AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್ ಚಂದ್ರ ಭೋಸ್ ಸಾವಿನ ನಿಗೂಢತೆ ಅರಸಿ ಹೊರಟ ಸ್ಪೈ: ಬಲ್ಲಾಳದೇವನ ಸರ್ಪ್ರೈಸ್ ಎಂಟ್ರಿ

Spy Trailer: ಸುಭಾಷ್ ಚಂದ್ರ ಭೋಸ್ ಮರಣದ ರಹಸ್ಯವನ್ನು ಬೆನ್ನತ್ತಿ ಹೋಗುವ ಗೂಢಚಾರಿಯೊಬ್ಬನ ಕತೆಯನ್ನು ಒಳಗೊಂಡಿರುವ ಸ್ಪೈ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

ಸುಭಾಷ್ ಚಂದ್ರ ಭೋಸ್ ಸಾವಿನ ನಿಗೂಢತೆ ಅರಸಿ ಹೊರಟ ಸ್ಪೈ: ಬಲ್ಲಾಳದೇವನ ಸರ್ಪ್ರೈಸ್ ಎಂಟ್ರಿ
ಸ್ಪೈ ಸಿನಿಮಾ
Follow us
ಮಂಜುನಾಥ ಸಿ.
|

Updated on: Jun 24, 2023 | 10:50 PM

ಚಿತ್ರರಂಗದಲ್ಲೀಗ ಇತಿಹಾಸ ಕೆದಕುವ ಸಿನಿಮಾಗಳ ಟ್ರೆಂಡ್ ಆರಂಭವಾದಂತಿದೆ. ಕನ್ನಡದಲ್ಲಿ ಉರಿಗೌಡ-ನಂಜೇಗೌಡ ಸಿನಿಮಾ ಮಾಡುವ ಯೋಜನೆ ರೂಪುಗೊಂಡು ಬಳಿಕ ಕೈ ಬಿಡಲಾಯ್ತು. ಕಾಶ್ಮೀರದಲ್ಲಿ 90 ರಲ್ಲಿ ನಡೆದ ಘಟನೆಯನ್ನು ‘ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾ ಮಾಡಲಾಯ್ತು. ಸಾವರ್ಕರ್ ಬಗೆಗೆ ಸಿನಿಮಾ ಮಾಡಲಾಗುತ್ತಿದೆ. ರಾಮ್ ಸೇತು ಬಗ್ಗೆ ಸಿನಿಮಾ ಮಾಡಲಾಗಿದೆ. ಲಾಲ್ ಬಹದ್ಧೂರ್ ಶಾಸ್ತ್ರಿ ಸಾವಿನ ಕುರಿತಾದ ಸಿನಿಮಾ ಮಾಡಲಾಗಿದೆ. ಇದೀಗ ಅದೇ ಸಾಲಿಗೆ ಸೇರಬಹುದಾದ ಮತ್ತೊಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಬಾರಿ ಸುಭಾಷ್ ಚಂದ್ರ ಬೋಸ್​ರ (Subhash Chandra Bose) ಜೀವನ ಕತೆಯ ರಹಸ್ಯವನ್ನು ಸಿನಿಮಾ ಮೂಲಕ ಹೇಳುತ್ತಿರುವುದಾಗಿ ಚಿತ್ರತಂಡ ಒಂದು ಹೇಳಿಕೊಂಡಿದ್ದು, ಸಿನಿಮಾದ ಟ್ರೈಲರ್ (Trailer) ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡಗುಡೆ ಆಗಿದೆ.

ಸುಭಾಷ್ ಚಂದ್ರ ಭೋಸ್​ರ ಮರಣ ರಹಸ್ಯ ಹುಡುಕಿ ಹೊರಡುವ ಗೂಢಚಾರಿಯ ಕತೆಯನ್ನು ಸ್ಪೈ ಹೆಸರಿನ ತೆಲುಗು ಸಿನಿಮಾ ಮಾಡಲಾಗಿದ್ದು ಕನ್ನಡ ಸೇರಿದಂತೆ ಹಲವು ಭಾಷೆಗಳಿಗೆ ಡಬ್ ಮಾಡಲಾಗಿದೆ. ಟಾಲಿವುಡ್​ನ ಜನಪ್ರಿಯ ನಟ ನಿಖಿಲ್ ಸಿದ್ದಾರ್ಥ್ ಸಿನಿಮಾದಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದು, ಸ್ಪೈ ಸಿನಿಮಾವು ಇದೇ 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಸ್ಪೈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ:ಟಾಲಿವುಡ್​​ನ ಈ ಸ್ಟಾರ್ ನಟರ ಬಳಿ ಇದೆ ಸ್ವಂತ ವಿಮಾನ; ಶ್ರೀಮಂತ ನಟರ ವಿವರ ಇಲ್ಲಿದೆ..

ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದು, ಐಶ್ವರ್ಯ ಮೆನನ್ ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್ ರೋಲ್ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ವಿಶೇಷವೆಂದರೆ ಸಿನಿಮಾದಲ್ಲಿ ನಟ ರಾಣಾ ದಗ್ಗುಬಾಟಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಾಣಾ ದಗ್ಗುಬಾಟಿಯ ದೃಶ್ಯವೊಂದನ್ನು ಟ್ರೈಲರ್​ನಲ್ಲಿ ಸಹ ತೋರಿಸಲಾಗಿದೆ.

ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಈ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಇದೇ 29ರಂದು ಸ್ಪೈ ಸಿನಿಮಾ ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್