AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಮನೆಮಗಳ ಸಂಸಾರದಲ್ಲಿ ಬಿರುಗಾಳಿ; ಡಿವೋರ್ಸ್​ ಸುದ್ದಿಗೆ ಸಿಕ್ತು ಬಲವಾದ ಸಾಕ್ಷಿ

Niharika Konidela: ನಿಹಾರಿಕಾ ಕೊನಿಡೆಲಾ ಅವರು ಕೊನೆಗೂ ಗಟ್ಟಿ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿದೆ. ಈ ಬಗ್ಗೆ ಅವರು ಅಧಿಕೃತವಾಗಿ ಘೋಷಿಸುವುದೊಂದೇ ಬಾಕಿ ಇದೆ.

ಚಿರಂಜೀವಿ ಮನೆಮಗಳ ಸಂಸಾರದಲ್ಲಿ ಬಿರುಗಾಳಿ; ಡಿವೋರ್ಸ್​ ಸುದ್ದಿಗೆ ಸಿಕ್ತು ಬಲವಾದ ಸಾಕ್ಷಿ
ನಿಹಾರಿಕಾ ಕೊನಿಡೆಲ್ಲಾ
ಮದನ್​ ಕುಮಾರ್​
|

Updated on:Apr 11, 2023 | 10:49 AM

Share

​ಸೆಲೆಬ್ರಿಟಿಗಳ ಬದುಕಿನಲ್ಲಿ ವಿಚ್ಛೇದನ ತೀರಾ ಕಾಮನ್​ ಎಂಬಂತಾಗಿದೆ. ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ (Niharika Konidela)  ಕೂಡ ಡಿವೋರ್ಸ್​ ಪಡೆಯುತ್ತಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಸಾಕ್ಷಿ ನೀಡುವಂತಹ ಘಟನೆಗಳು ಸಹ ನಡೆಯುತ್ತಿವೆ. ‘ಮೆಗಾ ಸ್ಟಾರ್​’ ಚಿರಂಜೀವಿ ಸಹೋದರ ನಾಗೇಂದ್ರ ಬಾಬು (Nagendra Babu) ಅವರ ಪುತ್ರಿಯಾದ ನಿಹಾರಿಕಾ ಅವರು 2020ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಈ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಆದರೂ ಸಹ ವಿಚ್ಛೇದನದ (Divorce) ವಾಸನೆ ಬರುತ್ತಿದೆ. ಅದಕ್ಕೆ ಕಾರಣ ಆಗಿರುವುದು ನಿಹಾರಿಕಾ ಕೊನಿಡೆಲಾ ಅವರ ಸೋಶಿಯಲ್​ ಮೀಡಿಯಾ ಚಟುವಟಿಕೆಗಳು. ಪತಿ ಜೊನ್ನಲಗಡ್ಡ ವೆಂಕಟ ಚೈತನ್ಯ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನಿಹಾರಿಕಾ ಅನ್​ಫಾಲೋ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಗಂಡನಿಗೆ ಸಂಬಂಧಿಸಿದ ಎಲ್ಲ ಫೋಟೋಗಳನ್ನೂ ಡಿಲೀಟ್​ ಮಾಡಿದ್ದಾರೆ. ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ನಿಹಾರಿಕಾ ಕೊನಿಡೆಲಾ ಮತ್ತು ವೆಂಕಟ ಚೈತನ್ಯ ನಡುವೆ ವೈಮನಸ್ಸು ಉಂಟಾಗಿದೆ ಎಂಬುದಕ್ಕೆ ಒಂದಷ್ಟು ದಿನಗಳ ಹಿಂದೆಯೇ ಸಾಕ್ಷಿ ಸಿಕ್ಕಿತ್ತು. ವೆಂಕಟ ಚೈತನ್ಯ ಅವರು ನಿಹಾರಿಕಾರನ್ನು ಅನ್​ಫಾಲೋ ಮಾಡಿದ್ದರು. ಜೊತೆಗೆ ಮದುಗೆ ಹಾಗೂ ಎಂಗೇಜ್​ಮೆಂಟ್​ ಫೋಟೋಗಳನ್ನು ಡಿಲೀಟ್​ ಮಾಡಿದ್ದರು. ಆದರೂ ಕೂಡ ನಿಹಾರಿಕಾ ಅವರು ಸೈಲೆಂಟ್​ ಆಗಿದ್ದರು. ಆದರೆ ಈಗ ಅವರು ಕೂಡ ಗಂಡನನ್ನು ಅನ್​ಫಾಲೋ ಮಾಡಿ, ಫೋಟೋಸ್​ ತೆಗೆದುಹಾಕಿರುವುದು ಡಿವೋರ್ಸ್​ ಅನುಮಾನಕ್ಕೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಮೂರನೇ ಪತ್ನಿಗೆ ವಿಚ್ಛೇದನ ಕೊಡದೆ ನಾಲ್ಕನೇ ಮದುವೆ ಆದ ನರೇಶ್​; ಕಾನೂನು ತೊಡಕುಗಳೇನು?

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಮೆಗಾ ಸ್ಟಾರ್​ ಚಿರಂಜೀವಿ ಅವರದ್ದು ಪ್ರತಿಷ್ಠಿತ ಕುಟುಂಬ. ಈ ಫ್ಯಾಮಿಲಿಯ ಕೆಲವು ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾತುಕಥೆ ಕೂಡ ನಡೆಯುತ್ತಿದ್ದು, ನಿಹಾರಿಕಾ ಹಾಗೂ ವೆಂಕಟ ಚೈತನ್ಯ ಮತ್ತೆ ಒಂದಾಗುವ ಸೂಚನೆ ಇದೆ ಎನ್ನಲಾಗಿತ್ತು. ಆದರೆ ಸಂಧಾನ ಸಫಲ ಆದಂತೆ ಕಾಣುತ್ತಿಲ್ಲ. ನಿಹಾರಿಕಾ ಕೊನಿಡೆಲಾ ಅವರು ಕೊನೆಗೂ ಗಟ್ಟಿ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿದೆ. ಈ ಬಗ್ಗೆ ಅವರು ಅಧಿಕೃತವಾಗಿ ಘೋಷಿಸುವುದೊಂದೇ ಬಾಕಿ ಇದೆ.

ಇದನ್ನೂ ಓದಿ: Niharika Konidela: ‘ನಿಹಾರಿಕಾಗೂ ಡ್ರಗ್ಸ್ ಪ್ರಕರಣಕ್ಕೂ ಸಂಬಂಧವಿಲ್ಲ’; ಚಿರು ಸಹೋದರ ನಾಗಬಾಬು ಹೇಳಿಕೆ

ತೆಲುಗು ಚಿತ್ರರಂಗದಲ್ಲಿ ನಟಿಯಾಗಿ, ನಿರ್ಮಾಪಕಿಯಾಗಿ ನಿಹಾರಿಕಾ ಕೊನಿಡೆಲಾ ಅವರು ತೊಡಗಿಕೊಂಡಿದ್ದಾರೆ. ‘ಒಕ ಮನಸು’, ‘ಸೂರ್ಯಕಾಂತಂ’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ. 2015ರಲ್ಲಿ ಅವರು ‘ಪಿಂಕ್​ ಎಲಿಫೆಂಟ್​ ಪಿಕ್ಚರ್ಸ್​’ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದರು. ಇದರ ಹೊಸ ಕಚೇರಿಯನ್ನು ಅವರು ಇತ್ತೀಚೆಗೆ ತೆರೆದಿದ್ದಾರೆ. ನಟಿಯಾಗಿ ಅವರು ಕಮ್​ಬ್ಯಾಕ್​ ಮಾಡುತ್ತಾರೆ ಎಂದು ಕೂಡ ನಿರೀಕ್ಷಿಸಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:49 am, Tue, 11 April 23

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ