AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಗಳಿಂದ ಮುಚ್ಚಿದ್ದ ದೇವಸ್ಥಾನ ತೆರೆಸಿದ ನಟ ನಿಖಿಲ್, ಗ್ರಾಮಸ್ಥರಿಂದ ಪುಷ್ಪವೃಷ್ಠಿ

‘ಕಾರ್ತಿಕೇಯ’, ‘ಕಾರ್ತಿಕೇಯ 2’ ಸಿನಿಮಾಗಳಲ್ಲಿ ನಟಿಸಿರುವ ತೆಲುಗಿನ ನಟ ನಿಖಿಲ್ ಇತ್ತೀಚೆಗೆ ಮಾಡಿರುವ ಕಾರ್ಯವೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಮೆಚ್ಚುಗೆ ವ್ಯಕ್ತವಾಗಿದೆ.

ವರ್ಷಗಳಿಂದ ಮುಚ್ಚಿದ್ದ ದೇವಸ್ಥಾನ ತೆರೆಸಿದ ನಟ ನಿಖಿಲ್, ಗ್ರಾಮಸ್ಥರಿಂದ ಪುಷ್ಪವೃಷ್ಠಿ
ಮಂಜುನಾಥ ಸಿ.
|

Updated on: Jun 05, 2024 | 2:32 PM

Share

‘ಕಾರ್ತಿಕೇಯ 2’, ‘18 ಪೇಜಸ್’ ಸಿನಿಮಾಗಳ ಮೂಲಕ ಹಿಟ್ ನೀಡಿರುವ ನಿಖಿಲ್ ಸಿದ್ಧಾರ್ಥ್ (Nikhil Siddharth), ಪೌರಾಣಿಕ, ಐತಿಹಾಸಿಕ ಸಿನಿಮಾಗಳ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದು, ಅಂಥಹುದೇ ಸಿನಿಮಾಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ. ಇದೀಗ ನಟ ನಿಖಿಲ್ ಮಾಡಿರುವ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ತಮ್ಮ ‘ಕಾರ್ತಿಕೇಯ’ ಸಿನಿಮಾದಲ್ಲಿ ಮಾಡಿರುವಂತೆಯೇ ಮುಚ್ಚಿದ ದೇವಾಲಯವೊಂದನ್ನು ತೆರೆಯುವ ಕಾರ್ಯವನ್ನು ನಟ ನಿಖಿಲ್ ಮಾಡಿದ್ದಾರೆ.

ಆಂಧ್ರ ಪ್ರದೇಶದ ಭಾಪಟ್ಲ ಜಿಲ್ಲೆಯ ಚಿರಾಲದ ಬಳಿಯ ಗ್ರಾಮದಲ್ಲಿ ವರ್ಷಗಳಿಂದಲೂ ದೇವಾಲಯವೊಂದು ಬಾಗಿಲು ಹಾಕಿತ್ತು. ಈ ದೇವಾಲಯವನ್ನು ಮತ್ತೆ ತೆರೆಯುವ ಕಾರ್ಯವನ್ನು ನಿಖಿಲ್ ಮಾಡಿರುವುದಲ್ಲದೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಮಾಡಿಸಿದ್ದಾರೆ. ದೇವಾಲಯವನ್ನು ಮತ್ತೆ ತೆರೆದ ನಿಖಿಲ್ ಮೇಲೆ ಆ ಊರಿನ ಗ್ರಾಮಸ್ಥರು ಹೂವು ಸುರಿದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್​ನಲ್ಲಿ ವಿಡಿಯೋ ಹಂಚಿಕೊಂಡಿರುವ ನಿಖಿಲ್, ‘ಊರಿನ ಗ್ರಾಮಸ್ಥರಿಗೆ ಶಿಕ್ಷೆಯಾಗಿ ಊರಿನ ದೇವಾಲಯವನ್ನು ಮುಚ್ಚಲಾಗಿತ್ತು. ನಾವು ಕಳೆದ ತಿಂಗಳು ದೇವಾಲಯ ತೆರೆದು ಜೀರ್ಣೋದ್ಧಾರ ಮಾಡಿಸಿದೆವು. ಈಗ ಮತ್ತೆ ಅಲ್ಲಿಗೆ ಭೇಟಿ ನೀಡಿದಾಗ ಗ್ರಾಮಸ್ಥರ ಸಂತಸ ನೋಡಿ ಖುಷಿಯಾಯ್ತು’ ಎಂದಿದ್ದಾರೆ. ವಿಡಿಯೋನಲ್ಲಿ ಗ್ರಾಮದ ಮಹಿಳೆಯರು ನಿಖಿಲ್ ನಡೆಯುತ್ತಿರುವ ಹಾದಿಗೆ ಹೂವು ಹಾಸಿ ಸ್ವಾಗತ ಕೋರುತ್ತಿರುವ ದೃಶ್ಯವಿದೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣರನ್ನು ಸಂಪರ್ಕಿಸಿಲ್ಲ ಮತ್ತು ಅವರು ನನ್ನ ಸಂಪರ್ಕದಲ್ಲಿಲ್ಲ: ನಿಖಿಲ್ ಕುಮಾರಸ್ವಾಮಿ

ನಿಖಿಲ್​ರ ಹತ್ತಿರದ ಸಂಬಂಧಿ ಮುದ್ದುಲುರಿ ಮಾಲ ಕೊಂಡಯ್ಯ ಅವರು ಚಿರಾಲ ಕ್ಷೇತ್ರದಲ್ಲಿ ಟಿಡಿಪಿ ಪಕ್ಷದ ಅಭ್ಯರ್ಥಿಯಾಗಿ ಟಿಡಿಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಅವರಿಗೆ ಟಿಕೆಟ್ ಕೊಡಿಸುವಲ್ಲಿ ನಿಖಿಲ್ ಪ್ರಯತ್ನವೂ ಇತ್ತು. ಕೊಂಡಯ್ಯ ಪರವಾಗಿ ನಿಖಿಲ್ ಚುನಾವಣೆಯಲ್ಲಿ ಸಕ್ರಿಯವಾಗಿ ಪ್ರಚಾರವನ್ನೂ ಸಹ ಮಾಡಿದ್ದರು. ಇದೀಗ ನಿನ್ನೆ ಬಂದ ಫಲಿತಾಂಶದಲ್ಲಿ ಕೊಂಡಯ್ಯ ಗೆದ್ದಿದ್ದಾರೆ. ನಿಖಿಲ್ ಸಹ ಮುಂದಿನ ದಿನಗಳಲ್ಲಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ನೀಡುವ ಸೂಚನೆಯನ್ನೂ ಸಹ ನೀಡಿದ್ದಾರೆ.

ಸಿನಿಮಾಗಳ ವಿಷಯಕ್ಕೆ ಮರಳುವುದಾದರೆ ನಿಖಿಲ್, 2006 ರಲ್ಲಿ ‘ಹೈದರಾಬಾದ್ ನವಾಬ್ಸ್’ ಸಿನಿಮಾ ಮೂಲಕ ನಾಯಕ ನಟನಾದರು. ಅದಾದ ಬಳಿಕ ನಿಖಿಲ್​ಗೆ ಹೆಸರು ತಂದುಕೊಟ್ಟ ಸಿನಿಮಾ ‘ಹ್ಯಾಪಿಡೇಸ್’. ಅದಾದ ಬಳಿಕ ಹಲವು ಸಿನಿಮಾಗಳಲ್ಲಿ ನಿಖಿಲ್ ನಾಯಕ ನಟನಾಗಿ ನಟಿಸಿದರು. ‘ಸ್ವಾಮಿ ರಾರಾ’ ಹಾಗೂ ‘ಕಾರ್ತಿಕೇಯ’ ಸಿನಿಮಾಗಳು ದೊಡ್ಡ ಹಿಟ್ ಆದವು. ಕಾಮಿಡಿ ಆಕ್ಷನ್ ಸಿನಿಮಾಗಳಲ್ಲೇ ಹೆಚ್ಚು ನಟಿಸುತ್ತಿದ್ದ ನಿಖಿಲ್, ‘ಕಾರ್ತಿಕೇಯ 2’ ಸಿನಿಮಾ ಹಿಟ್ ಆದ ಬಳಿಕ ಧಾರ್ಮಿಕ, ಪೌರಾಣಿಕ, ಐತಿಹಾಸಿಕ ಸಿನಿಮಾಗಳ ಕಡೆಗೆ ಹೊರಳಿದ್ದಾರೆ. ಇದೀಗ ‘ಸ್ವಯಂಭು’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ‘ಇಂಡಿಯನ್ ಹೌಸ್’ ಹೆಸರಿನ ಸ್ವಾತಂತ್ರ್ಯ ಹೋರಾಟದ ಕತೆಯುಳ್ಳ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್