AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ-ಪ್ರೇಮಗಳಿಂದ ಮನಸ್ಸು ಒಡೆದು ಪಾಠ ಕಲಿತಿದ್ದೇ ಹೆಚ್ಚು ನಿತ್ಯಾ ಮೆನನ್  

ನಿತ್ಯಾ ಮೆನನ್ ಅವರು ತಮ್ಮ 37ನೇ ವಯಸ್ಸಿನಲ್ಲಿ ಮದುವೆಯಾಗದಿರುವ ಬಗ್ಗೆ ಮಾತನಾಡಿದ್ದಾರೆ. ಪ್ರೀತಿಯಲ್ಲಿ ಹೃದಯವೇದನೆ ಅನುಭವಿಸಿದ್ದರೂ ಅದು ತಮ್ಮನ್ನು ಬಲಪಡಿಸಿದೆ ಎನ್ನುತ್ತಾರೆ. "ತಲೈವ ತಲೈವಿ" ಚಿತ್ರದ ಪ್ರಚಾರದ ವೇಳೆ ಅವರು ಈ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅವರು ಕನ್ನಡ ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಪ್ರೀತಿ-ಪ್ರೇಮಗಳಿಂದ ಮನಸ್ಸು ಒಡೆದು ಪಾಠ ಕಲಿತಿದ್ದೇ ಹೆಚ್ಚು ನಿತ್ಯಾ ಮೆನನ್  
ನಿತ್ಯಾ ಮೆನನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 25, 2025 | 7:44 AM

Share

ನಿತ್ಯಾ ಮೆನನ್ (Nitya Menen) ಅವರಿಗೆ ಈಗ 37 ವರ್ಷ ವಯಸ್ಸು. ಅವರು ಇಲ್ಲಿಯವರೆಗೆ ಮದುವೆ ಬಗ್ಗೆ ಆಲೋಚನೆ ಮಾಡಿದಂತೆ ಇಲ್ಲ. ಅವರ ಹೆಸರು ಈ ಮೊದಲು ಅನೇಕ ಸೆಲೆಬ್ರಿಟಿಗಳ ಜೊತೆ ತಳುಕು ಹಾಕಿಕೊಂಡಿತ್ತಾದರೂ ಯಾವುದೂ ವಿವಾಹದ ಹಂತಕ್ಕೆ ಹೋಗಿಲ್ಲ ಎಂದೇ ಹೇಳಬಹುದು. ಹಾಗಾದರೆ, ನಿತ್ಯಾ ಮೆನನ್  ಅವರು ವಿವಾಹ ಆಗದೆ ಇರಲು ಕಾರಣ ಏನು? ಆ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಿತ್ಯಾ ಮೆನನ್ ಅವರು ‘ತಲೈವ್ ತಲೈವಿ’ ಸಿನಿಮಾದಲ್ಲಿ  ನಟಿಸಿದ್ದಾರೆ. ಈ ವಾರ ಸಿನಿಮಾ ತೆರೆಗೆ ಬಂದಿದೆ. ಹಾಸ್ಯ ರೀತಿಯಲ್ಲಿ ಚಿತ್ರ ಮೂಡಿ ಬಂದಿದೆ. ಅವರು ತಮ್ಮ ಸಿನಿಮಾ ಪ್ರಚಾರಕ್ಕಾಗಿ ವಿವಿಧ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಇತ್ತೀಚೆಗೆ ಶೋ ಒಂದಕ್ಕೆ ಬಂದಿದ್ದರು. ಆಗ ಪ್ರೀತಿ ಬಗ್ಗೆ ಮಾತನಾಡಿದ್ದಾರೆ.

‘ನಾನು ಚಿಕ್ಕವಳಿದ್ದಾಗ ಪಾರ್ಟ್ನರ್ ಹುಡುಕೋದು ಮುಖ್ಯ ಎಂದುಕೊಂಡಿದ್ದೆ. ಆದರೆ, ವರ್ಷಗಳು ಬದಲಾದಂತೆ ನನ್ನ ಆಲೋಚನೆ ಬದಲಾಯಿತು. ನನಗೆ ಯಾರಾದರೂ ಸಿಕ್ಕರೆ ಖುಷಿ. ಸಿಗಲಿಲ್ಲ ಎಂದರೂ ಖುಷಿ. ನನಗೆ ಅದು ದುಃಖ ನೀಡುವುದಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ
Image
‘ಹರಿ ಹರ ವೀರ ಮಲ್ಲು’ ಕಲೆಕ್ಷನ್;  ಮೊದಲ ದಿನವೇ ಬಾಕ್ಸ್ ಆಫೀಸ್ ಉಡೀಸ್
Image
Exclusive: ಅಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ
Image
ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ಅಸಮಾಧಾನ ಹೊರಹಾಕಿದ ಸುಪ್ರೀಂ
Image
ಗೌತಮ್-ಭೂಮಿಕಾ ಮಗನಿಗೆ ನಾಮಕರಣ ಶಾಸ್ತ್ರ; ಇಟ್ಟ ಹೆಸರೇನು?

ಸಾಮಾನ್ಯವಾಗಿ ಹಾರ್ಟ್ ಬ್ರೇಕ್ ಆದಾಗ ಯಾರಿಗಾದರೂ ಬೇಸರ ಆಗಿಯೇ ಆಗುತ್ತದೆ. ನಿತ್ಯಾ ಮೆನನ್ ಕೂಡ ಹಾಗೆಯೇ ಹೇಳಿದ್ದಾರೆ. ‘ಪ್ರತಿ ಹಂತದಲ್ಲೂ ನನಗೆ ಹಾರ್ಟ್​ ಬ್ರೇಕ್ ಆಗಿದೆ. ಅದು ನನಗೆ  ಪ್ರತಿ ಬಾರಿಯೂ ನನಗೆ ಮನಸ್ಸು ಒಡೆದಗ ಅದು ಜನರ ಉದ್ದೇಶಗಳ ಬಗ್ಗೆ ನನಗೆ ಕಲಿಸಿತು. ನಾನು ಹುಡುಕುತ್ತಿರುವುದು ತಪ್ಪೆಂದು ಅರಿತುಕೊಳ್ಳಲು ಸಹಾಯ ಮಾಡಿತು’ ಎಂದು ನಿತ್ಯಾ ಅವರು ಹೇಳಿದರು. ಆದರೆ, ಅವರು ಎಲ್ಲಿಯೂ ಯಾರನ್ನು ಪ್ರೀತಿ ಮಾಡಿದ್ದೆ, ಯಾರು ಮೋಸ ಮಾಡಿದರು ಎಂಬಿತ್ಯಾದಿ ವಿಚಾರಗಳ ಬಗ್ಗೆ ಅವರು ಮಾತನಾಡಿಲ್ಲ. ಈ ವಿಚಾರವನ್ನು ಅವರು ಗುಟ್ಟಾಗಿಯೇ ಇಟ್ಟಿದ್ದಾರೆ ಎನ್ನಬಹುದು.

ಇದನ್ನೂ ಓದಿ: ಸಣ್ಣ ಮಕ್ಕಳಂತೆ ಮಾತನಾಡುತ್ತಾರೆ ನಿತ್ಯಾ ಮೆನನ್; ಎಷ್ಟು ಕ್ಯೂಟ್ ನೋಡಿ

ನಿತ್ಯಾ ಮೆನನ್ ನಟನೆಯ ‘ಇಡ್ಲಿ ಕಡಾಯಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಅಕ್ಟೋಬರ್​ನಲ್ಲಿ ತೆರೆಗೆ ಬರಲಿದೆ. ಈ ಇತ್ರದಲ್ಲಿ ಧನುಷ್ ನಾಯಕ. ಈ ಚಿತ್ರದಲ್ಲಿ ನಿತ್ಯಾ ಕೂಡ ನಟಿಸಿದ್ದಾರೆ. ನಿತ್ಯಾ ಅವರು ‘ಕೋಟಿಗೊಬ್ಬ 2’ ಬಳಿಕ ಕನ್ನಡಕ್ಕೆ ಬರಲಿಲ್ಲ. ಅವರು ಕನ್ನಡ ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು