೆದಿದೆ. ನಿಧಿ ಕೊನೆಗೆ ಬೇಸರ ಮಾಡಿಕೊಂಡು ಅತ್ತೇ ಬಿಟ್ಟಿದ್ದಾರೆ. ಆಗ ನಿಧಿ ಅವರನ್ನು ರಘು ಸಮಾಧಾನ ಮಾಡೋಕೆ ಹೋಗಿದ್ದಾರೆ. ಕೊನೆಗೂ ನಿಧಿ ಅಳುತ್ತಲೇ ತಾವು ಏನು ಹೇಳಬೇಕು ಎಂದುಕೊಂಡಿದ್ದರೋ ಅದನ್ನು ಹೇಳಿ ಮುಗಿಸಿದ್ದಾರೆ.

ಇದನ್ನೂ ಓದಿ: ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ

Published On - 6:37 pm, Sat, 3 April 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು