AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಮಾರುಕಟ್ಟೆಯಲ್ಲಿ ‘ಸಲಾರ್​’ ಚಿತ್ರಕ್ಕೆ ಆಗುತ್ತಾ ಹಿನ್ನಡೆ? ಇಲ್ಲಿದೆ ಕಾರಣ..

‘ಸಲಾರ್​’ ಸಿನಿಮಾದಲ್ಲಿ ಟಿನು ಆನಂದ್​ ಹೊರತು ಪಡಿಸಿ ಬಾಲಿವುಡ್​ನ ಬೇರೆ ಯಾವುದೇ ಕಲಾವಿದರು ನಟಿಸಿಲ್ಲ. ಹಾಗಾಗಿ ಹಿಂದಿ ಪ್ರೇಕ್ಷಕರು ಈ ಸಿನಿಮಾ ಮೇಲೆ ಎಷ್ಟರಮಟ್ಟಿಗೆ ಆಸಕ್ತಿ ತೋರಿಸುತ್ತಾರೆ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಕಲಾವಿದರೇ ತುಂಬಿಕೊಂಡಿದ್ದಾರೆ.

ಹಿಂದಿ ಮಾರುಕಟ್ಟೆಯಲ್ಲಿ ‘ಸಲಾರ್​’ ಚಿತ್ರಕ್ಕೆ ಆಗುತ್ತಾ ಹಿನ್ನಡೆ? ಇಲ್ಲಿದೆ ಕಾರಣ..
ಪ್ರಭಾಸ್
ಮದನ್​ ಕುಮಾರ್​
|

Updated on: Dec 19, 2023 | 12:02 PM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ನಟಿಸಿರುವ ‘ಸಲಾರ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಡಿಸೆಂಬರ್​ 22ರಂದು ಈ ಚಿತ್ರ ತೆರೆಕಾಣುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ದಕ್ಷಿಣ ಭಾರತದಲ್ಲಿ ಈ ಸಿನಿಮಾ ಅಬ್ಬರಿಸಲಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಹಿಂದಿ ಭಾಷೆಯ ಪ್ರಾಬಲ್ಯ ಇರುವ ಉತ್ತರ ಭಾರತದಲ್ಲಿ ಸಲಾರ್​’ (Salaar Movie) ಸದ್ದು ಕಡಿಮೆ ಆಗಬಹುದು ಎಂಬ ಗುಮಾನಿ ಮೂಡಿದೆ. ಅದಕ್ಕೆ ಕಾರಣ ಕೂಡ ಇದೆ. ಈ ಸಿನಿಮಾದಲ್ಲಿ ಹಿಂದಿ ಚಿತ್ರರಂಗದ ಯಾವುದೇ ಸ್ಟಾರ್​ ಕಲಾವಿದರು ನಟಿಸಿಲ್ಲ. ಅಲ್ಲದೇ ‘ಡಂಕಿ’ (Dunki) ಸಿನಿಮಾದ ಪೈಪೋಟಿ ಕೂಡ ಜೋರಾಗಿ ಇರಲಿದೆ.

ಸಾಮಾನ್ಯವಾಗಿ ಪ್ಯಾನ್​ ಇಂಡಿಯಾ ಸಿನಿಮಾ ಮಾಡಿದಾಗ ಎಲ್ಲ ಭಾಷೆಯ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುವ ತಂತ್ರಗಾರಿಕೆ ನಡೆಯುತ್ತದೆ. ಉತ್ತರ ಭಾರತದ ಪ್ರೇಕ್ಷಕರನ್ನು ಸೆಳೆಯಲು ಬಾಲಿವುಡ್​ ನಟ-ನಟಿಯರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ರವೀನಾ ಟಂಡನ್​, ಸಂಜಯ್​ ದತ್​ ನಟಿಸಿದ್ದರು. ‘ಆರ್​ಆರ್​ಆರ್​’ ಸಿನಿಮಾದಲ್ಲಿ ಅಜಯ್​ ದೇವಗನ್​, ಆಲಿಯಾ ಭಟ್​ ಅಭಿನಯಿಸಿದ್ದರು. ಆದರೆ ‘ಸಲಾರ್​’ ವಿಚಾರದಲ್ಲಿ ಆ ರೀತಿ ಆಗಿಲ್ಲ.

‘ಸಲಾರ್​’ ಸಿನಿಮಾದಲ್ಲಿ ಟಿನು ಆನಂದ್​ ಹೊರತು ಪಡಿಸಿ ಬಾಲಿವುಡ್​ನ ಬೇರೆ ಯಾವುದೇ ಕಲಾವಿದರು ನಟಿಸಿಲ್ಲ. ಹಾಗಾಗಿ ಹಿಂದಿ ಪ್ರೇಕ್ಷಕರು ಈ ಸಿನಿಮಾ ಮೇಲೆ ಎಷ್ಟರಮಟ್ಟಿಗೆ ಆಸಕ್ತಿ ತೋರಿಸುತ್ತಾರೆ ಎಂಬದನ್ನು ಕಾದುನೋಡಬೇಕು. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಕಲಾವಿದರೇ ತುಂಬಿಕೊಂಡಿದ್ದಾರೆ. ಪ್ರಭಾಸ್​ ಜೊತೆ ಶ್ರುತಿ ಹಾಸನ್​, ಪೃಥ್ವಿರಾಜ್​ ಸುಕುಮಾರನ್, ಜಗಪತಿ ಬಾಬು ಮುಂತಾದವರು ನಟಿಸಿದ್ದಾರೆ.

Salaar Release Trailer: ‘ಸಲಾರ್’​ 2ನೇ ಟ್ರೇಲರ್​​ನಿಂದ ಕುತೂಹಲ ಹೆಚ್ಚಿಸಿದ ಪ್ರಶಾಂತ್​ ನೀಲ್​, ಪ್ರಭಾಸ್​

ಶಾರುಖ್​ ಖಾನ್​ ನಟನೆಯ ‘ಡಂಕಿ’ ಸಿನಿಮಾ ಡಿಸೆಂಬರ್​ 21ರಂದು ಬಿಡಗಡೆ ಆಗಲಿದೆ. ಅದರ ಮರುದಿನವೇ ‘ಸಲಾರ್​’ ತೆರೆಕಾಣಲಿದೆ. ಹಾಗಾಗಿ ಈ ಸಿನಿಮಾಗಳ ನಡುವೆ ದೊಡ್ಡ ಪೈಪೋಟಿ ಏರ್ಪಡಲಿದೆ. ‘ಡಂಕಿ’ ಸಿನಿಮಾಗೆ ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡಿದ್ದಾರೆ. ಉತ್ತರ ಭಾರತದಲ್ಲಿ ಈ ಚಿತ್ರದ ಹವಾ ಹೆಚ್ಚಿದೆ. ಶಾರುಖ್​ ಖಾನ್​ ಜೊತೆ ತಾಪ್ಸಿ ಪನ್ನು, ಬೋಮನ್​ ಇರಾನಿ, ವಿಕ್ಕಿ ಕೌಶಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು