AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rider Movie: ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್

Nikhil Kumaraswamy Rider Song Release: ನಿಖಿಲ್ ಕುಮಾರಸ್ವಾಮಿ ನಟನೆಯ ವಿಜಯ್ ಕುಮಾರ್ ಕೊಂಡ ನಿರ್ದೇಶನದ ಬಹುನಿರೀಕ್ಷೆಯ ‘ರೈಡರ್’ ಸಿನಿಮಾದ ‘ಡವ್ವ ಡವ್ವ’ ಹಾಡು ಇಂದು ರಿಲೀಸ್ ಆಗಿದೆ.

Rider Movie: ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್
ರೈಡರ್ ಸಿನಿಮಾ
TV9 Web
| Edited By: |

Updated on: Oct 16, 2021 | 7:33 PM

Share

ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನಾಯಕನಾಗಿ ಕಾಣಿಸಿಕೊಂಡಿರುವ ರೈಡರ್ ಸಿನಿಮಾದ (Rider Movie) ಮೊದಲ ಹಾಡು ಇದೀಗ ರಿಲೀಸ್ ಆಗಿದೆ. ಈ ವಿಡಿಯೋ ಸಾಂಗ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸ್ಟೈಲಿಶ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಯುವ ನಟಿ ಕಾಶ್ಮೀರಿ ಪರ್ದೇಸಿ ಅವರ ಮುದ್ದಾದ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಿಖಿಲ್ ಕುಮಾರಸ್ವಾಮಿ ನಟನೆಯ ವಿಜಯ್ ಕುಮಾರ್ ಕೊಂಡ ನಿರ್ದೇಶನದ ಬಹುನಿರೀಕ್ಷೆಯ ‘ರೈಡರ್’ ಸಿನಿಮಾದ ‘ಡವ್ವ ಡವ್ವ’ ಹಾಡು ಇಂದು ರಿಲೀಸ್ ಆಗಿದೆ. ಲಹರಿ ಮ್ಯೂಸಿಕ್ ಹಾಗೂ ಟಿ- ಸಿರೀಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಲಹರಿ ಸಂಸ್ಥೆಯ ಯೂಟ್ಯೂಬ್ ಚಾನೆಲ್​ನಲ್ಲಿ ಈ ರೈಡರ್ ಸಿನಿಮಾದ ಹಾಡು ರಿಲೀಸ್ ಆಗಿದೆ. ರೈಡರ್ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಡವ್ವ ಡವ್ವ ಹಾಡಿಗೆ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಅರ್ಮಾನ್ ಮಲಿಕ್ ಈ ಹಾಡನ್ನು ಹಾಡಿದ್ದಾರೆ.

ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಕಾಶ್ಮೀರಿ ಪರ್ದೇಸಿ ರೈಡರ್ ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ಜೊತೆಗೆ ತೆರೆ ಹಂಚಿಕೊಂಡಿದ್ದಾರೆ. ಜೊತೆಗೆ ಇನ್ನೋರ್ವ ನಾಯಕಿಯಾಗಿ ಅನುಷಾ ರೈ ನಟಿಸಿದ್ದಾರೆ. ಮಂಜು ಪಾವಗಡ, ಗರುಡ ರಾಮ್, ಶಿವರಾಜ್ ಕೆ.ಆರ್. ಪೇಟೆ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇಂದು ನಡೆದ ರೈಡರ್ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಜೊತೆ ಸ್ಕ್ರೀನ್ ಶೇರ್ ಮಾಡಿರೋ ಅನುಭವವನ್ನು ಕಾಶ್ಮೀರಿ ಪರ್ದೇಸಿ ಹಾಗೂ ಮಂಜು ಪಾವಗಡ ಹಂಚಿಕೊಂಡಿದ್ದಾರೆ.

ಬಾಸ್ಕೆಟ್ ಬಾಲ್ ಪ್ಲೇಯರ್ ಆಗಿ ಕಮಾಲ್ ಮಾಡಿರೋ ನಿಖಿಲ್‌ ಕುಮಾರಸ್ವಾಮಿ ಅವರ ರೈಡರ್ ಸಿನಿಮಾ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಅದರ ಜೊತೆಗೆ ಡವ್ವಾ ಡವ್ವಾ ಡವ್ವ ಹಾಡು ರಿಲೀಸ್ ಆಗಿದೆ. ರೈಡರ್ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ. ಈ ಸಿನಿಮಾ ಟೀಸರ್ ಸಾಕಷ್ಟು ಸದ್ದು ಮಾಡಿದ್ದು. ಅಭಿಮಾನಿಗಳು ಈ ಸಿನಿಮಾದ ಟೀಸರ್‌ ನೋಡಿ ʼರೈಡರ್’ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರಸ್ವಾಮಿ ಬೆನ್ನಲ್ಲೇ ರೈಡರ್​ ಚಿತ್ರತಂಡಕ್ಕೂ ಕೊರೊನಾ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು