ಚಿರಂಜೀವಿ ಮನೆಮಗಳ ಸಂಸಾರದಲ್ಲಿ ಬಿರುಗಾಳಿ; ಡಿವೋರ್ಸ್​ ಸುದ್ದಿಗೆ ಸಿಕ್ತು ಬಲವಾದ ಸಾಕ್ಷಿ

Niharika Konidela: ನಿಹಾರಿಕಾ ಕೊನಿಡೆಲಾ ಅವರು ಕೊನೆಗೂ ಗಟ್ಟಿ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿದೆ. ಈ ಬಗ್ಗೆ ಅವರು ಅಧಿಕೃತವಾಗಿ ಘೋಷಿಸುವುದೊಂದೇ ಬಾಕಿ ಇದೆ.

ಚಿರಂಜೀವಿ ಮನೆಮಗಳ ಸಂಸಾರದಲ್ಲಿ ಬಿರುಗಾಳಿ; ಡಿವೋರ್ಸ್​ ಸುದ್ದಿಗೆ ಸಿಕ್ತು ಬಲವಾದ ಸಾಕ್ಷಿ
ನಿಹಾರಿಕಾ ಕೊನಿಡೆಲ್ಲಾ
Follow us
|

Updated on:Apr 11, 2023 | 10:49 AM

​ಸೆಲೆಬ್ರಿಟಿಗಳ ಬದುಕಿನಲ್ಲಿ ವಿಚ್ಛೇದನ ತೀರಾ ಕಾಮನ್​ ಎಂಬಂತಾಗಿದೆ. ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ (Niharika Konidela)  ಕೂಡ ಡಿವೋರ್ಸ್​ ಪಡೆಯುತ್ತಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಸಾಕ್ಷಿ ನೀಡುವಂತಹ ಘಟನೆಗಳು ಸಹ ನಡೆಯುತ್ತಿವೆ. ‘ಮೆಗಾ ಸ್ಟಾರ್​’ ಚಿರಂಜೀವಿ ಸಹೋದರ ನಾಗೇಂದ್ರ ಬಾಬು (Nagendra Babu) ಅವರ ಪುತ್ರಿಯಾದ ನಿಹಾರಿಕಾ ಅವರು 2020ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಈ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಆದರೂ ಸಹ ವಿಚ್ಛೇದನದ (Divorce) ವಾಸನೆ ಬರುತ್ತಿದೆ. ಅದಕ್ಕೆ ಕಾರಣ ಆಗಿರುವುದು ನಿಹಾರಿಕಾ ಕೊನಿಡೆಲಾ ಅವರ ಸೋಶಿಯಲ್​ ಮೀಡಿಯಾ ಚಟುವಟಿಕೆಗಳು. ಪತಿ ಜೊನ್ನಲಗಡ್ಡ ವೆಂಕಟ ಚೈತನ್ಯ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನಿಹಾರಿಕಾ ಅನ್​ಫಾಲೋ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಗಂಡನಿಗೆ ಸಂಬಂಧಿಸಿದ ಎಲ್ಲ ಫೋಟೋಗಳನ್ನೂ ಡಿಲೀಟ್​ ಮಾಡಿದ್ದಾರೆ. ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ನಿಹಾರಿಕಾ ಕೊನಿಡೆಲಾ ಮತ್ತು ವೆಂಕಟ ಚೈತನ್ಯ ನಡುವೆ ವೈಮನಸ್ಸು ಉಂಟಾಗಿದೆ ಎಂಬುದಕ್ಕೆ ಒಂದಷ್ಟು ದಿನಗಳ ಹಿಂದೆಯೇ ಸಾಕ್ಷಿ ಸಿಕ್ಕಿತ್ತು. ವೆಂಕಟ ಚೈತನ್ಯ ಅವರು ನಿಹಾರಿಕಾರನ್ನು ಅನ್​ಫಾಲೋ ಮಾಡಿದ್ದರು. ಜೊತೆಗೆ ಮದುಗೆ ಹಾಗೂ ಎಂಗೇಜ್​ಮೆಂಟ್​ ಫೋಟೋಗಳನ್ನು ಡಿಲೀಟ್​ ಮಾಡಿದ್ದರು. ಆದರೂ ಕೂಡ ನಿಹಾರಿಕಾ ಅವರು ಸೈಲೆಂಟ್​ ಆಗಿದ್ದರು. ಆದರೆ ಈಗ ಅವರು ಕೂಡ ಗಂಡನನ್ನು ಅನ್​ಫಾಲೋ ಮಾಡಿ, ಫೋಟೋಸ್​ ತೆಗೆದುಹಾಕಿರುವುದು ಡಿವೋರ್ಸ್​ ಅನುಮಾನಕ್ಕೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಮೂರನೇ ಪತ್ನಿಗೆ ವಿಚ್ಛೇದನ ಕೊಡದೆ ನಾಲ್ಕನೇ ಮದುವೆ ಆದ ನರೇಶ್​; ಕಾನೂನು ತೊಡಕುಗಳೇನು?

ಇದನ್ನೂ ಓದಿ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ವಿಚ್ಛೇದನದ ಬಳಿಕ ಅಕ್ಕಿನೇನಿ ಕುಟುಂಬಕ್ಕೆ ಸಮಂತಾ ಹಿಂದಿರುಗಿಸಿದರು ಒಂದು ಪ್ರಮುಖ ವಸ್ತು; ಏನದು?
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ಮೆಗಾ ಸ್ಟಾರ್​ ಚಿರಂಜೀವಿ ಅವರದ್ದು ಪ್ರತಿಷ್ಠಿತ ಕುಟುಂಬ. ಈ ಫ್ಯಾಮಿಲಿಯ ಕೆಲವು ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾತುಕಥೆ ಕೂಡ ನಡೆಯುತ್ತಿದ್ದು, ನಿಹಾರಿಕಾ ಹಾಗೂ ವೆಂಕಟ ಚೈತನ್ಯ ಮತ್ತೆ ಒಂದಾಗುವ ಸೂಚನೆ ಇದೆ ಎನ್ನಲಾಗಿತ್ತು. ಆದರೆ ಸಂಧಾನ ಸಫಲ ಆದಂತೆ ಕಾಣುತ್ತಿಲ್ಲ. ನಿಹಾರಿಕಾ ಕೊನಿಡೆಲಾ ಅವರು ಕೊನೆಗೂ ಗಟ್ಟಿ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿದೆ. ಈ ಬಗ್ಗೆ ಅವರು ಅಧಿಕೃತವಾಗಿ ಘೋಷಿಸುವುದೊಂದೇ ಬಾಕಿ ಇದೆ.

ಇದನ್ನೂ ಓದಿ: Niharika Konidela: ‘ನಿಹಾರಿಕಾಗೂ ಡ್ರಗ್ಸ್ ಪ್ರಕರಣಕ್ಕೂ ಸಂಬಂಧವಿಲ್ಲ’; ಚಿರು ಸಹೋದರ ನಾಗಬಾಬು ಹೇಳಿಕೆ

ತೆಲುಗು ಚಿತ್ರರಂಗದಲ್ಲಿ ನಟಿಯಾಗಿ, ನಿರ್ಮಾಪಕಿಯಾಗಿ ನಿಹಾರಿಕಾ ಕೊನಿಡೆಲಾ ಅವರು ತೊಡಗಿಕೊಂಡಿದ್ದಾರೆ. ‘ಒಕ ಮನಸು’, ‘ಸೂರ್ಯಕಾಂತಂ’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ. 2015ರಲ್ಲಿ ಅವರು ‘ಪಿಂಕ್​ ಎಲಿಫೆಂಟ್​ ಪಿಕ್ಚರ್ಸ್​’ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದರು. ಇದರ ಹೊಸ ಕಚೇರಿಯನ್ನು ಅವರು ಇತ್ತೀಚೆಗೆ ತೆರೆದಿದ್ದಾರೆ. ನಟಿಯಾಗಿ ಅವರು ಕಮ್​ಬ್ಯಾಕ್​ ಮಾಡುತ್ತಾರೆ ಎಂದು ಕೂಡ ನಿರೀಕ್ಷಿಸಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:49 am, Tue, 11 April 23