AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟನ ಅನೈತಿಕ ಸಂಬಂಧ ಬಯಲು ಮಾಡಿದ ಹೆಂಡತಿ; ಸುದ್ದಿಗೋಷ್ಠಿಯಲ್ಲೇ ಛೀಮಾರಿ

ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಿಶಾ, ಈ ರೀತಿ ವಿಚಾರಕ್ಕೆ ಮಾಧ್ಯಮದವರನ್ನು ಎದುರುಗೊಳ್ಳುತ್ತಿರುವುದಕ್ಕೆ ಮುಜುಗರವಾಗುತ್ತಿದೆ ಎಂದಿದ್ದಾರೆ.

ಕಿರುತೆರೆ ನಟನ ಅನೈತಿಕ ಸಂಬಂಧ ಬಯಲು ಮಾಡಿದ ಹೆಂಡತಿ; ಸುದ್ದಿಗೋಷ್ಠಿಯಲ್ಲೇ ಛೀಮಾರಿ
ಕಿರುತೆರೆ ನಟನ ಅನೈತಿಕ ಸಂಬಂಧ ಬಯಲು ಮಾಡಿದ ಹೆಂಡತಿ; ಸುದ್ದಿಗೋಷ್ಠಿಯಲ್ಲೇ ಛೀಮಾರಿ
ರಾಜೇಶ್ ದುಗ್ಗುಮನೆ
| Edited By: |

Updated on: Jun 02, 2021 | 8:14 AM

Share

ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ನಟ ಕರಣ್​ ಮೆಹ್ರಾ ಕೌಟುಂಬಿಕ ಜಗಳ ಪೊಲೀಸ್​ ಠಾಣೆ ಮಟ್ಟಿಲೇರಿದೆ. ಪತ್ನಿ ನಿಶಾ ರಾವಲ್​ ನೀಡಿದ ದೂರಿನ ಆಧಾರದ ಮೇಲೆ ಕರಣ್​ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪಡೆದು ಹೊರ ಬಂದಿದ್ದ ಕರಣ್​ ತನ್ನ ವಿರುದ್ಧ ಹೆಂಡತಿ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವ ಆರೋಪ ಮಾಡಿದ್ದರು. ಇದರಲ್ಲಿ ತಪ್ಪು ಯಾರದ್ದು ಎನ್ನುವ ಚರ್ಚೆ ನಡೆಯುತ್ತಿರುವಾಗಲೇ ಪತಿ ಬಗ್ಗೆ ನಿಶಾ ಗಂಭೀರ ಆರೋಪ ಮಾಡಿದ್ದು, ಗಂಡನ ಅನೈತಿಕ ಸಂಬಂಧ ಬಿಚ್ಚಿಟ್ಟಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಿಶಾ, ‘ಈ ರೀತಿಯ ವಿಚಾರಕ್ಕೆ ಮಾಧ್ಯಮದವರನ್ನು ಎದುರುಗೊಳ್ಳುತ್ತಿರುವುದಕ್ಕೆ ಮುಜುಗರವಾಗುತ್ತಿದೆ. ನಾವಿಬ್ಬರೂ 5 ವರ್ಷ ಪ್ರೀತಿಸುತ್ತಿದ್ದೆವು. ಈಗ ಮದುವೆ ಆಗಿ 9 ವರ್ಷ ಆಗಿದೆ. ಈ ಸಮಯದಲ್ಲಿ ಸಾಕಷ್ಟು ವಿಚಾರಗಳು ನಡೆದಿವೆ. ಒಂದು ತಿಂಗಳ ಹಿಂದೆ ಕರಣ್​ ಚಂಡೀಗಢದಲ್ಲಿದ್ದರು. ಕರಣ್​ ಅನೈತಿಕ ಸಂಬಂಧ ಇಟ್ಟುಕೊಂಡ ವಿಚಾರ ಆಗ ಬಯಲಾಗಿತ್ತು. ನಮ್ಮ ವಿಚ್ಛೇದನದ ಬಗ್ಗೆ ಮಾತುಕತೆ ಆರಂಭವಾಗಿದ್ದು ಆಗಲೇ. ಸಂಬಂಧ ಹೊಂದಿರುವ ಬಗ್ಗೆ ಆತನೂ ಒಪ್ಪಿಕೊಂಡಿದ್ದಾನೆ’ ಎಂದು ಮಾಧ್ಯಮಕ್ಕೆ ನಿಶಾ ಹೇಳಿದ್ದಾರೆ.

‘ಆ ಮಹಿಳೆ ದೆಹಲಿಯವಳು. ಇಬ್ಬರ ನಡುವೆ ಪ್ರೀತಿ ಹುಟ್ಟಿದೆಯಂತೆ. ಇಬ್ಬರೂ ದೈಹಿಕವಾಗಿಯೂ ಸಂಬಂಧ ಇಟ್ಟುಕೊಂಡಿದ್ದಾರೆ. ಕರಣ್​ ಶೂಟಿಂಗ್​ಗಾಗಿ ಚಂಡೀಗಢಕ್ಕೆ ತೆರಳಿದಾಗೆಲ್ಲ ಆಕೆ ಅಲ್ಲಿಗೆ ಬರುತ್ತಾಳೆ. ಹೀಗೆ ಇಬ್ಬರ ಸಂಬಂಧ ಆರಂಭವಾಗಿದೆ’ ಎಂದು ನಿಶಾ ನೇರವಾಗಿಯೇ ಹೇಳಿದ್ದಾರೆ.

‘ಕರಣ್​ ಮತ್ತೊಂದು ಸಂಬಂಧ ಇಟ್ಟುಕೊಂಡಿರುವ ಬಗ್ಗೆ ಗೊತ್ತಾದಾಗ ನಾನು ಸಿಟ್ಟಾಗಿಲ್ಲ. ಕೂಲ್​ ಆಗಿಯೇ ಆತನ ಬಳಿ ಪ್ರಶ್ನೆ ಮಾಡಿದೆ. ಆಗ ನಿಜವಾದ ವಿಚಾರವನ್ನು ಆತ ಹೇಳಿದ. ಆತ ಕ್ಷಮೆ ಕೇಳಿ ಮೊದಲಿನಂತಾದರೆ ನಾನು ಕ್ಷಮಿಸಲು ಸಿದ್ಧಳಿದ್ದೆ. ಆದರೆ, ಆತ ಬದಲಾಗಲಿಲ್ಲ. ಆ್ಯಟಿಟ್ಯೂಡ್​ ತೋರಿಸಿದ. ನನ್ನದೇನು ತಪ್ಪು ಎಂಬಂತೆ ಮಾತನಾಡಿದ. 14 ವರ್ಷಗಳಲ್ಲಿ ಕರಣ್​ ಈ ರೀತಿ ನಡೆದುಕೊಂಡಿದ್ದು ಇದೇ ಮೊದಲೇನಲ್ಲ ಎಂದಿದ್ದಾರೆ’ ಅವರು.

‘ಕರಣ್​ ನನಗೆ ಸದಾ ಹೊಡೆಯುತ್ತಾನೆ. ನಾನು ಇಷ್ಟು ವರ್ಷ ಎಲ್ಲವನ್ನೂ ತಡೆದುಕೊಂಡಿದ್ದೆ. ಅದು ಕರಣ್​ ಮೇಲಿನ ಪ್ರೀತಿಗಾಗಿ. ಆದರೆ, ಈಗ ಏನೂ ಉಳಿದಿಲ್ಲ ಎಂದು ನಿಶಾ ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karan Mehra Arrested: ಪತ್ನಿಗೆ ಥಳಿಸಿದ ಖ್ಯಾತ ಕಿರುತೆರೆ ನಟ ಕರಣ್​ ಮೆಹ್ರಾ; ಪೊಲೀಸ್​ ಠಾಣೆ ಮೆಟ್ಟಿಲೇರಿ ಹೇಳಿದ ಕಥೆಯೇ ಬೇರೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು